Homeಮುಖಪುಟಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

ಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

- Advertisement -
- Advertisement -

ಮಹಿಳಾ ಹೊರಾಟಗಾರ್ತಿಯೊಂದಿಗೆ “ನಾನು ಬಹಳ ಕೆಟ್ಟ ಮನುಷ್ಯ, ಹೇಯ್, ಮುಚ್ಚು ಬಾಯಿ ರಾಸ್ಕಲ್” ಎಂದು ಗದರುವ ಮೂಲಕ ದುರ್ವರ್ತನೆ ತೋರಿದ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೂಡಲೇ ಆ ಮಹಿಳೆಯ ಬಳಿ ಕ್ಷಮೆ ಕೇಳಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಕೋಲಾರ ತಾಲೂಕಿನ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಕೆರೆಕಟ್ಟೆ ಹೊಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿಯವರ ಮೇಲೆ ಸಚಿವರು ದರ್ಪ ಮೆರೆದಿದ್ದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಸಚಿವರು ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಾನು ಬಹಳ ಕೆಟ್ಟ ಮನುಷ್ಯ” ಎಂದು ಬೆರಳು ತೋರಿಸಿ ಹೆದರಿಸುತ್ತಾ ಸಾರ್ವಜನಿಕವಾಗಿ ಮಹಿಳೆಯೊಬ್ಬರಿಗೆ ಏಕವಚನದಲ್ಲಿ “ಹೇಯ್, ಮುಚ್ಚು ಬಾಯಿ, ರಾಸ್ಕಲ್” ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು. ಕೆಟ್ಟ ಜನರಿಗೆ, ಅದರಲ್ಲಿಯೂ ಸ್ವಘೋಷಿತ ಕೆಟ್ಟವರಿಗೆ, ಯಾವುದೇ ಅಧಿಕಾರ, ಪದವಿ ನೀಡಬಾರದು. ಮಾನಸಿಕ ಅಸ್ವಸ್ಥರು ಹೇಗೆ ಜವಾಬ್ದಾರಿಯುತ ಹುದ್ದೆ ನಿಭಾಯಿಸಲು ಅನರ್ಹರೋ ಅದೇ ರೀತಿ ಇವರೂ ಸಹ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾರೆಡ್ಡಿಯವರು ಕಿಡಿಕಾರಿದ್ದಾರೆ.

ಏನು ದುರಹಂಕಾರ! ಏನು ಉಡಾಫೆ! ಏನು ಧೈರ್ಯ! ರಾಜ್ಯದ ಕಾನೂನು ಇಲಾಖೆ ಸಚಿವ ಮಾಧುಸ್ವಾಮಿಯವರು ಸಾರ್ವಜನಿಕವಾಗಿ ವರ್ತಿಸುವುದು ಹೇಗೆ ಮತ್ತು ತಮ್ಮ ಅಸಹನೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಹೇಗೆ ಎಂದು Anger Management Counselor ಗಳಿಂದ ಸೂಕ್ತ ಪಾಠ ಮಾಡಿಸಿಕೊಂಡು ಪ್ರಮಾಣಪತ್ರ ತರುವ ತನಕ ಅವರನ್ನು ಸಂಪುಟದಿಂದ ಹೊರಗಿಡಬೇಕು. ಈಗಾಗಲೇ ಜನರು ಮನೋವೇದನೆಯೂ ಸೇರಿದಂತೆ ಹಲವು ತರಹದ ವೇದನೆ ಮತ್ತು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಅಧಿಕಾರಸ್ಥರು ಮಾತೃಹೃದಯದಿಂದ ವರ್ತಿಸದಿದ್ದರೆ ಭಾರೀ ಅಪಾಯ ಕಾದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಾನ್ ಭಾಳ ಕೆಟ್ಟ ಮನುಷ್ಯ, ಬಾಯಿ ಮುಚ್ಚೆ ರಾಸ್ಕಲ್’ ಇದು ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ಬಳಸಿದ ಪದ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿಚಾರದಲ್ಲಿ ವೀರಾವೇಷದಿಂದ ಖಂಡಿಸಿದ ಬಿಜೆಪಿಯ “ಸಭ್ಯ”ರಾರೂ ಖಂಡಿಸುತ್ತಿಲ್ಲ. ಶೋಭಾಕ್ಕನ ಬಾಯಿಗೆ ಯಾರಾದರೂ ಮೈಕ್ ಹಿಡಿಯಿರಪ್ಪ ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಆಗ್ರಹಿಸಿದ್ದಾರೆ.

ಓಟು ಕೇಳೋಕೆ ಬಂದಾಗ ಕಾಲಿಗೆ ಬೀಳ್ತಾರೆ. ಅಧಿಕಾರ ಸಿಕ್ಕಮೇಲೆ ಮತದಾರರ ಮೇಲೆಯೇ ದರ್ಪ ತೋರಿಸುತ್ತಾರೆ.
ಇಂತಹ ದುಷ್ಟ ಸಚಿವರು/ ಅಧಿಕಾರಿಗಳ ವಿರುದ್ಧ ಯುವಜನರು ದನಿ ಎತ್ತಬೇಕು. ಯುವ ರೈತ ಹೋರಾಟಗಾರ್ತಿ ನಳಿನಿಯ ಧೈರ್ಯ ಮೆಚ್ಚುವಂಥದ್ದು. ಅವರ ಜೊತೆ ನಾವಿದ್ದೇವೆ. ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ಮಾಧುಸ್ವಾಮಿಯಂತೆ ಒಬ್ಬ ಬಿಜೆಪಿಯೇತರ ಪಕ್ಷದ ನಾಯಕ ಹೀಗೆ ವರ್ತಿಸಿದ್ದರೆ ಮಾಧ್ಯಮಗಳು ಅದರಲ್ಲೂ ನ್ಯೂಸ್ ಚಾನೆಲುಗಳು ಹೇಗೆ ವರದಿ ಮಾಡುತ್ತಿದ್ದವು? ಎಂದು ಹಿರಿಯ ಪತ್ರಕರ್ತ ಮತ್ತು ಖ್ಯಾತ ಕಾರ್ಟೂನಿಷ್ಟ್‌ ಪಿ.ಮಹಮ್ಮದ್‌ ಪ್ರಶ್ನಿಸಿದ್ದಾರೆ.

ಮಾಧುಸ್ವಾಮಿ ಯವರು ಒಳ್ಳೆಯ ಮನುಷ್ಯ ಎಂದುಕ್ಕೊಂಡಿದ್ದೆವು. ನಾನು ಕೆಟ್ಟವನು ಎಂದು ಘೋಷಣೆ ಮಾಡಿಕ್ಕೊಂಡು ನಮ್ಮ ಅಭಿಪ್ರಾಯ ತಿದ್ದಿದ್ದೀರಿ ಸರ್ ಎಂದು ನ.ಲಿ ಕೃಷ್ಣರವರು ವ್ಯಂಗ್ಯವಾಡಿದ್ದಾರೆ.

ಇನ್ನು ಮಾಧುಸ್ವಾಮಿಯವರು ಕ್ಷಮೆ ಕೇಳಬೇಕು, ಇಲ್ಲವೇ ರಾಜೀನಾಮೆ ನೀಡಬೇಕಂದು ಒತ್ತಾಯಿಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.


ಇದನ್ನೂ ಓದಿ: ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...