Homeಅನುವಾದಿತ ಲೇಖನವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

ವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

ಮೋದಿ ಮತ್ತು ಆದಿತ್ಯನಾಥ್‌ ಅವರ ನಡುವೆ ನಡೆಯುತ್ತಿರುವ ನಾಯಕತ್ವದ ಮುಸುಕಿನ ಗುದ್ದಾಟವನ್ನು ‘ದಿ ವೈರ್‌‌’ ಜಾಲತಾಣ ಗುರುತಿಸಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಹರಡಿತ್ತು. ಆದರೆ ಗೋರಖ್‌ಪುರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಕೈತಪ್ಪಿದ ಪ್ರತಿಷ್ಠಿತ ಅಯೋಧ್ಯೆ ಕ್ಷೇತ್ರದಿಂದಾಗಿ ಆದಿತ್ಯನಾಥ್‌ ಅವರು ಹಿಂದುತ್ವದ ನಾಯಕನಾಗುವ ಮಹತ್ವಾಕಾಂಕ್ಷೆಗೆ ಹಿನ್ನಡೆಯಾಗಬಹುದು.

ಆದಿತ್ಯನಾಥ್ ಅವರು ಐದು ಬಾರಿ ಸಂಸದರಾಗಿ ಆಯ್ಕೆಯಾದ ಗೋರಖ್‌ಪುರದ ತವರು ನೆಲಕ್ಕೆ ಕಳುಹಿಸುವ ಮೂಲಕ ಅವರ ರೆಕ್ಕೆಗಳನ್ನು ಕತ್ತರಿಸಿರಬಹುದು ಎಂದು ಪಕ್ಷದ ಮೂಲಗಳೇ ಹೇಳುತ್ತವೆ.

ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅಯೋಧ್ಯೆಯ ಟಿಕೆಟ್ ನಿರಾಕರಣೆಯು ಉತ್ತರ ಪ್ರದೇಶದ ನಾಯಕನಾಗುವ ಆದಿತ್ಯನಾಥ್ ಅವರ ಆಸೆಗೂ ತಣ್ಣೀರೆರಚಬಹುದು. ಕೇಂದ್ರದ ನಾಯಕರು ಯೋಗಿ ಆದಿತ್ಯನಾಥ್‌ ಅವರನ್ನು ಗೋರಖ್‌ಪುರದ ಗಡಿಯೊಳಗೆ ಬಂಧಿಸಿದ್ದಾರೆ.

ಚುನಾವಣಾ ಋತುವಿನ ಆರಂಭದಿಂದಲೂ, ಆದಿತ್ಯನಾಥ್ ಅವರು ಅಯೋಧ್ಯೆ ಅಥವಾ ಮಥುರಾದಿಂದ ಸ್ಪರ್ಧಿಸುತ್ತಾರೆ ಎಂದು ವ್ಯಾಪಕವಾಗಿ ಊಹಿಸಲಾಗಿತ್ತು. ಅಯೋಧ್ಯೆಗೆ ಮುಖ್ಯಮಂತ್ರಿಗಳ ರಾಯಭಾರಿ ಸಂಜೀವ್ ಸಿಂಗ್ ಅವರ ಎರಡು ದಿನಗಳ ಭೇಟಿ ಈ ಊಹಾಪೋಹವನ್ನು ತೀವ್ರಗೊಳಿಸಿತ್ತು.

ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾದ ಎ.ಕೆ. ಶರ್ಮಾ ಅವರು ರಾಜ್ಯ ಸಚಿವ ಸಂಪುಟಕ್ಕೆ ಬಂದಾಗ ಆದಿತ್ಯನಾಥ್‌ಗೆ ದುಬಾರಿಯಾಗಿ ಪರಿಣಮಿಸಿದರು.

ಆದಿತ್ಯನಾಥ್‌ ಅಷ್ಟು ಮುಖ್ಯವಲ್ಲ ಎಂಬುದನ್ನು ಮೋದಿಯವರು ಅನೇಕ ಸಂದರ್ಭದಲ್ಲಿ ಸ್ಪಷ್ಟಪಡಿಸುತ್ತಿದ್ದಾರೆ. ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟನೆಗೆ ಮೋದಿ ವಾರಣಾಸಿಗೆ ಆಗಮಿಸಿದಾಗ, ಉತ್ತರ ಪ್ರದೇಶ ಮುಖ್ಯಮಂತ್ರಿಯವರ ಭಾವಚಿತ್ರವು ಪತ್ರಿಕೆಗಳಲ್ಲಿ ಪ್ರಕಟವಾದ ಪೂರ್ಣ ಪುಟದ ಸರ್ಕಾರಿ ಜಾಹೀರಾತಿಗಳಲ್ಲಿ ಕಾಣೆಯಾಗಿತ್ತು!

