Homeಕರ್ನಾಟಕಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್...

ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ - ಕಾಂಗ್ರೆಸ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದೆ. ಈ ದಾಳಿಯನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, “ಮೋದಿ-ಯಡಿಯೂರಪ್ಪ ಜೋಡಿಯು ಕುತಂತ್ರಗಳ ಮೂಲಕ ಬೆದರಿಕೆ ಹಾಕುತ್ತಿದೆ. ತನ್ನ ಕೈಗೊಂಬೆ ಸಿಬಿಐ ಮೂಲಕ ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ದಾಳಿ ಮಾಡಿಸುತ್ತಿದೆ. ಇದರಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಸಿಬಿಐ ಮೊದಲು ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರಗಳನ್ನು ಕಂಡುಹಿಡಿಯಬೇಕು. ಆದರೆ ಈ ದಾಳಿಯು ಕುತಂತ್ರದ ನಡೆಯಷ್ಟೇ” ಎಂದು ಟ್ವೀಟ್ ಮಾಡಿದ್ದಾರೆ.

“ಮೋದಿ ಮತ್ತು ಯಡಿಯೂರಪ್ಪ ಸರ್ಕಾರಗಳ ಮತ್ತು ಬಿಜೆಪಿಯ ಮುಂಚೂಣಿಯ ಸಂಸ್ಥೆಗಳಾದ ಸಿಬಿಐ-ಇಡಿ-ಆದಾಯ ತೆರಿಗೆ ಇಲಾಖೆಯ ಇಂತಹ ಪ್ರಯತ್ನಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ತಲೆಬಾಗುವುದಿಲ್ಲ ಅಥವಾ ಮಂಡಿಯೂರುವುದಿಲ್ಲ ಎಂದು ತಿಳಿಯಲಿ” ಎಂದು ಅವರು ಕಿಡಿಕಾಡಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

“ಪ್ರಬಲ ಪ್ರಾದೇಶಿಕ ರಾಜ್ಯ ನಾಯಕರನ್ನು ಗುರಿಯಾಗಿಸುವುದು ಬಿಜೆಪಿ / ಆರ್‌ಎಸ್‌ಎಸ್ ಸಂಯೋಜನೆಯ ಕಾರ್ಯತಂತ್ರದ ಒಂದು ಭಾಗವಾಗಿದೆ. ಡಿಕೆ ಶಿವಕುಮಾರ್ ಗಟ್ಟಿ ಮನುಷ್ಯ, ಅವರು ತಮ್ಮ ಆರೋಪದಿಂದ ಮುಕ್ತರಾಗುತ್ತಾರೆ” ಎಂದು ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ BJP ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಸಿಬಿಐ ದಾಳಿ ಎಂಬುದು ಬಿಜೆಪಿಯ ಶಾಶ್ವತ ಚುನಾವಣಾ ಪ್ರಕ್ರಿಯೆ ಆಗಿದೆ. ಉಪ ಚುನಾವಣೆಯ ಸೋಲುವ ಭೀತಿ ಬಿಜೆಪಿಯಿಂದ ಏನೆಲ್ಲ ಮಾಡಿಸುತ್ತಿದೆ.! ದ್ವೇಷ ರಾಜಕಾರಣದ ಸಿಬಿಐ ದಾಳಿಯನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

“ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ. ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ. ಅನೇಕ ಹೋರಾಟಗಳ ಮೂಲಕ ಮಹನೀಯರು ಕಟ್ಟಿದ ಭಾರತದ ಪ್ರಜಾಪ್ರಭುತ್ವವನ್ನು ಬಿಜೆಪಿಗರು ನಾಶ ಮಾಡಲು ಹೊರಟಿದ್ದಾರೆ!” ಎಂದು ಹೇಳಿದೆ.

“ಡಿಕೆ ಶಿವಕುಮಾರ್‌ ಅವರ ನಾಯಕತ್ವಕ್ಕೆ ಬೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂತಹ ನೀಚ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನರೇಂದ್ರ ಮೋದಿ ನಿಮಗೆ ನೈತಿಕತೆಯಿದ್ದರೆ ಮೊದಲು ಯಡಿಯೂರಪ್ಪ ಕುಟುಂಬದ ಹಗರಣಗಳನ್ನು ತನಿಖೆಗೆ ಒಳಪಡಿಸಲು ಆದೇಶ ನೀಡಿ” ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ಎರಡೂ ಕಡೆ ಪಕ್ಷಾಂತರಗಳು ಇನ್ನು ಮುಂದೆ ತುಂಬಾ ಹೆಚ್ಚಾಗಲಿವೆ: ಡಿ.ಕೆ ಶಿವಕುಮಾರ್‌

“CBI ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ R.R.ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ. ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ CBIಗೆ ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದ್ಯಾಕೆ?” ಎಂದು ಕಾಂಗ್ರೆಸ್‌‌ನ ಮಾಜಿ ನಾಯಕ ಗುಂಡುರಾವ್ ಹೇಳಿದ್ದಾರೆ.

 

ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ, ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿದಂತೆ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ಕೆಲದಿನಗಳ ಹಿಂದೆಯಷ್ಟೇ ಸಿಬಿಐ ವಿಚಾರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದಾಗ ಅದರ ವಿರುದ್ಧ ಡಿಕೆಶಿ ಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ್ದರು. ಅಷ್ಟರಲ್ಲಾಗಲೇ ಇಂದು 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಯಾವುದೇ ಸುಳಿವು ಕೊಡದೇ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...