Homeಮುಖಪುಟಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

ಸಚಿವ ಮಾಧುಸ್ವಾಮಿ ದುರ್ವರ್ತನೆಗೆ ವ್ಯಾಪಕ ಖಂಡನೆ: ಕ್ಷಮೆಯಾಚನೆಗೆ ಪಟ್ಟು

- Advertisement -
- Advertisement -

ಮಹಿಳಾ ಹೊರಾಟಗಾರ್ತಿಯೊಂದಿಗೆ “ನಾನು ಬಹಳ ಕೆಟ್ಟ ಮನುಷ್ಯ, ಹೇಯ್, ಮುಚ್ಚು ಬಾಯಿ ರಾಸ್ಕಲ್” ಎಂದು ಗದರುವ ಮೂಲಕ ದುರ್ವರ್ತನೆ ತೋರಿದ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಕೂಡಲೇ ಆ ಮಹಿಳೆಯ ಬಳಿ ಕ್ಷಮೆ ಕೇಳಬೇಕು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಕೋಲಾರ ತಾಲೂಕಿನ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಕೆರೆಕಟ್ಟೆ ಹೊಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿಯವರ ಮೇಲೆ ಸಚಿವರು ದರ್ಪ ಮೆರೆದಿದ್ದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಯತ್ನಿಸಿದ ರೈತ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಸಚಿವ ಮಾಧುಸ್ವಾಮಿ‌ ವಿಡಿಯೋ ವೈರಲ್ ಆಗಿದ್ದು ನಾಗರೀಕರು ಛೀಮಾರಿ ಹಾಕುತ್ತಿದ್ದಾರೆ#NaanuGauri #madhuswamy #kolara #muniraju

Posted by Naanu Gauri on Wednesday, May 20, 2020

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಸಚಿವರು ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಾನು ಬಹಳ ಕೆಟ್ಟ ಮನುಷ್ಯ” ಎಂದು ಬೆರಳು ತೋರಿಸಿ ಹೆದರಿಸುತ್ತಾ ಸಾರ್ವಜನಿಕವಾಗಿ ಮಹಿಳೆಯೊಬ್ಬರಿಗೆ ಏಕವಚನದಲ್ಲಿ “ಹೇಯ್, ಮುಚ್ಚು ಬಾಯಿ, ರಾಸ್ಕಲ್” ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು. ಕೆಟ್ಟ ಜನರಿಗೆ, ಅದರಲ್ಲಿಯೂ ಸ್ವಘೋಷಿತ ಕೆಟ್ಟವರಿಗೆ, ಯಾವುದೇ ಅಧಿಕಾರ, ಪದವಿ ನೀಡಬಾರದು. ಮಾನಸಿಕ ಅಸ್ವಸ್ಥರು ಹೇಗೆ ಜವಾಬ್ದಾರಿಯುತ ಹುದ್ದೆ ನಿಭಾಯಿಸಲು ಅನರ್ಹರೋ ಅದೇ ರೀತಿ ಇವರೂ ಸಹ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾರೆಡ್ಡಿಯವರು ಕಿಡಿಕಾರಿದ್ದಾರೆ.

