Homeಚಳವಳಿಯುವಜನರು ಗಾಂಧೀಜಿಯನ್ನೇಕೆ ತಿಳಿಯಬೇಕು?

ಯುವಜನರು ಗಾಂಧೀಜಿಯನ್ನೇಕೆ ತಿಳಿಯಬೇಕು?

- Advertisement -
- Advertisement -

-ಪ್ರೊ. ಅವಿಜಿತ್ ಪಾಠಕ್, ಸಮಾಜ ಶಾಸ್ತ್ರ ಪ್ರಾಧ್ಯಾಪಕರು, ಜೆಎನ್‌ಯು

ಸಂಗ್ರಹಿತ ಭಾವಾನುವಾದ: ನಿಖಿಲ್ ಕೋಲ್ಪೆ

ಕೃಪೆ: ದಿವೈರ್‌

ಹಿಂಸೆಯು ಮಾನ್ಯತೆ ಪಡೆದು ಸಾಮಾನ್ಯ ಎನಿಸಿರುವ ಈ ಪ್ರಪಂಚದಲ್ಲಿ ಸಾಮೂಹಿಕ ಪರಿಹಾರಕ್ಕಾಗಿ ಶ್ರಮಿಸುತ್ತಿರುವ ಎಲ್ಲರೂ ಗಾಂಧಿಯವರತ್ತ ನೋಡಬೇಕು. ಗಾಂಧಿಯವರು ಅಸಾಮಾನ್ಯ ಎನಿಸುವುದು ಅವರು ಯಶಸ್ವಿಯಾದರು ಎಂಬುದಕ್ಕಲ್ಲ ಎಂದು ನನಗನಿಸಿದ ಕ್ಷಣಗಳಿವೆ. ಬದಲಾಗಿ ಅವರು ‘ಅಸಾಧ್ಯ’ವಾದುದಕ್ಕಾಗಿ ಶ್ರಮಿಸಿದರು ಎಂಬುದಕ್ಕೆ. ಹಿಂಸೆಯ ಕಾಲದಲ್ಲಿ ಅಹಿಂಸೆಗಾಗಿ; ಅಧಿಕಾರಶಾಹಿ ಮತ್ತು ತಾಂತ್ರಿಕತೆಯ ಅಮಾನವೀಯತೆಯು ಮಾನ್ಯತೆ ಪಡೆದಿರುವ ಕಾಲದಲ್ಲಿ ಸ್ವಾವಲಂಬನೆಗಾಗಿ; ಹೊರಗಿನ ತೋರಿಕೆಯೇ ಮಾನ್ಯತೆ ಪಡೆದಿರುವ ಕಾಲದಲ್ಲಿ ಆತ್ಮವಿಮರ್ಶೆಗಾಗಿ ದುಡಿದರು ಎಂಬ ಕಾರಣಕ್ಕಾಗಿ. ಗಾಂಧಿ ‘ವಿಫಲ’ರಾದರೆಂದು ಬಹಳಷ್ಟು ಸಲ ಹೇಳಲಾಗುತ್ತದೆ. 1948ರ ಜನವರಿ 30ದಂದು ಅವರಿಗೆ ಗುಂಡಿಕ್ಕಿದಾಗ ನಾಥುರಾಂ ಗೋಡ್ಸೆ ನೀಡಿದ ಸಂದೇಶವೆಂದರೆ, ಗಾಂಧಿಯವರ ವೈಫಲ್ಯ ಅಕ್ಷಮ್ಯ ಮತ್ತು ಅದಕ್ಕಾಗಿ ಅವರನ್ನು ತಿಳಿದುಕೊಳ್ಳುವ ಬದಲು ಕೊಲ್ಲಬೇಕು ಎಂಬುದಾಗಿದೆ.

ಸಾಮಾನ್ಯವಾಗಿ ಗೋಡ್ಸೆಯ ರಾಜಕೀಯದ ಜೊತೆ ಸಂಬಂಧವಿಲ್ಲದ ನಮ್ಮಲ್ಲಿನ ಹಲವರಲ್ಲಿಯೂ ಗೋಡ್ಸೆಯ ತುಣುಕೊಂದು ಅಡಗಿದೆಯೆ? ‘ಗಾಂಧಿ ನಿಂದನೆ’ ಎಂದು ನಾನು ಕರೆಯಲಿಚ್ಛಿಸುವ ಕೃತ್ಯದಲ್ಲಿ ನಾವು ತೊಡಗಿರುವುದನ್ನು ಗಮನಿಸಿ. ಆಧುನಿಕವಾದಿಗಳು (ಗಾಂಧಿಯವರ ಅತ್ಯಂತ ನಿಕಟ ಶಿಷ್ಯ ಎನಿಸಿದ ಜವಾಹರಲಾಲ್ ನೆಹರೂ ಅವರನ್ನೂ ಈ ಗುಂಪಿನಲ್ಲಿ ಸೇರಿಸಲು ಇಚ್ಛಿಸುತ್ತೇನೆ)  ಅವರ ‘ಸರಳ’ ಆದರೂ ವಿಸ್ತೃತವಾದ ಹಿಂದ್ ಸ್ವರಾಜ್ ಎಂಬ ವಸಾಹತುವಿರೋಧಿ ಮಾರ್ಗದರ್ಶಿ ಸೂತ್ರದ ಬಗ್ಗೆ ಇರಿಸುಮುರುಸು ಹೊಂದಿರುವುದು ನಿಜ.

