HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...