HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...