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಸಂದರ್ಭದಲ್ಲಿ ಆದಿತ್ಯನಾಥ್ ಅವರು ಮೋದಿಯವರ ಕಾರಿನ ಹಿಂದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದನ್ನು ನೋಡಿದ ಜನರು ಕೂಡ ದಿಗ್ಭ್ರಮೆಗೊಂಡಿದ್ದರು.

ಇದನ್ನೂ ಓದಿರಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಬಿಜೆಪಿ ಹಾಗೂ ಪ್ರಧಾನಿಯವರು ಅಯೋಧ್ಯೆಯನ್ನು ಹಿಂದುತ್ವದ ರಾಜಕೀಯ ಕೇಂದ್ರವಾಗಿ ನೋಡುತ್ತಾರೆ. ಪಕ್ಷದ ಉನ್ನತ ನಾಯಕರಲ್ಲದೆ ಬೇರೆಯವರು ಅಯೋಧ್ಯೆ ಮೇಲೆ ಹಿಡಿತ ಸಾಧಿಸುವುದಕ್ಕೆ ಬಿಡುವುದಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ದೇವಸ್ಥಾನಗಳು ಮತ್ತು ಹಿಂದುತ್ವ ರಾಜಕಾರಣದ ಇನ್ನೊಂದು ಪಟ್ಟಣವಾದ ವಾರಣಾಸಿಯಲ್ಲಿ ಮೋದಿಯವರೇ ಸಂಸದರಾಗಿದ್ದಾರೆ. ಈ ಹಿಂದೆಯೂ ಅಯೋಧ್ಯೆಯಿಂದ ಬಿಜೆಪಿಯ ಯಾವುದೇ ಪ್ರಮುಖ ನಾಯಕರು ಸ್ಪರ್ಧಿಸಿರಲಿಲ್ಲ.

ಬಿಜೆಪಿ ಅಯೋಧ್ಯೆ ಕ್ಷೇತ್ರದಲ್ಲಿ ಸೋಲುವ ಭೀತಿಯಲ್ಲಿರುವಂತೆಯೂ ಕಾಣುತ್ತಿದೆ. ಇದು ಬ್ರಾಹ್ಮಣ ಸಮುದಾಯ ಪ್ರಾಬಲ್ಯವಿರುವ ಕ್ಷೇತ್ರವಾಗಿದೆ. ಠಾಕೂರ್ ಸಮುದಾಯದ ಮುಖ್ಯಮಂತ್ರಿ ವಿರುದ್ಧ ಬ್ರಾಹ್ಮಣರು ಭ್ರಮನಿರಸನವಾಗಿದ್ದಾರೆ. ಈ ಅಪಾಯವನ್ನು ಬಿಜೆಪಿ ತೆಗೆದುಕೊಳ್ಳಲು ಸಿದ್ಧವಿಲ್ಲ.

“ಪವನ್ ಪಾಂಡೆ” ಎಂದೇ ಖ್ಯಾತರಾಗಿರುವ ಸಮಾಜವಾದಿ ಪಕ್ಷದ ತೇಜ್ ನಾರಾಯಣ ಪಾಂಡೆ ಅವರು 2012ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಯೋಧ್ಯೆಯಲ್ಲಿ ಮಣಿಸಿದ್ದರು. ಪಾಂಡೆಯವರನ್ನು ಅಯೋಧ್ಯೆಯ ಬ್ರಾಹ್ಮಣರು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದರು.

