HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...