Homeಮುಖಪುಟಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

ಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

- Advertisement -
- Advertisement -

ಮಹಿಳಾ ಹೊರಾಟಗಾರ್ತಿಯೊಂದಿಗೆ “ನಾನು ಬಹಳ ಕೆಟ್ಟ ಮನುಷ್ಯ, ಹೇಯ್, ಮುಚ್ಚು ಬಾಯಿ ರಾಸ್ಕಲ್” ಎಂದು ಗದರುವ ಮೂಲಕ ದುರ್ವರ್ತನೆ ತೋರಿದ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೂಡಲೇ ಆ ಮಹಿಳೆಯ ಬಳಿ ಕ್ಷಮೆ ಕೇಳಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಕೋಲಾರ ತಾಲೂಕಿನ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಕೆರೆಕಟ್ಟೆ ಹೊಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿಯವರ ಮೇಲೆ ಸಚಿವರು ದರ್ಪ ಮೆರೆದಿದ್ದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಸಚಿವರು ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಾನು ಬಹಳ ಕೆಟ್ಟ ಮನುಷ್ಯ” ಎಂದು ಬೆರಳು ತೋರಿಸಿ ಹೆದರಿಸುತ್ತಾ ಸಾರ್ವಜನಿಕವಾಗಿ ಮಹಿಳೆಯೊಬ್ಬರಿಗೆ ಏಕವಚನದಲ್ಲಿ “ಹೇಯ್, ಮುಚ್ಚು ಬಾಯಿ, ರಾಸ್ಕಲ್” ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು. ಕೆಟ್ಟ ಜನರಿಗೆ, ಅದರಲ್ಲಿಯೂ ಸ್ವಘೋಷಿತ ಕೆಟ್ಟವರಿಗೆ, ಯಾವುದೇ ಅಧಿಕಾರ, ಪದವಿ ನೀಡಬಾರದು. ಮಾನಸಿಕ ಅಸ್ವಸ್ಥರು ಹೇಗೆ ಜವಾಬ್ದಾರಿಯುತ ಹುದ್ದೆ ನಿಭಾಯಿಸಲು ಅನರ್ಹರೋ ಅದೇ ರೀತಿ ಇವರೂ ಸಹ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾರೆಡ್ಡಿಯವರು ಕಿಡಿಕಾರಿದ್ದಾರೆ.

ಏನು ದುರಹಂಕಾರ! ಏನು ಉಡಾಫೆ! ಏನು ಧೈರ್ಯ! ರಾಜ್ಯದ ಕಾನೂನು ಇಲಾಖೆ ಸಚಿವ ಮಾಧುಸ್ವಾಮಿಯವರು ಸಾರ್ವಜನಿಕವಾಗಿ ವರ್ತಿಸುವುದು ಹೇಗೆ ಮತ್ತು ತಮ್ಮ ಅಸಹನೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಹೇಗೆ ಎಂದು Anger Management Counselor ಗಳಿಂದ ಸೂಕ್ತ ಪಾಠ ಮಾಡಿಸಿಕೊಂಡು ಪ್ರಮಾಣಪತ್ರ ತರುವ ತನಕ ಅವರನ್ನು ಸಂಪುಟದಿಂದ ಹೊರಗಿಡಬೇಕು. ಈಗಾಗಲೇ ಜನರು ಮನೋವೇದನೆಯೂ ಸೇರಿದಂತೆ ಹಲವು ತರಹದ ವೇದನೆ ಮತ್ತು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಅಧಿಕಾರಸ್ಥರು ಮಾತೃಹೃದಯದಿಂದ ವರ್ತಿಸದಿದ್ದರೆ ಭಾರೀ ಅಪಾಯ ಕಾದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಾನ್ ಭಾಳ ಕೆಟ್ಟ ಮನುಷ್ಯ, ಬಾಯಿ ಮುಚ್ಚೆ ರಾಸ್ಕಲ್’ ಇದು ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ಬಳಸಿದ ಪದ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿಚಾರದಲ್ಲಿ ವೀರಾವೇಷದಿಂದ ಖಂಡಿಸಿದ ಬಿಜೆಪಿಯ “ಸಭ್ಯ”ರಾರೂ ಖಂಡಿಸುತ್ತಿಲ್ಲ. ಶೋಭಾಕ್ಕನ ಬಾಯಿಗೆ ಯಾರಾದರೂ ಮೈಕ್ ಹಿಡಿಯಿರಪ್ಪ ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಆಗ್ರಹಿಸಿದ್ದಾರೆ.

ಓಟು ಕೇಳೋಕೆ ಬಂದಾಗ ಕಾಲಿಗೆ ಬೀಳ್ತಾರೆ. ಅಧಿಕಾರ ಸಿಕ್ಕಮೇಲೆ ಮತದಾರರ ಮೇಲೆಯೇ ದರ್ಪ ತೋರಿಸುತ್ತಾರೆ.
ಇಂತಹ ದುಷ್ಟ ಸಚಿವರು/ ಅಧಿಕಾರಿಗಳ ವಿರುದ್ಧ ಯುವಜನರು ದನಿ ಎತ್ತಬೇಕು. ಯುವ ರೈತ ಹೋರಾಟಗಾರ್ತಿ ನಳಿನಿಯ ಧೈರ್ಯ ಮೆಚ್ಚುವಂಥದ್ದು. ಅವರ ಜೊತೆ ನಾವಿದ್ದೇವೆ. ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ಮಾಧುಸ್ವಾಮಿಯಂತೆ ಒಬ್ಬ ಬಿಜೆಪಿಯೇತರ ಪಕ್ಷದ ನಾಯಕ ಹೀಗೆ ವರ್ತಿಸಿದ್ದರೆ ಮಾಧ್ಯಮಗಳು ಅದರಲ್ಲೂ ನ್ಯೂಸ್ ಚಾನೆಲುಗಳು ಹೇಗೆ ವರದಿ ಮಾಡುತ್ತಿದ್ದವು? ಎಂದು ಹಿರಿಯ ಪತ್ರಕರ್ತ ಮತ್ತು ಖ್ಯಾತ ಕಾರ್ಟೂನಿಷ್ಟ್‌ ಪಿ.ಮಹಮ್ಮದ್‌ ಪ್ರಶ್ನಿಸಿದ್ದಾರೆ.

ಮಾಧುಸ್ವಾಮಿ ಯವರು ಒಳ್ಳೆಯ ಮನುಷ್ಯ ಎಂದುಕ್ಕೊಂಡಿದ್ದೆವು. ನಾನು ಕೆಟ್ಟವನು ಎಂದು ಘೋಷಣೆ ಮಾಡಿಕ್ಕೊಂಡು ನಮ್ಮ ಅಭಿಪ್ರಾಯ ತಿದ್ದಿದ್ದೀರಿ ಸರ್ ಎಂದು ನ.ಲಿ ಕೃಷ್ಣರವರು ವ್ಯಂಗ್ಯವಾಡಿದ್ದಾರೆ.

ಇನ್ನು ಮಾಧುಸ್ವಾಮಿಯವರು ಕ್ಷಮೆ ಕೇಳಬೇಕು, ಇಲ್ಲವೇ ರಾಜೀನಾಮೆ ನೀಡಬೇಕಂದು ಒತ್ತಾಯಿಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.


ಇದನ್ನೂ ಓದಿ: ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...