HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...