Homeಮುಖಪುಟಮಹಿಳೆಯರು ಮದ್ಯನಿಷೇಧದ ಪರವಾಗಿ ಏಕಿದ್ದಾರೆ?

ಮಹಿಳೆಯರು ಮದ್ಯನಿಷೇಧದ ಪರವಾಗಿ ಏಕಿದ್ದಾರೆ?

- Advertisement -
- Advertisement -

ಐಐಟಿ ದೆಹಲಿಯ ಮೂವರು ಸಂಶೋಧಕರು ಮಾಡಿರುವ ಹೊಸ ಸಂಶೋಧನೆಯು ಮದ್ಯ ನಿಷೇದಧ ವಿಷಯದ ಮೇಲೆ ನೀತಿ ರಚಿಸುವವರು ಹೊಸದಾಗಿ ಯೋಚಿಸುವಂತೆ ಮಾಡಬಹುದಾಗಿದೆ. ಈ ವಿಷಯದಲ್ಲಿ ಕೇಂದ್ರ ಸರಕಾರ ಮಹಿಳೆಯರ ಬಗ್ಗೆ ಹೇಗೆ ಯೋಚಿಸಬೇಕು ಎಂಬುದನ್ನು ಈ ಅಧ್ಯಯನ ತೋರಿಸುತ್ತದೆ. ಇದು ದೇಶದಾದ್ಯಂತ ಮಹಿಳೆಯರು ಮದ್ಯನಿಷೇದವನ್ನು ಏಕೆ ಬೆಂಬಲಿಸುತ್ತಾರೆ ಎಂಬುದನ್ನು ಅರ್ಥಮಾಡಿಸಬಲ್ಲದು. ಕನಿಷ್ಠ ಮದ್ಯನಿಷೇದದ ಬಗ್ಗೆ ಹೇಗೆ ಯೋಚಿಸಬೇಕು ಎಂಬುದನ್ನಂತೂ ಕಲಿಸಿಕೊಡುತ್ತದೆ.

ಮದ್ಯನಿಷೇದಧ ಬಗ್ಗೆ ರಾಷ್ಟ್ರೀಯ ಚರ್ಚೆಯು ಎರಡು ರೀತಿಯ ಭ್ರಮೆಯ ಆಲೋಚನೆಗಳಗೆ ಬಲಿಯಾಗಿರುತ್ತದೆ. ಒಂದೆಡೆ ಸಂಪೂರ್ಣ ಮದ್ಯನಿಷೇದಧ ಬೆಂಬಲಿಗರು ಇದನ್ನು ಒಂದು ನೈತಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಪ್ರಶ್ನೆಯ ರೂಪದಲ್ಲಿ ಮಂಡಿಸುತ್ತಾರೆ. ಇನ್ನೊಂದೆಡೆ ಸರಕಾರದಿಂದ ಮದ್ಯನಿಷೇದಧ ವಿರೋಧ ಮಾಡುವ ಜನರಿದ್ದಾರೆ, ಅವರು ಇದನ್ನು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಆಧುನಿಕವಲ್ಲದ ಸಾಂಪ್ರದಾಯಿಕ ಚಿಂತನೆ ಎಂದು ಕರೆಯುತ್ತಾರೆ. ಎರಡೂ ತರ್ಕಗಳಲ್ಲಿ ಹುರುಳಿಲ್ಲ. ಮದ್ಯ ಸೇವಿಸುವುದರಿಂದ ಅಥವಾ ಸೇವಿಸದೇ ಇರುವುದರಿಂದ ಯಾರದ್ದೇ ಗುಣವು ಒಳ್ಳೆಯದು ಅಥವಾ ಕೆಟ್ಟದಾಗುವುದಿಲ್ಲ. ಹಾಗೂ ನಮ್ಮ ಸಮಾಜದಲ್ಲಿ ಒಂದಲ್ಲ ಒಂದು ಮಾದಕ ದ್ರವ್ಯ ಸೇವಿಸುವ ಪುರಾತನ ಪದ್ಧತಿಗಳು ಇದ್ದೇಇವೆ. ಮತ್ತೊಂದೆಡೆ ಪಾಶ್ಚಾತ್ಯ ದೇಶದ ಎಲ್ಲವನ್ನು ನಕಲಿಸುವುದನ್ನು ಆಧುನಿಕತೆ ಎಂದು ಕರೆಯುವುದು ಮಾನಸಿಕ ಗುಲಾಮಗಿರಿಯ ಪ್ರತೀಕವಾಗಿದೆ ಹಾಗೂ, ಸರಕಾರ ಸಿಗರೇಟ್ ಮತ್ತು ಹೆಲ್ಮೆಟ್ ಮೇಲೆ ನಿಯಂತ್ರಣದ ನಿಯಮ/ಕಾನೂನು ಮಾಡಬಹುದಾದರೆ ಮದ್ಯದ ಮೇಲೆ ಏಕೆ ಮಾಡಬಾರದು?