ಆದಿತ್ಯನಾಥ್ ಅವರು ಮಥುರಾದಿಂದ ಟಿಕೆಟ್ ಪಡೆಯಲಿಲ್ಲ. ಏಕೆಂದರೆ ಆದಿತ್ಯನಾಥ್‌ ಅವರಿಗೆ ಮಥುರಾದಲ್ಲಿ ಅಗಾಧ ಬೆಂಬಲ ಸಿಗುವ ಸಾಧ್ಯತೆ ಇಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿಯವರು ನಾಥ ಧಾರ್ಮಿಕ ಪಂಥಕ್ಕೆ ಸೇರಿದ್ದಾರೆ. ಮಥುರಾ ಪ್ರದೇಶದಲ್ಲಿ ಪ್ರಾಬಲ್ಯ ಹೊಂದಿರುವ ಕೃಷ್ಣನ ಅನುಯಾಯಿಗಳು ನಾಥ ಪಂಥದೊಂದಿಗೆ ಯಾವುದೇ ಧಾರ್ಮಿಕ ಸಂಬಂಧವನ್ನು ಹೊಂದಿಲ್ಲ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದರೂ ಕೇಸರಿ ಪಾಳೆಯದ ವಿರುದ್ಧ ಸ್ಥಳೀಯರಲ್ಲಿ ಭ್ರಮನಿರಸನವಿದೆ. ದೇವಸ್ಥಾನ ವಿಸ್ತರಣೆ ಹೆಸರಿನಲ್ಲಿ ಶತಮಾನಗಳಷ್ಟು ಹಳೆಯದಾದ ತಮ್ಮ ಅಂಗಡಿಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಸಣ್ಣ ವ್ಯಾಪಾರಿಗಳು ಬಿಜೆಪಿಯೊಂದಿಗೆ ಬೇಸರಗೊಂಡಿದ್ದಾರೆ ಎಂದು ಸ್ಥಳೀಯ ಪತ್ರಕರ್ತ ಅರ್ಷದ್ ಅಫ್ಜಲ್ ಖಾನ್ ಹೇಳುತ್ತಾರೆ. “ಇದು ಅವರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯವಾದ ಕಾರಣ, ಜನರು ಆಡಳಿತದ ವ್ಯವಸ್ಥೆಯ ವಿರುದ್ಧ ತಮ್ಮ ಮತ ಚಲಾಯಿಸಲು ಪ್ರೇರೇಪಿಸಿರಬಹುದು” ಎನ್ನುತ್ತಾರೆ ಖಾನ್‌.

‘ದಿ ವೈರ್‌’ ಜಾಲತಾಣದೊಂದಿಗೆ ಮಾತನಾಡಿರುವ ಬಿಜೆಪಿ ನಾಯಕ ರಾಕೇಶ್‌ ತ್ರಿಪಾಠಿ, “ರಾಜ್ಯದ ಬಿಜೆಪಿ ನಾಯಕರು ಸೀಟು ಹಂಚಿಕೆ ವಿಚಾರದಲ್ಲಿ ಪಟ್ಟು ಹಿಡಿದಿದ್ದಾರೆ. ಬಿಜೆಪಿಯ ಕೇಂದ್ರ ನಾಯಕರು ಸೀಟುಗಳು ಮತ್ತು ಟಿಕೆಟ್‌ಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ” ಎಂದು ತಿಳಿಸಿದ್ದಾರೆ.

“ಗೋರಕ್‌ಪುರದಿಂದ ಹಲವು ಬಾರಿ ಸಂಸದರಾಗಿ ಆಯ್ಕೆಯಾದ ಕಾರಣ ಪಕ್ಷವು ಗೋರಖ್‌ಪುರ ಕ್ಷೇತ್ರವನ್ನು ಮುಖ್ಯಮಂತ್ರಿಯರಿಗೆ ಆಯ್ಕೆ ಮಾಡಿದೆ” ಎಂದು ತ್ರಿಪಾಠಿ ಹೇಳುತ್ತಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ಅಯೋಧ್ಯೆಯಿಂದ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸದಿರುವುದರ ಹಿಂದೆ ಸಮಾಜಶಾಸ್ತ್ರೀಯ ಅಂಶಗಳು ಅಡಗಿದೆ ಎಂದು ರಾಜಕೀಯ ವಿಶ್ಲೇಷಣೆಗಳು ಹೇಳುತ್ತವೆ. “ಅರ್ಧಕ್ಕಿಂತ ಹೆಚ್ಚು ಮತದಾರರು ಬ್ರಾಹ್ಮಣರಿರುವ ಕ್ಷೇತ್ರದಲ್ಲಿ ಠಾಕೂರ್ ನಾಯಕರನ್ನು ಕಣಕ್ಕಿಳಿಸುವ ಅಪಾಯವನ್ನು ಬಿಜೆಪಿ ತೆಗೆದುಕೊಳ್ಳಲು ಬಯಸುವುದಿಲ್ಲ” ಎಂದು ಪತ್ರಕರ್ತ ಸಮೀರಾತ್ಮಜ್ ಮಿಶ್ರಾ ಅಭಿಪ್ರಾಯಪಡುತ್ತಾರೆ.