ಜಾತಿಪ್ರಜ್ಞೆಯ ಬೀಜಗಳನ್ನು ನಿವಾರಿಸುವಲ್ಲಿ ಗಾಂಧಿಯವರು ಯಾವುದೇ ಅರ್ಥಪೂರ್ಣ ಪಾತ್ರ ಹೊಂದಿದ್ದರು ಎಂಬುದನ್ನು ನಂಬಲು ಅಂಬೇಡ್ಕರ್‌ವಾದಿಗಳು ನಿರಾಕರಿಸಬಹುದು. ಕಮ್ಯುನಿಸ್ಟರು ಅವರ ‘ಅಹಿಂಸಾತ್ಮಕ ಸಮಾಜವಾದ’ ಕಲ್ಪನೆಯ ಕುರಿತು ಬಹಳಷ್ಟು ಸಲ ನಗುತ್ತಾರೆ. ಮಧ್ಯಯುಗದ, ಮೃದು ಹಿಂದೂ, ಪಿತೃಪ್ರಧಾನ ಗಾಂಧಿ- ನಮ್ಮ ಇತಿಹಾಸದಲ್ಲಿನ ಅಪ್ರಿಯವಾದ ಎಲ್ಲಾ ವಿಷಯಗಳಿಗೆ ಹೊಣೆ ಎಂಬ ಭಾವ ಎಷ್ಟು ಬಾರಿ ನಮ್ಮ ಆತ್ಮಸಾಕ್ಷಿಯಲ್ಲಿ ಸುಳಿದಿಲ್ಲ? ಗೋಡ್ಸೆ ಅವರನ್ನು ದೈಹಿಕವಾಗಿ ಕೊಂದ. ಅವರಿಗೆ ಸಹಾನುಭೂತಿಯಿಲ್ಲದೇ ಕಳಂಕಹಚ್ಚುವ ಕೃತ್ಯದಿಂದ ನಮ್ಮಲ್ಲನೇಕರು ಅವರ ಚೈತನ್ಯವನ್ನು ಕೊಲ್ಲಲು ಬಯಸಿದ್ದೇವೆ.

ಗಾಂಧಿಯವರ ಕುರಿತು ಒಲವಿರುವ, ಅವರನ್ನು ಆಳವಾಗಿ ಮತ್ತು ಅರ್ಥಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಬಯಸುವ  ಕ್ರಾಂತಿಕಾರಿ ಯುವಜನರನ್ನು ಹುಡುಕುವುದು ಅಷ್ಟು ಸುಲಭದ ಕೆಲಸವಲ್ಲ ಎಂಬುದರಲ್ಲಿ ಯಾವುದೇ ಅಚ್ಚರಿಯಿಲ್ಲ. ಇದು ಬದಲಾಗಬೇಕೆಂದು ನಾನು ಭಾವಿಸುತ್ತೇನೆ. ಈ ಲೇಖನದಲ್ಲಿ ಇದು ಏಕೆ ಅಗತ್ಯ-ಅದರಲ್ಲೂ ಯುವ ಜನರು ಗಾಂಧಿಯವರನ್ನು ಸ್ವಲ್ಪ ಮಟ್ಟಿನ ಗಂಭೀರತೆಯಿಂದ ತಿಳಿದುಕೊಳ್ಳುವುದು ಏಕೆ ಅಗತ್ಯ ಎಂದು ನಾನು ವಾದಿಸುತ್ತೇನೆ.