ಮದ್ಯದ ನಿಯಂತ್ರಣದ ಬಗ್ಗೆ ನಮಗೆ ಒಂದು ಹೊಸ ದೃಷ್ಟಿಕೋನ ತಳೆಯುವ ಅಗತ್ಯವಿದೆ. ಮದ್ಯನಿಷೇದಧ ನೈತಿಕತೆ ವರ್ಸಸ್ ವೈಯಕ್ತಿಕ ಸ್ವಾತಂತ್ರ್ಯದ ಅನವಶ್ಯಕ ಚರ್ಚೆಗಳಿಂದ ಹೊರಗೆ ಬಂದು, ಅದನ್ನು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ನ್ಯಾಯದ ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಈ ದೃಷ್ಟಿಕೋನದ ಪ್ರಕಾರ ಮದ್ಯದ ಚಲಾವಣೆಯಿಂದ ಆಗುವ ನಿಜವಾದ ಸಮಸ್ಯೆಗಳ ಬಗ್ಗೆ ಗಮನಹರಿಸಬಹುದು; ಮದ್ಯಪಾನ ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತದೆ, ಬಡವರ ಮನೆಗಳ ಆರ್ಥಿಕ ಪರಿಸ್ಥಿತಿ ಎಕ್ಕುಟ್ಟಿಹೋಗುತ್ತದೆ ಹಾಗೂ ಕುಟುಂಬಗಳು ಒಡೆದುಹೋಗುತ್ತವೆ.

ಪ್ರಶ್ನೆ ಏನೆಂದರೆ, ಮದ್ಯದ ಈ ದುಷ್ಪರಿಣಾಮಗಳನ್ನು ಎದುರಿಸಲು ಸಂಪೂರ್ಣ ಮದ್ಯ ನಿಷೇಧ ಒಂದು ಪರಿಣಾಮಕಾರಿಯಾದ ಪರಿಹಾರವೇ? ನಮ್ಮ ದೇಶದಲ್ಲಿ ಗುಜರಾತ್, ಆಂಧ್ರಪ್ರದೇಶ ಹಾಗೂ ಹರಿಯಾಣದಲ್ಲಿ ಸಂಪೂರ್ಣ ಮದ್ಯನಿಷೇಧ ಅನುಭವದಿಂದ ಗೊತ್ತಾಗಿರುವುದೇನೆಂದರೆ ಈ ನೀತಿಯಿಂದಲೂ ಅನೇಕ ದುಷ್ಪರಿಣಾಮಗಳು ಆಗುತ್ತವೆ. ಒಂದು ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವುದರಿಂದ ಏನೂ ಆಗುವುದಿಲ್ಲ; ಏಕೆಂದರೆ ಪಕ್ಕದ ರಾಜ್ಯದಿಂದ ಕಳ್ಳಸಾಗಾಣಿಕೆ ಶುರುವಾಗುತ್ತದೆ, ಕಾಳಸಂತೆ ನಡೆಸುವ ಮಾಫಿಯಾ ಹುಟ್ಟಿಕೊಳ್ಳುತ್ತದೆ. ಮದ್ಯ ಮಾರಾಟವನ್ನು ಕಾನೂನಾತ್ಮಕವಾಗಿ ನಿಷೇಧಿಸಿದಾಗ ಕಚ್ಚಾ ಸಾರಾಯಿ, ವಿಷಕಾರಿ ಮದ್ಯ ಹಾಗೂ ಇತರ ಅಮಲು ಪದಾರ್ಥಗಳ ಕಾಣಿಸಿಕೊಳ್ಳುತ್ತವೆ. ಈ ವಾದಗಳ ಕಾರಣದಿಂದ ಮದ್ಯ ನಿಷೇಧದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಒಮ್ಮತಕ್ಕೆ ಬರಲಾಗಲಿಲ್ಲ. ಸರಕಾರದ ಎಲ್ಲಕ್ಕಿಂತ ದೊಡ್ಡ ವಾದವೇನೆಂದರೆ, ನಿಷೇಧದಿಂದ ಅವರ ರಾಜಸ್ವದಲ್ಲಿ ದೊಡ್ಡ ಕಡಿತವಾಗುತ್ತದೆ ಎಂಬುದು. ದುರದೃಷ್ಟವಶಾತ್, ಮದ್ಯದ ಮಾರಾಟದ ಮೇಲೆ ವಿಧಿಸುವ ಅಬಕಾರಿ ಶುಲ್ಕವು ರಾಜ್ಯ ಸರಕಾರಗಳ ಆದಾಯದ ಅತಿದೊಡ್ಡ ಮೂಲವಾಗಿದೆ.