ಏನು ದುರಹಂಕಾರ! ಏನು ಉಡಾಫೆ! ಏನು ಧೈರ್ಯ! ರಾಜ್ಯದ ಕಾನೂನು ಇಲಾಖೆ ಸಚಿವ ಮಾಧುಸ್ವಾಮಿಯವರು ಸಾರ್ವಜನಿಕವಾಗಿ ವರ್ತಿಸುವುದು ಹೇಗೆ ಮತ್ತು ತಮ್ಮ ಅಸಹನೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಹೇಗೆ ಎಂದು Anger Management Counselor ಗಳಿಂದ ಸೂಕ್ತ ಪಾಠ ಮಾಡಿಸಿಕೊಂಡು ಪ್ರಮಾಣಪತ್ರ ತರುವ ತನಕ ಅವರನ್ನು ಸಂಪುಟದಿಂದ ಹೊರಗಿಡಬೇಕು. ಈಗಾಗಲೇ ಜನರು ಮನೋವೇದನೆಯೂ ಸೇರಿದಂತೆ ಹಲವು ತರಹದ ವೇದನೆ ಮತ್ತು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಅಧಿಕಾರಸ್ಥರು ಮಾತೃಹೃದಯದಿಂದ ವರ್ತಿಸದಿದ್ದರೆ ಭಾರೀ ಅಪಾಯ ಕಾದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಾನ್ ಭಾಳ ಕೆಟ್ಟ ಮನುಷ್ಯ, ಬಾಯಿ ಮುಚ್ಚೆ ರಾಸ್ಕಲ್’ ಇದು ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ಬಳಸಿದ ಪದ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿಚಾರದಲ್ಲಿ ವೀರಾವೇಷದಿಂದ ಖಂಡಿಸಿದ ಬಿಜೆಪಿಯ “ಸಭ್ಯ”ರಾರೂ ಖಂಡಿಸುತ್ತಿಲ್ಲ. ಶೋಭಾಕ್ಕನ ಬಾಯಿಗೆ ಯಾರಾದರೂ ಮೈಕ್ ಹಿಡಿಯಿರಪ್ಪ ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಆಗ್ರಹಿಸಿದ್ದಾರೆ.

ಓಟು ಕೇಳೋಕೆ ಬಂದಾಗ ಕಾಲಿಗೆ ಬೀಳ್ತಾರೆ. ಅಧಿಕಾರ ಸಿಕ್ಕಮೇಲೆ ಮತದಾರರ ಮೇಲೆಯೇ ದರ್ಪ ತೋರಿಸುತ್ತಾರೆ.
ಇಂತಹ ದುಷ್ಟ ಸಚಿವರು/ ಅಧಿಕಾರಿಗಳ ವಿರುದ್ಧ ಯುವಜನರು ದನಿ ಎತ್ತಬೇಕು. ಯುವ ರೈತ ಹೋರಾಟಗಾರ್ತಿ ನಳಿನಿಯ ಧೈರ್ಯ ಮೆಚ್ಚುವಂಥದ್ದು. ಅವರ ಜೊತೆ ನಾವಿದ್ದೇವೆ. ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ಮಾಧುಸ್ವಾಮಿಯಂತೆ ಒಬ್ಬ ಬಿಜೆಪಿಯೇತರ ಪಕ್ಷದ ನಾಯಕ ಹೀಗೆ ವರ್ತಿಸಿದ್ದರೆ ಮಾಧ್ಯಮಗಳು ಅದರಲ್ಲೂ ನ್ಯೂಸ್ ಚಾನೆಲುಗಳು ಹೇಗೆ ವರದಿ ಮಾಡುತ್ತಿದ್ದವು? ಎಂದು ಹಿರಿಯ ಪತ್ರಕರ್ತ ಮತ್ತು ಖ್ಯಾತ ಕಾರ್ಟೂನಿಷ್ಟ್‌ ಪಿ.ಮಹಮ್ಮದ್‌ ಪ್ರಶ್ನಿಸಿದ್ದಾರೆ.

ಮಾಧುಸ್ವಾಮಿ ಯವರು ಒಳ್ಳೆಯ ಮನುಷ್ಯ ಎಂದುಕ್ಕೊಂಡಿದ್ದೆವು. ನಾನು ಕೆಟ್ಟವನು ಎಂದು ಘೋಷಣೆ ಮಾಡಿಕ್ಕೊಂಡು ನಮ್ಮ ಅಭಿಪ್ರಾಯ ತಿದ್ದಿದ್ದೀರಿ ಸರ್ ಎಂದು ನ.ಲಿ ಕೃಷ್ಣರವರು ವ್ಯಂಗ್ಯವಾಡಿದ್ದಾರೆ.

ಇನ್ನು ಮಾಧುಸ್ವಾಮಿಯವರು ಕ್ಷಮೆ ಕೇಳಬೇಕು, ಇಲ್ಲವೇ ರಾಜೀನಾಮೆ ನೀಡಬೇಕಂದು ಒತ್ತಾಯಿಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.


ಇದನ್ನೂ ಓದಿ: ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...