Homeಕರ್ನಾಟಕಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್...

ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ - ಕಾಂಗ್ರೆಸ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದೆ. ಈ ದಾಳಿಯನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, “ಮೋದಿ-ಯಡಿಯೂರಪ್ಪ ಜೋಡಿಯು ಕುತಂತ್ರಗಳ ಮೂಲಕ ಬೆದರಿಕೆ ಹಾಕುತ್ತಿದೆ. ತನ್ನ ಕೈಗೊಂಬೆ ಸಿಬಿಐ ಮೂಲಕ ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ದಾಳಿ ಮಾಡಿಸುತ್ತಿದೆ. ಇದರಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಸಿಬಿಐ ಮೊದಲು ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರಗಳನ್ನು ಕಂಡುಹಿಡಿಯಬೇಕು. ಆದರೆ ಈ ದಾಳಿಯು ಕುತಂತ್ರದ ನಡೆಯಷ್ಟೇ” ಎಂದು ಟ್ವೀಟ್ ಮಾಡಿದ್ದಾರೆ.

“ಮೋದಿ ಮತ್ತು ಯಡಿಯೂರಪ್ಪ ಸರ್ಕಾರಗಳ ಮತ್ತು ಬಿಜೆಪಿಯ ಮುಂಚೂಣಿಯ ಸಂಸ್ಥೆಗಳಾದ ಸಿಬಿಐ-ಇಡಿ-ಆದಾಯ ತೆರಿಗೆ ಇಲಾಖೆಯ ಇಂತಹ ಪ್ರಯತ್ನಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ತಲೆಬಾಗುವುದಿಲ್ಲ ಅಥವಾ ಮಂಡಿಯೂರುವುದಿಲ್ಲ ಎಂದು ತಿಳಿಯಲಿ” ಎಂದು ಅವರು ಕಿಡಿಕಾಡಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

“ಪ್ರಬಲ ಪ್ರಾದೇಶಿಕ ರಾಜ್ಯ ನಾಯಕರನ್ನು ಗುರಿಯಾಗಿಸುವುದು ಬಿಜೆಪಿ / ಆರ್‌ಎಸ್‌ಎಸ್ ಸಂಯೋಜನೆಯ ಕಾರ್ಯತಂತ್ರದ ಒಂದು ಭಾಗವಾಗಿದೆ. ಡಿಕೆ ಶಿವಕುಮಾರ್ ಗಟ್ಟಿ ಮನುಷ್ಯ, ಅವರು ತಮ್ಮ ಆರೋಪದಿಂದ ಮುಕ್ತರಾಗುತ್ತಾರೆ” ಎಂದು ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ BJP ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಸಿಬಿಐ ದಾಳಿ ಎಂಬುದು ಬಿಜೆಪಿಯ ಶಾಶ್ವತ ಚುನಾವಣಾ ಪ್ರಕ್ರಿಯೆ ಆಗಿದೆ. ಉಪ ಚುನಾವಣೆಯ ಸೋಲುವ ಭೀತಿ ಬಿಜೆಪಿಯಿಂದ ಏನೆಲ್ಲ ಮಾಡಿಸುತ್ತಿದೆ.! ದ್ವೇಷ ರಾಜಕಾರಣದ ಸಿಬಿಐ ದಾಳಿಯನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

“ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ. ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ. ಅನೇಕ ಹೋರಾಟಗಳ ಮೂಲಕ ಮಹನೀಯರು ಕಟ್ಟಿದ ಭಾರತದ ಪ್ರಜಾಪ್ರಭುತ್ವವನ್ನು ಬಿಜೆಪಿಗರು ನಾಶ ಮಾಡಲು ಹೊರಟಿದ್ದಾರೆ!” ಎಂದು ಹೇಳಿದೆ.

“ಡಿಕೆ ಶಿವಕುಮಾರ್‌ ಅವರ ನಾಯಕತ್ವಕ್ಕೆ ಬೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂತಹ ನೀಚ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನರೇಂದ್ರ ಮೋದಿ ನಿಮಗೆ ನೈತಿಕತೆಯಿದ್ದರೆ ಮೊದಲು ಯಡಿಯೂರಪ್ಪ ಕುಟುಂಬದ ಹಗರಣಗಳನ್ನು ತನಿಖೆಗೆ ಒಳಪಡಿಸಲು ಆದೇಶ ನೀಡಿ” ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ಎರಡೂ ಕಡೆ ಪಕ್ಷಾಂತರಗಳು ಇನ್ನು ಮುಂದೆ ತುಂಬಾ ಹೆಚ್ಚಾಗಲಿವೆ: ಡಿ.ಕೆ ಶಿವಕುಮಾರ್‌

“CBI ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ R.R.ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ. ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ CBIಗೆ ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದ್ಯಾಕೆ?” ಎಂದು ಕಾಂಗ್ರೆಸ್‌‌ನ ಮಾಜಿ ನಾಯಕ ಗುಂಡುರಾವ್ ಹೇಳಿದ್ದಾರೆ.

 

ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ, ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿದಂತೆ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ಕೆಲದಿನಗಳ ಹಿಂದೆಯಷ್ಟೇ ಸಿಬಿಐ ವಿಚಾರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದಾಗ ಅದರ ವಿರುದ್ಧ ಡಿಕೆಶಿ ಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ್ದರು. ಅಷ್ಟರಲ್ಲಾಗಲೇ ಇಂದು 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಯಾವುದೇ ಸುಳಿವು ಕೊಡದೇ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...