Homeಮುಖಪುಟಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

ಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

- Advertisement -
- Advertisement -

ಮಹಿಳಾ ಹೊರಾಟಗಾರ್ತಿಯೊಂದಿಗೆ “ನಾನು ಬಹಳ ಕೆಟ್ಟ ಮನುಷ್ಯ, ಹೇಯ್, ಮುಚ್ಚು ಬಾಯಿ ರಾಸ್ಕಲ್” ಎಂದು ಗದರುವ ಮೂಲಕ ದುರ್ವರ್ತನೆ ತೋರಿದ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೂಡಲೇ ಆ ಮಹಿಳೆಯ ಬಳಿ ಕ್ಷಮೆ ಕೇಳಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಕೋಲಾರ ತಾಲೂಕಿನ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಕೆರೆಕಟ್ಟೆ ಹೊಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿಯವರ ಮೇಲೆ ಸಚಿವರು ದರ್ಪ ಮೆರೆದಿದ್ದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಸಚಿವರು ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಾನು ಬಹಳ ಕೆಟ್ಟ ಮನುಷ್ಯ” ಎಂದು ಬೆರಳು ತೋರಿಸಿ ಹೆದರಿಸುತ್ತಾ ಸಾರ್ವಜನಿಕವಾಗಿ ಮಹಿಳೆಯೊಬ್ಬರಿಗೆ ಏಕವಚನದಲ್ಲಿ “ಹೇಯ್, ಮುಚ್ಚು ಬಾಯಿ, ರಾಸ್ಕಲ್” ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು. ಕೆಟ್ಟ ಜನರಿಗೆ, ಅದರಲ್ಲಿಯೂ ಸ್ವಘೋಷಿತ ಕೆಟ್ಟವರಿಗೆ, ಯಾವುದೇ ಅಧಿಕಾರ, ಪದವಿ ನೀಡಬಾರದು. ಮಾನಸಿಕ ಅಸ್ವಸ್ಥರು ಹೇಗೆ ಜವಾಬ್ದಾರಿಯುತ ಹುದ್ದೆ ನಿಭಾಯಿಸಲು ಅನರ್ಹರೋ ಅದೇ ರೀತಿ ಇವರೂ ಸಹ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾರೆಡ್ಡಿಯವರು ಕಿಡಿಕಾರಿದ್ದಾರೆ.

ಏನು ದುರಹಂಕಾರ! ಏನು ಉಡಾಫೆ! ಏನು ಧೈರ್ಯ! ರಾಜ್ಯದ ಕಾನೂನು ಇಲಾಖೆ ಸಚಿವ ಮಾಧುಸ್ವಾಮಿಯವರು ಸಾರ್ವಜನಿಕವಾಗಿ ವರ್ತಿಸುವುದು ಹೇಗೆ ಮತ್ತು ತಮ್ಮ ಅಸಹನೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಹೇಗೆ ಎಂದು Anger Management Counselor ಗಳಿಂದ ಸೂಕ್ತ ಪಾಠ ಮಾಡಿಸಿಕೊಂಡು ಪ್ರಮಾಣಪತ್ರ ತರುವ ತನಕ ಅವರನ್ನು ಸಂಪುಟದಿಂದ ಹೊರಗಿಡಬೇಕು. ಈಗಾಗಲೇ ಜನರು ಮನೋವೇದನೆಯೂ ಸೇರಿದಂತೆ ಹಲವು ತರಹದ ವೇದನೆ ಮತ್ತು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಅಧಿಕಾರಸ್ಥರು ಮಾತೃಹೃದಯದಿಂದ ವರ್ತಿಸದಿದ್ದರೆ ಭಾರೀ ಅಪಾಯ ಕಾದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಾನ್ ಭಾಳ ಕೆಟ್ಟ ಮನುಷ್ಯ, ಬಾಯಿ ಮುಚ್ಚೆ ರಾಸ್ಕಲ್’ ಇದು ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ಬಳಸಿದ ಪದ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿಚಾರದಲ್ಲಿ ವೀರಾವೇಷದಿಂದ ಖಂಡಿಸಿದ ಬಿಜೆಪಿಯ “ಸಭ್ಯ”ರಾರೂ ಖಂಡಿಸುತ್ತಿಲ್ಲ. ಶೋಭಾಕ್ಕನ ಬಾಯಿಗೆ ಯಾರಾದರೂ ಮೈಕ್ ಹಿಡಿಯಿರಪ್ಪ ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಆಗ್ರಹಿಸಿದ್ದಾರೆ.

ಓಟು ಕೇಳೋಕೆ ಬಂದಾಗ ಕಾಲಿಗೆ ಬೀಳ್ತಾರೆ. ಅಧಿಕಾರ ಸಿಕ್ಕಮೇಲೆ ಮತದಾರರ ಮೇಲೆಯೇ ದರ್ಪ ತೋರಿಸುತ್ತಾರೆ.
ಇಂತಹ ದುಷ್ಟ ಸಚಿವರು/ ಅಧಿಕಾರಿಗಳ ವಿರುದ್ಧ ಯುವಜನರು ದನಿ ಎತ್ತಬೇಕು. ಯುವ ರೈತ ಹೋರಾಟಗಾರ್ತಿ ನಳಿನಿಯ ಧೈರ್ಯ ಮೆಚ್ಚುವಂಥದ್ದು. ಅವರ ಜೊತೆ ನಾವಿದ್ದೇವೆ. ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ಮಾಧುಸ್ವಾಮಿಯಂತೆ ಒಬ್ಬ ಬಿಜೆಪಿಯೇತರ ಪಕ್ಷದ ನಾಯಕ ಹೀಗೆ ವರ್ತಿಸಿದ್ದರೆ ಮಾಧ್ಯಮಗಳು ಅದರಲ್ಲೂ ನ್ಯೂಸ್ ಚಾನೆಲುಗಳು ಹೇಗೆ ವರದಿ ಮಾಡುತ್ತಿದ್ದವು? ಎಂದು ಹಿರಿಯ ಪತ್ರಕರ್ತ ಮತ್ತು ಖ್ಯಾತ ಕಾರ್ಟೂನಿಷ್ಟ್‌ ಪಿ.ಮಹಮ್ಮದ್‌ ಪ್ರಶ್ನಿಸಿದ್ದಾರೆ.

ಮಾಧುಸ್ವಾಮಿ ಯವರು ಒಳ್ಳೆಯ ಮನುಷ್ಯ ಎಂದುಕ್ಕೊಂಡಿದ್ದೆವು. ನಾನು ಕೆಟ್ಟವನು ಎಂದು ಘೋಷಣೆ ಮಾಡಿಕ್ಕೊಂಡು ನಮ್ಮ ಅಭಿಪ್ರಾಯ ತಿದ್ದಿದ್ದೀರಿ ಸರ್ ಎಂದು ನ.ಲಿ ಕೃಷ್ಣರವರು ವ್ಯಂಗ್ಯವಾಡಿದ್ದಾರೆ.

ಇನ್ನು ಮಾಧುಸ್ವಾಮಿಯವರು ಕ್ಷಮೆ ಕೇಳಬೇಕು, ಇಲ್ಲವೇ ರಾಜೀನಾಮೆ ನೀಡಬೇಕಂದು ಒತ್ತಾಯಿಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.


ಇದನ್ನೂ ಓದಿ: ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...