Homeಕರ್ನಾಟಕಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್...

ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ - ಕಾಂಗ್ರೆಸ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದೆ. ಈ ದಾಳಿಯನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, “ಮೋದಿ-ಯಡಿಯೂರಪ್ಪ ಜೋಡಿಯು ಕುತಂತ್ರಗಳ ಮೂಲಕ ಬೆದರಿಕೆ ಹಾಕುತ್ತಿದೆ. ತನ್ನ ಕೈಗೊಂಬೆ ಸಿಬಿಐ ಮೂಲಕ ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ದಾಳಿ ಮಾಡಿಸುತ್ತಿದೆ. ಇದರಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಸಿಬಿಐ ಮೊದಲು ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರಗಳನ್ನು ಕಂಡುಹಿಡಿಯಬೇಕು. ಆದರೆ ಈ ದಾಳಿಯು ಕುತಂತ್ರದ ನಡೆಯಷ್ಟೇ” ಎಂದು ಟ್ವೀಟ್ ಮಾಡಿದ್ದಾರೆ.

“ಮೋದಿ ಮತ್ತು ಯಡಿಯೂರಪ್ಪ ಸರ್ಕಾರಗಳ ಮತ್ತು ಬಿಜೆಪಿಯ ಮುಂಚೂಣಿಯ ಸಂಸ್ಥೆಗಳಾದ ಸಿಬಿಐ-ಇಡಿ-ಆದಾಯ ತೆರಿಗೆ ಇಲಾಖೆಯ ಇಂತಹ ಪ್ರಯತ್ನಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ತಲೆಬಾಗುವುದಿಲ್ಲ ಅಥವಾ ಮಂಡಿಯೂರುವುದಿಲ್ಲ ಎಂದು ತಿಳಿಯಲಿ” ಎಂದು ಅವರು ಕಿಡಿಕಾಡಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

“ಪ್ರಬಲ ಪ್ರಾದೇಶಿಕ ರಾಜ್ಯ ನಾಯಕರನ್ನು ಗುರಿಯಾಗಿಸುವುದು ಬಿಜೆಪಿ / ಆರ್‌ಎಸ್‌ಎಸ್ ಸಂಯೋಜನೆಯ ಕಾರ್ಯತಂತ್ರದ ಒಂದು ಭಾಗವಾಗಿದೆ. ಡಿಕೆ ಶಿವಕುಮಾರ್ ಗಟ್ಟಿ ಮನುಷ್ಯ, ಅವರು ತಮ್ಮ ಆರೋಪದಿಂದ ಮುಕ್ತರಾಗುತ್ತಾರೆ” ಎಂದು ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ BJP ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಸಿಬಿಐ ದಾಳಿ ಎಂಬುದು ಬಿಜೆಪಿಯ ಶಾಶ್ವತ ಚುನಾವಣಾ ಪ್ರಕ್ರಿಯೆ ಆಗಿದೆ. ಉಪ ಚುನಾವಣೆಯ ಸೋಲುವ ಭೀತಿ ಬಿಜೆಪಿಯಿಂದ ಏನೆಲ್ಲ ಮಾಡಿಸುತ್ತಿದೆ.! ದ್ವೇಷ ರಾಜಕಾರಣದ ಸಿಬಿಐ ದಾಳಿಯನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

“ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ. ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ. ಅನೇಕ ಹೋರಾಟಗಳ ಮೂಲಕ ಮಹನೀಯರು ಕಟ್ಟಿದ ಭಾರತದ ಪ್ರಜಾಪ್ರಭುತ್ವವನ್ನು ಬಿಜೆಪಿಗರು ನಾಶ ಮಾಡಲು ಹೊರಟಿದ್ದಾರೆ!” ಎಂದು ಹೇಳಿದೆ.

“ಡಿಕೆ ಶಿವಕುಮಾರ್‌ ಅವರ ನಾಯಕತ್ವಕ್ಕೆ ಬೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂತಹ ನೀಚ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನರೇಂದ್ರ ಮೋದಿ ನಿಮಗೆ ನೈತಿಕತೆಯಿದ್ದರೆ ಮೊದಲು ಯಡಿಯೂರಪ್ಪ ಕುಟುಂಬದ ಹಗರಣಗಳನ್ನು ತನಿಖೆಗೆ ಒಳಪಡಿಸಲು ಆದೇಶ ನೀಡಿ” ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ಎರಡೂ ಕಡೆ ಪಕ್ಷಾಂತರಗಳು ಇನ್ನು ಮುಂದೆ ತುಂಬಾ ಹೆಚ್ಚಾಗಲಿವೆ: ಡಿ.ಕೆ ಶಿವಕುಮಾರ್‌

“CBI ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ R.R.ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ. ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ CBIಗೆ ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದ್ಯಾಕೆ?” ಎಂದು ಕಾಂಗ್ರೆಸ್‌‌ನ ಮಾಜಿ ನಾಯಕ ಗುಂಡುರಾವ್ ಹೇಳಿದ್ದಾರೆ.

 

ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ, ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿದಂತೆ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ಕೆಲದಿನಗಳ ಹಿಂದೆಯಷ್ಟೇ ಸಿಬಿಐ ವಿಚಾರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದಾಗ ಅದರ ವಿರುದ್ಧ ಡಿಕೆಶಿ ಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ್ದರು. ಅಷ್ಟರಲ್ಲಾಗಲೇ ಇಂದು 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಯಾವುದೇ ಸುಳಿವು ಕೊಡದೇ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...