HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...