ಮೂರು ಸೂಕ್ತ ಪ್ರಶ್ನೆಗಳು

ಮೊದಲಿಗೆ ನಮ್ಮ ಕಾಲದಲ್ಲಿ ನಮ್ಮ ಬದುಕೇ ಎತ್ತುವ ಮೂರು ಪ್ರಶ್ನೆಗಳನ್ನು ನಾನು ಎತ್ತುತ್ತೇನೆ. ಮೊದಲನೆಯದಾಗಿ ನವ ಉದಾರವಾದಿ ಜಾಗತಿಕ ಬಂಡವಾಳಶಾಹಿಯ ಮಾರುಕಟ್ಟೆ ಪ್ರೇರಿತ ಚಿಂತನೆ ಮತ್ತು ಅದರ ಜವಾಬ್ದಾರಿಯಿಲ್ಲದ ಸ್ಪರ್ಧೆ- ಪ್ರೀತಿ, ಕಾಳಜಿ ಮತ್ತು ನ್ಯಾಯಪ್ರಜ್ಞೆಯಿಲ್ಲದ ಸ್ವಾರ್ಥ ತುಂಬಿದ ವ್ಯಕ್ತಿಯನ್ನು ಕೇವಲ ಒಬ್ಬ ಸದಾ ಅತೃಪ್ತನಾದ ಚಡಪಡಿಕೆಯ ಗ್ರಾಹಕನನ್ನಾಗಿ ಮಾತ್ರ ಕಾಣುವ ಅದರ ಸೂಚ್ಯವಾದ ಚಿಂತನೆಯ ಕುರಿತು ಯೋಚಿಸಿ.

ಎರಡನೆಯದಾಗಿ, ಧರ್ಮವನ್ನು ಆತ್ಮರತಿಯನ್ನಾಗಿ ಪರಿವರ್ತಿಸುವ ಮತ್ತು ನಂಬಿಕೆ, ಜೀವನಶೈಲಿ, ಸಾಂಸ್ಕೃತಿಕ ಆಚಾರಗಳ ವೈವಿಧ್ಯಕ್ಕೆ ಕುರುಡಾಗಿರುವ ಕೇಂದ್ರೀಕೃತ, ಏಕರೂಪಿ ಚಿಂತನೆಯ ಧಾರ್ಮಿಕ ರಾಷ್ಟ್ರವಾದದ ಬೆಳವಣಿಗೆಯನ್ನು ನೋಡಿ.

ಮೂರನೆಯದಾಗಿ, ನಾನು ಆತ್ಮದ ಮಿಲಿಟರೀಕರಣ ಎಂದು ಕರೆಯುವ ಮೌಲ್ಯಗಳ ವೈಭವೀಕರಣವನ್ನು ನೋಡಿ. ಇಲ್ಲಿ ಕಾಳಜಿ, ಕರುಣೆ ಮತ್ತು ಉಳಿದವರ ಮಾತುಗಳನ್ನು ತಾಳ್ಮೆಯಿಂದ ಕೇಳುವುದನ್ನು ದೌರ್ಬಲ್ಯ ಎಂದು ಪರಿಗಣಿಸಲಾಗುತ್ತದೆ. ಬದಲಾಗಿ ಅತ್ಯಂತ ಆಕ್ರಮಣಕಾರಿಯಾದ ‘ಕಠೋರ’ ನಿರ್ಧಾರಗಳನ್ನು ಆರಾಧಿಸಲಾಗುತ್ತದೆ. ಯುದ್ಧದ ಅಥವಾ ಸರ್ಜಿಕಲ್ ಸ್ಟ್ರೈಕ್‌ನಂತಹಾ ಪ್ರತಿಮೆಗಳು ನಮ್ಮ ಮನೋಭಿತ್ತಿಯಲ್ಲಿ ಸದ್ದಿಲ್ಲದೇ ಸೇರಿಬಿಟ್ಟಿವೆ.

ಆದುದರಿಂದ, ಸಾಮೂಹಿಕವಾಗಿ ಇದಕ್ಕೆ ಪರಿಹಾರ ಮತ್ತು ನಮ್ಮ ಕಾಲದ ಉನ್ನತಿಗಾಗಿ ಶ್ರಮಿಸುತ್ತಿರುವ ಎಲ್ಲರೂ ಕೆಳಗಿನ ಮೂರು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕು ಎಂದು ನಾನು ಹೇಳಿದರೆ ತಪ್ಪಾಗಲಾರದು.

