Homeಮುಖಪುಟಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

ಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

- Advertisement -
- Advertisement -

ಮಹಿಳಾ ಹೊರಾಟಗಾರ್ತಿಯೊಂದಿಗೆ “ನಾನು ಬಹಳ ಕೆಟ್ಟ ಮನುಷ್ಯ, ಹೇಯ್, ಮುಚ್ಚು ಬಾಯಿ ರಾಸ್ಕಲ್” ಎಂದು ಗದರುವ ಮೂಲಕ ದುರ್ವರ್ತನೆ ತೋರಿದ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೂಡಲೇ ಆ ಮಹಿಳೆಯ ಬಳಿ ಕ್ಷಮೆ ಕೇಳಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಕೋಲಾರ ತಾಲೂಕಿನ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಕೆರೆಕಟ್ಟೆ ಹೊಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿಯವರ ಮೇಲೆ ಸಚಿವರು ದರ್ಪ ಮೆರೆದಿದ್ದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಸಚಿವರು ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಾನು ಬಹಳ ಕೆಟ್ಟ ಮನುಷ್ಯ” ಎಂದು ಬೆರಳು ತೋರಿಸಿ ಹೆದರಿಸುತ್ತಾ ಸಾರ್ವಜನಿಕವಾಗಿ ಮಹಿಳೆಯೊಬ್ಬರಿಗೆ ಏಕವಚನದಲ್ಲಿ “ಹೇಯ್, ಮುಚ್ಚು ಬಾಯಿ, ರಾಸ್ಕಲ್” ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು. ಕೆಟ್ಟ ಜನರಿಗೆ, ಅದರಲ್ಲಿಯೂ ಸ್ವಘೋಷಿತ ಕೆಟ್ಟವರಿಗೆ, ಯಾವುದೇ ಅಧಿಕಾರ, ಪದವಿ ನೀಡಬಾರದು. ಮಾನಸಿಕ ಅಸ್ವಸ್ಥರು ಹೇಗೆ ಜವಾಬ್ದಾರಿಯುತ ಹುದ್ದೆ ನಿಭಾಯಿಸಲು ಅನರ್ಹರೋ ಅದೇ ರೀತಿ ಇವರೂ ಸಹ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾರೆಡ್ಡಿಯವರು ಕಿಡಿಕಾರಿದ್ದಾರೆ.

ಏನು ದುರಹಂಕಾರ! ಏನು ಉಡಾಫೆ! ಏನು ಧೈರ್ಯ! ರಾಜ್ಯದ ಕಾನೂನು ಇಲಾಖೆ ಸಚಿವ ಮಾಧುಸ್ವಾಮಿಯವರು ಸಾರ್ವಜನಿಕವಾಗಿ ವರ್ತಿಸುವುದು ಹೇಗೆ ಮತ್ತು ತಮ್ಮ ಅಸಹನೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಹೇಗೆ ಎಂದು Anger Management Counselor ಗಳಿಂದ ಸೂಕ್ತ ಪಾಠ ಮಾಡಿಸಿಕೊಂಡು ಪ್ರಮಾಣಪತ್ರ ತರುವ ತನಕ ಅವರನ್ನು ಸಂಪುಟದಿಂದ ಹೊರಗಿಡಬೇಕು. ಈಗಾಗಲೇ ಜನರು ಮನೋವೇದನೆಯೂ ಸೇರಿದಂತೆ ಹಲವು ತರಹದ ವೇದನೆ ಮತ್ತು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಅಧಿಕಾರಸ್ಥರು ಮಾತೃಹೃದಯದಿಂದ ವರ್ತಿಸದಿದ್ದರೆ ಭಾರೀ ಅಪಾಯ ಕಾದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಾನ್ ಭಾಳ ಕೆಟ್ಟ ಮನುಷ್ಯ, ಬಾಯಿ ಮುಚ್ಚೆ ರಾಸ್ಕಲ್’ ಇದು ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ಬಳಸಿದ ಪದ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿಚಾರದಲ್ಲಿ ವೀರಾವೇಷದಿಂದ ಖಂಡಿಸಿದ ಬಿಜೆಪಿಯ “ಸಭ್ಯ”ರಾರೂ ಖಂಡಿಸುತ್ತಿಲ್ಲ. ಶೋಭಾಕ್ಕನ ಬಾಯಿಗೆ ಯಾರಾದರೂ ಮೈಕ್ ಹಿಡಿಯಿರಪ್ಪ ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಆಗ್ರಹಿಸಿದ್ದಾರೆ.

ಓಟು ಕೇಳೋಕೆ ಬಂದಾಗ ಕಾಲಿಗೆ ಬೀಳ್ತಾರೆ. ಅಧಿಕಾರ ಸಿಕ್ಕಮೇಲೆ ಮತದಾರರ ಮೇಲೆಯೇ ದರ್ಪ ತೋರಿಸುತ್ತಾರೆ.
ಇಂತಹ ದುಷ್ಟ ಸಚಿವರು/ ಅಧಿಕಾರಿಗಳ ವಿರುದ್ಧ ಯುವಜನರು ದನಿ ಎತ್ತಬೇಕು. ಯುವ ರೈತ ಹೋರಾಟಗಾರ್ತಿ ನಳಿನಿಯ ಧೈರ್ಯ ಮೆಚ್ಚುವಂಥದ್ದು. ಅವರ ಜೊತೆ ನಾವಿದ್ದೇವೆ. ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ಮಾಧುಸ್ವಾಮಿಯಂತೆ ಒಬ್ಬ ಬಿಜೆಪಿಯೇತರ ಪಕ್ಷದ ನಾಯಕ ಹೀಗೆ ವರ್ತಿಸಿದ್ದರೆ ಮಾಧ್ಯಮಗಳು ಅದರಲ್ಲೂ ನ್ಯೂಸ್ ಚಾನೆಲುಗಳು ಹೇಗೆ ವರದಿ ಮಾಡುತ್ತಿದ್ದವು? ಎಂದು ಹಿರಿಯ ಪತ್ರಕರ್ತ ಮತ್ತು ಖ್ಯಾತ ಕಾರ್ಟೂನಿಷ್ಟ್‌ ಪಿ.ಮಹಮ್ಮದ್‌ ಪ್ರಶ್ನಿಸಿದ್ದಾರೆ.

ಮಾಧುಸ್ವಾಮಿ ಯವರು ಒಳ್ಳೆಯ ಮನುಷ್ಯ ಎಂದುಕ್ಕೊಂಡಿದ್ದೆವು. ನಾನು ಕೆಟ್ಟವನು ಎಂದು ಘೋಷಣೆ ಮಾಡಿಕ್ಕೊಂಡು ನಮ್ಮ ಅಭಿಪ್ರಾಯ ತಿದ್ದಿದ್ದೀರಿ ಸರ್ ಎಂದು ನ.ಲಿ ಕೃಷ್ಣರವರು ವ್ಯಂಗ್ಯವಾಡಿದ್ದಾರೆ.

ಇನ್ನು ಮಾಧುಸ್ವಾಮಿಯವರು ಕ್ಷಮೆ ಕೇಳಬೇಕು, ಇಲ್ಲವೇ ರಾಜೀನಾಮೆ ನೀಡಬೇಕಂದು ಒತ್ತಾಯಿಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.


ಇದನ್ನೂ ಓದಿ: ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...