ಇಂತಹ ಸಂದರ್ಭದಲ್ಲಿ 2016ರಲ್ಲಿ ನಿತೀಶ್ ಕುಮಾರ್ ಸರಕಾರವು ಬಿಹಾರದಲ್ಲಿ ಸಂಪೂರ್ಣ ಮದ್ಯನಿಷೇಧ ವಿಧಿಸುವ ತೀರ್ಮಾನ ಎಲ್ಲರನ್ನು ಚಕಿತಗೊಳಿಸಿತು. ಕಳೆದ ಏಳು ವರ್ಷಗಳಿಂದ ಈ ನೀತಿಯ ಒಳ್ಳೆಯ ಮತ್ತು ಕೆಟ್ಟ ಪರಿಣಾಮಗಳ ಬಗ್ಗೆ ಸುದ್ದಿಗಳು ಬರುತ್ತಿದ್ದವು; ಆದರೆ ಇದರ ಲಾಭನಷ್ಟಗಳ ಬಗ್ಗೆ ಯಾವುದೇ ಸ್ಪಷ್ಟ ಅಭಿಪ್ರಾಯ ಕಾಣಿಸಲಿಲ್ಲ. ಆದರೆ ಬಿಹಾರ ಸರಕಾರವು ಇದನ್ನು ಸಾರಾಯಿ ಮಾಫಿಯಾದ ಪ್ರಚಾರ ಎಂದು ಕರೆದಿದೆ ಹಾಗೂ ಇದರಿಂದ ಹಿಂದೆ ಸರಿಯುವುದಿಲ್ಲ ಎಂದಿದೆ.

ಇದನ್ನೂ ಓದಿ: ಉಡುಪಿ ವಿಡಿಯೋ ಪ್ರಕರಣ: ಹಾಸ್ಟೆಲ್ ಮಕ್ಕಳ ಹುಚ್ಚಾಟವೂ, ಹಿಡನ್ ಹಿಂದುತ್ವದ ಹಿಕಮತ್ತೂ!!