1. ಮಾನಸಿಕವಾಗಿ ಮತ್ತು ಪಾರಿಸರಿಕವಾಗಿ ವಿನಾಶಕಾರಿಯಾದ ಕೊಳ್ಳುಬಾಕ ಸಂಸ್ಕೃತಿಗೆ ಅಸಹಕಾರ ತೋರಿಸಿ, ನಿಸರ್ಗ, ಪರಿಸರ ಮತ್ತು ಸಮಾಜದೊಂದಿಗೆ ಸಾಮರಸ್ಯದ ಸಂಬಂಧವನ್ನು ಹೊಂದಿರುವ ಜೀವಪ್ರೇಮಿಯಾದ, ಶಾಂತಿ ಮತ್ತು ಸರಳತೆಯೇ ಕೇಂದ್ರವಾಗಿರುವ ಚಿಂತನೆಯ ಕಡೆಗೆ ಸಾಗಬಲ್ಲ ಧೈರ್ಯವನ್ನು ತೋರುವ ವ್ಯಕ್ತಿಯನ್ನು ಮರುಕಲ್ಪಿಸಿಕೊಳ್ಳಲು ಸಾಧ್ಯವಿದೆಯೇ?

2. ಧರ್ಮವನ್ನು ಆಕ್ರಮಣಕಾರಿ ರಾಷ್ಟ್ರವಾದದ ಸಿದ್ಧಾಂತವನ್ನಾಗಿ ಕಾಣದೆ, ಜಾತ್ಯತೀತವಾದ, ಆಧ್ಯಾತ್ಮಿಕವಾದ, ಪ್ರೀತಿ ಮತ್ತು ಸಾಮರಸ್ಯದ ಭಾವನೆಯಾಗಿ ಧಾರ್ಮಿಕತೆಯನ್ನು ಕಾಣಲು ಸಾಧ್ಯವಿದೆಯೇ?

3.  ಕ್ರೌರ್ಯದಿಂದ ಕೂಡಿದ ಅಧಿಕಾರದ ತಕ್ಷಣದ ಲಾಲಸೆಗೆ ಬಲಿಬೀಳದೆ, ಅಹಿಂಸೆಯ ನೈತಿಕಶಕ್ತಿಯಾಗಿ ಧೈರ್ಯವನ್ನು ಮರುವ್ಯಾಖ್ಯಾನಿಸಲು, ಬಂಡಾಯವನ್ನು ಆತ್ಮದ ಉನ್ನತ ಮಟ್ಟಕ್ಕೆ ಒಯ್ದು, ಆ ಮೂಲಕ ಶೋಷಕನ ಹೃದಯವನ್ನು ಮುಟ್ಟಬಯಸುವ ಪ್ರತಿರೋಧದ ವಿಧಾನವನ್ನು ಕಂಡುಕೊಳ್ಳಲು ಸಾಧ್ಯವಿದೆಯೇ? ಬೇರೆ ಮಾತುಗಳಲ್ಲಿ ಹೇಳುವುದಾದರೆ ಗೆರಿಲ್ಲಾ ತಂತ್ರದಲ್ಲಿ ತರಬೇತಿ ಹೊಂದಿದ ಕ್ರಾಂತಿಕಾರಿಯಾಗುವ ಬದಲು ಸತ್ಯಾಗ್ರಹಿಯಾಗಲು ಸಾಧ್ಯವೆ?

ಗಾಂಧಿಯವರ ಅರ್ಥಪೂರ್ಣ ಅಧ್ಯಯನದಿಂದ ಈ ಮೂರು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಯುವಜನರಿಗೆ ಸಾಧ್ಯವಾದೀತು. ಅದಕ್ಕೆ ಮೊದಲು ಯಾವುದೇ ಚಿಂತಕ ಪರಿಪೂರ್ಣನಲ್ಲ; ತಪ್ಪುಗಳನ್ನು ಮಾಡುವುದು ಮಾನವ ಸಹಜ ಎಂಬ ತಿಳುವಳಿಕೆಯ ಅಗತ್ಯವಿದೆ. ಗಾಂಧಿಯವರಿಗೆ ಅವರ ತಪ್ಪುಗಳು ಗೊತ್ತಿದ್ದವು ಮತ್ತು ಅವುಗಳನ್ನು ಅವರು ಅತ್ಯಂತ ನಿರ್ಭಿಡೆಯಿಂದ ಮತ್ತು ಪಾರದರ್ಶಕತೆಯಿಂದ ಒಪ್ಪಿಕೊಂಡಿದ್ದಾರೆ ಕೂಡಾ. ನೀವು ಬಿ.ಆರ್. ಅಂಬೇಡ್ಕರ್ ಅಥವಾ ಕಾರ್ಲ್ ಮಾರ್ಕ್ಸ್ ಅಂತವರನ್ನು ಮೆಚ್ಚುತ್ತಿದ್ದರೂ ಗಾಂಧಿಯವರ ಜೊತೆ ಯಾವತ್ತೂ ಹೆಜ್ಜೆಹಾಕಲು ಸಾಧ್ಯವಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...