HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...