ಇತ್ತೀಚಿಗೆ ಐಐಟಿಯ ದೆಹಲಿಯ ಮೂರು ಅರ್ಥಶಾಸ್ತ್ರಜ್ಞರು (ಹೌದು, ಐಐಟಿಯಲ್ಲಿ ಕೇವಲ ವಿಜ್ಞಾನ ಮತ್ತು ತಂತ್ರಜ್ಞಾನವಲ್ಲ, ಸಮಾಜಶಾಸ್ತ್ರ ಮತ್ತು ಮಾನವಶಾಸ್ತ್ರ ಇತ್ಯಾದಿ ವಿಷಯಗಳ ಬಗ್ಗೆಯೂ ಒಳ್ಳೆಯ ಸಂಶೋಧನೆ ನಡೆಯುತ್ತವೆ.) ಬಿಹಾರದಲ್ಲಿ ಮದ್ಯನಿಷೇಧ ನೀತಿಯಿಂದ ಮಹಿಳೆಯರ ಮೇಲೆ ಆದ ಪರಿಣಾಮಗಳನ್ನು ಪರಿಶೀಲಿಸಿ, ಈ ನೀತಿಯ ವಸ್ತುನಿಷ್ಠ ಮೌಲ್ಯಮಾಪನಕ್ಕೆ ದಾರಿ ತೆಗೆದಿಟ್ಟಿದ್ದಾರೆ. ಶಿಶಿರ್ ದೇಬನಾತ್, ಸೌರಭ್ ಪಾಲ್ ಹಾಗೂ ಕೋಮಲ್ ಸರೀನ್ ಅವರು ತಮ್ಮ ಸಂಶೋಧನೆಯಲ್ಲಿ ಒಂದು ದೊಡ್ಡ ಪ್ರಶ್ನೆಯನ್ನು ತಮ್ಮ ಅಧ್ಯಯನದ ಕೇಂದ್ರದಲ್ಲಿಟ್ಟುಕೊಂಡರು; ಮದ್ಯನಿಷೇಧದಿಂದ ಮಹಿಳೆಯರ ಮೇಲೆ ಆಗುವ ಹಿಂಸೆಯಲ್ಲಿ ಕಡಿತವಾಗುತ್ತದೆಯೇ? ಮೊದಲು ಇದಕ್ಕೆ ಸಂಬಂಧಿಸಿದಂತೆ ವಾದಗಳನ್ನು ಮಂಡಿಸಲಾಗಿತ್ತು ಹಾಗೂ ಅವನ್ನು ನಿರಾಕರಿಸುವ ಕೆಲಸವೂ ಆಗಿತ್ತು. ಆದರೆ ಇಲ್ಲಿಯತನಕ ಸ್ಪಷ್ಟವಾದ ಪ್ರಮಾಣಗಳು ಸಿಕ್ಕಿದ್ದಿಲ್ಲ. ಈ ಅಧ್ಯಯನಕ್ಕೆ ಈ ತಜ್ಞರು ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೆಯ ಸಹಾಯ ಪಡೆದುಕೊಂಡರು ಮತ್ತು ಈ ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೆ ಈ ವಿಷಯದ ಮೇಲೆ ದೇಶದ ಅತಿ ದೊಡ್ಡ ಹಾಗೂ ಪ್ರಮಾಣಿತ ಮಾಹಿತಿಯ ಮೂಲವಾಗಿದೆ. ಈ ಸಮೀಕ್ಷೆಯ ವಿಶೇಷವೇನೆಂದರೆ, ಮದ್ಯದ ಬಳಕೆಯನ್ನು ಅಳೆಯಲು ಸರಕಾರಿ ಅಂಕಿಅಂಶಗಳನ್ನು ಬಳಸಲಾಗುವುದಿಲ್ಲ, ಅದರ ಬದಲಿಗೆ ಮನೆಯಲ್ಲಿ ಮಹಿಳೆಯರಿಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅದೇ ರೀತಿಯಲ್ಲಿ ಮಹಿಳೆಯರ ಮೇಲಿನ ಹಿಂಸೆ ಅಥವಾ ಬಲಾತ್ಕಾರಗಳ ಬಗ್ಗೆ ಪೊಲೀಸ್ ಠಾಣೆಯ ದಾಖಲೆಗಳನ್ನು ನೋಡಲಾಗುವುದಿಲ್ಲ; ಅವುಗಳು ತಪ್ಪುದಿಕ್ಕಿಗೆ ಕರೆದೊಯ್ಯುವುದರಿಂದ, ಅದರ ಬದಲಿಗೆ ಖುದ್ದು ಮಹಿಳೆಯರಿಗೇ ಖಾಸಗಿಯಾಗಿ ಕೇಳಲಾಗುತ್ತದೆ. ದೇಶದಲ್ಲಿ ಆರೋಗ್ಯದ ಮಾಹಿತಿಯೊಂದಿಗೆ ಮಹಿಳೆಯರ ಮೇಲೆ ಆಗುತ್ತಿರುವ ಹಿಂಸೆಯ ಅಂಕಿಅಂಶಗಳಿಗೆ ಇದು ಅತ್ಯಂತ ಪ್ರಾಮಾಣಿಕ ಮೂಲವಾಗಿದೆ. ಈ ಸಮೀಕ್ಷೆ ಮೊದಲು 2005-06ರಲ್ಲಿ ನಂತರ 2015-16ರಲ್ಲಿ ಹಾಗೂ ಹೊಸದಾಗಿ 2019-20ರಲ್ಲಿ ನಡೆದಿದೆ.

