Homeಮುಖಪುಟಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

ಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

- Advertisement -
- Advertisement -

ಮಹಿಳಾ ಹೊರಾಟಗಾರ್ತಿಯೊಂದಿಗೆ “ನಾನು ಬಹಳ ಕೆಟ್ಟ ಮನುಷ್ಯ, ಹೇಯ್, ಮುಚ್ಚು ಬಾಯಿ ರಾಸ್ಕಲ್” ಎಂದು ಗದರುವ ಮೂಲಕ ದುರ್ವರ್ತನೆ ತೋರಿದ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೂಡಲೇ ಆ ಮಹಿಳೆಯ ಬಳಿ ಕ್ಷಮೆ ಕೇಳಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಕೋಲಾರ ತಾಲೂಕಿನ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಕೆರೆಕಟ್ಟೆ ಹೊಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿಯವರ ಮೇಲೆ ಸಚಿವರು ದರ್ಪ ಮೆರೆದಿದ್ದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಸಚಿವರು ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಾನು ಬಹಳ ಕೆಟ್ಟ ಮನುಷ್ಯ” ಎಂದು ಬೆರಳು ತೋರಿಸಿ ಹೆದರಿಸುತ್ತಾ ಸಾರ್ವಜನಿಕವಾಗಿ ಮಹಿಳೆಯೊಬ್ಬರಿಗೆ ಏಕವಚನದಲ್ಲಿ “ಹೇಯ್, ಮುಚ್ಚು ಬಾಯಿ, ರಾಸ್ಕಲ್” ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು. ಕೆಟ್ಟ ಜನರಿಗೆ, ಅದರಲ್ಲಿಯೂ ಸ್ವಘೋಷಿತ ಕೆಟ್ಟವರಿಗೆ, ಯಾವುದೇ ಅಧಿಕಾರ, ಪದವಿ ನೀಡಬಾರದು. ಮಾನಸಿಕ ಅಸ್ವಸ್ಥರು ಹೇಗೆ ಜವಾಬ್ದಾರಿಯುತ ಹುದ್ದೆ ನಿಭಾಯಿಸಲು ಅನರ್ಹರೋ ಅದೇ ರೀತಿ ಇವರೂ ಸಹ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾರೆಡ್ಡಿಯವರು ಕಿಡಿಕಾರಿದ್ದಾರೆ.

ಏನು ದುರಹಂಕಾರ! ಏನು ಉಡಾಫೆ! ಏನು ಧೈರ್ಯ! ರಾಜ್ಯದ ಕಾನೂನು ಇಲಾಖೆ ಸಚಿವ ಮಾಧುಸ್ವಾಮಿಯವರು ಸಾರ್ವಜನಿಕವಾಗಿ ವರ್ತಿಸುವುದು ಹೇಗೆ ಮತ್ತು ತಮ್ಮ ಅಸಹನೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಹೇಗೆ ಎಂದು Anger Management Counselor ಗಳಿಂದ ಸೂಕ್ತ ಪಾಠ ಮಾಡಿಸಿಕೊಂಡು ಪ್ರಮಾಣಪತ್ರ ತರುವ ತನಕ ಅವರನ್ನು ಸಂಪುಟದಿಂದ ಹೊರಗಿಡಬೇಕು. ಈಗಾಗಲೇ ಜನರು ಮನೋವೇದನೆಯೂ ಸೇರಿದಂತೆ ಹಲವು ತರಹದ ವೇದನೆ ಮತ್ತು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಅಧಿಕಾರಸ್ಥರು ಮಾತೃಹೃದಯದಿಂದ ವರ್ತಿಸದಿದ್ದರೆ ಭಾರೀ ಅಪಾಯ ಕಾದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಾನ್ ಭಾಳ ಕೆಟ್ಟ ಮನುಷ್ಯ, ಬಾಯಿ ಮುಚ್ಚೆ ರಾಸ್ಕಲ್’ ಇದು ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ಬಳಸಿದ ಪದ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿಚಾರದಲ್ಲಿ ವೀರಾವೇಷದಿಂದ ಖಂಡಿಸಿದ ಬಿಜೆಪಿಯ “ಸಭ್ಯ”ರಾರೂ ಖಂಡಿಸುತ್ತಿಲ್ಲ. ಶೋಭಾಕ್ಕನ ಬಾಯಿಗೆ ಯಾರಾದರೂ ಮೈಕ್ ಹಿಡಿಯಿರಪ್ಪ ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಆಗ್ರಹಿಸಿದ್ದಾರೆ.

ಓಟು ಕೇಳೋಕೆ ಬಂದಾಗ ಕಾಲಿಗೆ ಬೀಳ್ತಾರೆ. ಅಧಿಕಾರ ಸಿಕ್ಕಮೇಲೆ ಮತದಾರರ ಮೇಲೆಯೇ ದರ್ಪ ತೋರಿಸುತ್ತಾರೆ.
ಇಂತಹ ದುಷ್ಟ ಸಚಿವರು/ ಅಧಿಕಾರಿಗಳ ವಿರುದ್ಧ ಯುವಜನರು ದನಿ ಎತ್ತಬೇಕು. ಯುವ ರೈತ ಹೋರಾಟಗಾರ್ತಿ ನಳಿನಿಯ ಧೈರ್ಯ ಮೆಚ್ಚುವಂಥದ್ದು. ಅವರ ಜೊತೆ ನಾವಿದ್ದೇವೆ. ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ಮಾಧುಸ್ವಾಮಿಯಂತೆ ಒಬ್ಬ ಬಿಜೆಪಿಯೇತರ ಪಕ್ಷದ ನಾಯಕ ಹೀಗೆ ವರ್ತಿಸಿದ್ದರೆ ಮಾಧ್ಯಮಗಳು ಅದರಲ್ಲೂ ನ್ಯೂಸ್ ಚಾನೆಲುಗಳು ಹೇಗೆ ವರದಿ ಮಾಡುತ್ತಿದ್ದವು? ಎಂದು ಹಿರಿಯ ಪತ್ರಕರ್ತ ಮತ್ತು ಖ್ಯಾತ ಕಾರ್ಟೂನಿಷ್ಟ್‌ ಪಿ.ಮಹಮ್ಮದ್‌ ಪ್ರಶ್ನಿಸಿದ್ದಾರೆ.

ಮಾಧುಸ್ವಾಮಿ ಯವರು ಒಳ್ಳೆಯ ಮನುಷ್ಯ ಎಂದುಕ್ಕೊಂಡಿದ್ದೆವು. ನಾನು ಕೆಟ್ಟವನು ಎಂದು ಘೋಷಣೆ ಮಾಡಿಕ್ಕೊಂಡು ನಮ್ಮ ಅಭಿಪ್ರಾಯ ತಿದ್ದಿದ್ದೀರಿ ಸರ್ ಎಂದು ನ.ಲಿ ಕೃಷ್ಣರವರು ವ್ಯಂಗ್ಯವಾಡಿದ್ದಾರೆ.

ಇನ್ನು ಮಾಧುಸ್ವಾಮಿಯವರು ಕ್ಷಮೆ ಕೇಳಬೇಕು, ಇಲ್ಲವೇ ರಾಜೀನಾಮೆ ನೀಡಬೇಕಂದು ಒತ್ತಾಯಿಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.


ಇದನ್ನೂ ಓದಿ: ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...