2012ರಲ್ಲಿ ಅಯೋಧ್ಯೆ ಕ್ಷೇತ್ರದಲ್ಲಿನ ಸೋಲಿನ ಜೊತೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಭೂ ಹಗರಣದ ಬಗ್ಗೆ ಸ್ಥಳೀಯರಲ್ಲಿ ಅಸಮಾಧಾನ ಹುಟ್ಟಿಕೊಂಡಿದೆ. ಪತ್ರಕರ್ತ ಮಿಶ್ರಾ, “ಈ ಭೂ ಖರೀದಿ ಹಗರಣವು ಕೇಸರಿ ಪಕ್ಷದ ಇಮೇಜ್‌ಗೆ ಧಕ್ಕೆ ತಂದಿದೆ” ಎನ್ನುತ್ತಾರೆ.

ಆದಿತ್ಯನಾಥ್ ಅವರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಬೇಕು ಎಂದು ಹೇಳುತ್ತಿದ್ದ ಸ್ಥಳೀಯ ಬಿಜೆಪಿ ನಾಯಕರು, ಕೇಂದ್ರದ ನಾಯಕತ್ವದ ನಿರ್ಧಾರದ ನಂತರ ಮೌನಕ್ಕೆ ಸರಿದಿದ್ದಾರೆ.

ಅಯೋಧ್ಯೆ ಮೇಯರ್ ರಿಷಿಕೇಶ್ ಉಪಾಧ್ಯಾಯ ಅವರು ‘ದಿ ವೈರ್‌’ನೊಂದಿಗೆ ಮಾತನಾಡಿ, “ಅಯೋಧ್ಯೆ ಸೀಟಿನ ಉಮೇದುವಾರಿಕೆಗೆ ನಾವು ಸಿಎಂ ಯೋಗಿ ಅವರ ಹೆಸರನ್ನು ಪ್ರಸ್ತಾಪಿಸಿದ್ದೇವೆ. ಆದರೆ ಕೇಂದ್ರದ ನಾಯಕರು ನಮಗೆ ಯಾವುದೇ ಪ್ರಾಮುಖ್ಯತೆಯನ್ನು ನೀಡಲಿಲ್ಲ” ಎಂದಿದ್ದಾರೆ.

“ತಮ್ಮ ಬೇಡಿಕೆಗಳ ಬಗ್ಗೆ ಉನ್ನತ ನಾಯಕರೊಂದಿಗೆ ವಾದಿಸಲು ರಾಜ್ಯ ನಾಯಕತ್ವಕ್ಕೆ ಸಾಕಷ್ಟು ಅಧಿಕಾರವಿಲ್ಲ” ಎನ್ನುತ್ತಾರೆ ಅಯೋಧ್ಯೆ ಮೇಯರ್‌.

“ಕೇಸರಿ ಪಕ್ಷವು ಆದಿತ್ಯನಾಥ್ ಅವರನ್ನು ಮೇಲಕ್ಕೆತ್ತುವ ಮನಸ್ಥಿತಿಯಲ್ಲಿಲ್ಲ” ಎಂದು ಹಿರಿಯ ಪತ್ರಕರ್ತರು ಹೇಳುತ್ತಾರೆ. ಅಯೋಧ್ಯೆ ಹೋರಾಟವನ್ನು ಕಣ್ಣಾರೆ ಕಂಡ ಖ್ಯಾತ ಪತ್ರಕರ್ತ ಡಾ. ಸುಮನ್ ಗುಪ್ತಾ ಪ್ರತಿಕ್ರಿಯಿಸಿ, “ಈಗಾಗಲೇ ಕಟ್ಟರ್ ಹಿಂದೂ ಸನ್ಯಾಸಿಯ ಇಮೇಜ್ ಹೊಂದಿರುವ ಯೋಗಿ ಗೆದ್ದರೆ ಅವರು ಹಿಂದುತ್ವದ ನಾಯಕರಾಗಿ ಉನ್ನತ ಮಟ್ಟಕ್ಕೇರುತ್ತಾರೆ” ಎಂದಿದ್ದಾರೆ.

“ಇದು ಅವರನ್ನು (ಯೋಗಿ ಆದಿತ್ಯನಾಥ್) ಮೋದಿ ನಾಯಕತ್ವಕ್ಕೆ ಸವಾಲು ಹಾಕುವ ರಾಷ್ಟ್ರೀಯ ನಾಯಕನನ್ನಾಗಿ ರೂಪಿಸುತ್ತದೆ. ಅಮಿತ್ ಶಾಗೆ ಸಮಾನಾಂತರ ನಾಯಕರಾಗಿಯೂ ಯೋಗಿ ನಿಲ್ಲಬಹುದು” ಎಂದು ಗುಪ್ತಾ ಹೇಳುತ್ತಾರೆ.

ಕೃಪೆ: ದಿ ವೈರ್‌ (ಅಸದ್ ರಿಜ್ವಿ)


ಇದನ್ನೂ ಓದಿರಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...