ಕಾಕತಾಳೀಯವಾಗಿ ಈ ಸಮೀಕ್ಷೆಯ ಎರಡನೆಯ ಸುತ್ತು ಬಿಹಾರದಲ್ಲಿ ಮದ್ಯನಿಷೇಧ ಅನುಷ್ಠಾನಗೊಸುವುದಕ್ಕೆ ಸ್ವಲ್ಪ ಸಮಯದ ಮುಂಚೆ ಆಗಿತ್ತು. ಅಂದರೆ ಇದರ ಆಧಾರದ ಮೇಲೆ ಮದ್ಯನಿಷೇಧ ಪರಿಣಾಮವನ್ನು ಅಳೆಯಬಹುದಾಗಿದೆ. ಸಮೀಕ್ಷೆಯ ಅಂಕಿಅಂಶಗಳ ಸೂಕ್ಷ್ಮವಾದ ವಿಶ್ಲೇಷಣೆಯ ಆಧಾರದ ಮೇಲೆ ಈ ತಜ್ಞರು ತೋರಿಸಿರುವುದೇನೆಂದರೆ ಮದ್ಯನಿಷೇಧ ಜಾರಿಗೊಳಿಸಿದ ನಂತರ ಬಿಹಾರದಲ್ಲಿ (ಕುಟುಂಬದ ಮಹಿಳೆಯರ ಪ್ರಕಾರ) ಗಂಡಸರು ಸೇವಿಸುವ ಮದ್ಯದ ಪ್ರಮಾಣದಲ್ಲಿ ಭಾರಿ ಕಡಿತವಾಗಿದೆ; ಇದೇ ಅವಧಿಯಲ್ಲಿ ಇತರ ರಾಜ್ಯಗಳಲ್ಲಿ ಮದ್ಯದ ಬಳಕೆಯ ಪ್ರಮಾಣ ಹೆಚ್ಚಾಗಿತ್ತು. ಇದು ನಿರೀಕ್ಷಿತವೇ. ಇದಕ್ಕಿಂತ ಮಹತ್ವಪೂರ್ಣವಾದ ನಿಷ್ಕರ್ಷವೇನೆಂದರೆ, 2016ರ ನಂತರ ಬಿಹಾರದಲ್ಲಿ ಗಂಡಸರು ಮಹಿಳೆಯರ ಮೇಲೆ ಎಸಗುತ್ತಿದ್ದ ನಾನಾ ಪ್ರಕಾರದ ಹಿಂಸೆಯೂ ಸ್ಪಷ್ಟವಾಗಿ ಕಡಿಮೆಯಾಗಿದೆ. ಅಷ್ಟೇ ಅಲ್ಲ, ಮಹಿಳೆಯರು ಹೊರಗೆ ಹೋಗಲು, ಖರ್ಚು ಮಾಡಲು ಮುಂತಾದವುಗಳಿಗೆ ವಿಧಿಸುತ್ತಿದ್ದ ನಿರ್ಬಂಧನೆಗಳಲ್ಲೂ ಕುಸಿತ ಕಂಡುಬಂದಿದೆ. ಈ ಬದಲಾವಣೆ ಬೇರೆ ಯಾವುದೇ ಸರಕಾರಿ ನೀತಿ ಅಥವಾ ಬೇರಾವುದೇ ಕಾರಣದಿಂದ ಆಗಿರಬಹುದು ಎಂಬುದರ ಸಾಧ್ಯತೆಗಳನ್ನು ಈ ಸಂಶೋಧಕರು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತಳ್ಳಿಹಾಕಿದ್ದಾರೆ.

ಈ ಅಧ್ಯಯನವು ಮೊದಲ ಬಾರಿ ಮಹಿಳೆಯರ ಮೇಲಿನ ಹಿಂಸೆಗೆ ಮತ್ತು ಮದ್ಯಕ್ಕೆ ಸಂಬಂಧವಿದೆ ಎನ್ನುತ್ತದೆ ಹಾಗೂ ಈ ಕಾರಣಕ್ಕಾಗಿ ಮದ್ಯನಿಷೇಧದ ಬೇಡಿಕೆ ಇಡುವ ಮಹಿಳಾ ಸಂಘಟನೆಗಳು ಮತ್ತು ಜನಾಂದೋಲನಗಳ ಅನುಭವಗಳನ್ನು ದೃಢೀಕರಿಸುತ್ತದೆ. ಮದ್ಯನಿಷೇಧದ ವಿಷಯದ ಮೇಲೆ ಯೋಚಿಸುವಾಗ ನೀತಿ ರಚಿಸುವವರು ಈ ಅಂಶದ ಮೇಲೆಯೂ ಗಮನವಿರಿಸುತ್ತಾರೆ ಎಂದು ಆಶಿಸೋಣ. ಆದರೆ ಈ ಆಧ್ಯಯನ ಪ್ರಕಟವಾದ ವಾರವೇ ಸರಕಾರವು ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೆ ಮಾಡಿದ ಸಂಸ್ಥೆಯಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಾಪ್ಯುಲೇಷನ್ ಸ್ಟಡೀಸ್‌ನ ನಿರ್ದೇಶಕರನ್ನು ಅಮಾನತ್ತುಗೊಳಿಸಿದ್ದಾರೆ. ಬಲ್ಲವರು ಹೇಳುವುದೇನೆಂದರೆ, ಅವರನ್ನು ಆ ಸ್ಥಾನದಿಂದ ತೆಗೆಯಲು ಇದ್ದ ಅಸಲಿ ಕಾರಣ, ಈ ಸಮೀಕ್ಷೆಯ ಅಂಕಿಅಂಶಗಳು ಸರಕಾರಕ್ಕೆ ಇಷ್ಟವಾಗಲಿಲ್ಲ ಎಂದು. ಇಂತಹದ್ದರಲ್ಲಿ ಈ ಅಧ್ಯಯನದ ಆಧಾರದ ಮೇಲೆ ನೀತಿ ರಚಿಸಬೇಕು ಎಂದು ನಿರೀಕ್ಷೆ ಮಾಡಬಹುದೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು ಮತ್ತು ಸ್ವರಾಜ್ ಇಂಡಿಯಾದ ರಾಷ್ಟ್ರಾಧ್ಯಕ್ಷರು. ರೈತ ಸಮಸ್ಯೆಗಳನ್ನು ಒಳಗೊಂಡಂತೆ ಪ್ರಸಕ್ತ ದೇಶದ ಸಮಸ್ಯೆಗಳ ಬಗ್ಗೆ ಆಳವಾಗಿ ಅಧ್ಯಯನ ನಡೆಸಿರುವ ಯೋಗೇಂದ್ರ ಅವರು ಜನಪರ ಹೋರಾಟಗಳಲ್ಲಿ ಭಾಗಿಯಾಗುವಂತೆಯೇ ಅವುಗಳ ವಿಚಾರಗಳನ್ನು ಸಾಮಾನ್ಯರಿಗೆ ತಿಳಿಸಲು ಜನಪ್ರಿಯ ಪತ್ರಿಕೆಗಳಿಗೆ ಸಕ್ರಿಯವಾಗಿ ಲೇಖನಗಳನ್ನು ಬರೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...