Homeಮುಖಪುಟಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶರು ಈ ಪ್ರಕರಣವು 'ಅಪರೂಪದಲ್ಲಿ ಅಪರೂಪ' ಎಂದು ಕರೆದಿದ್ದಾರೆ

- Advertisement -
- Advertisement -

ತನ್ನ ಪತ್ನಿ ‘ಉತ್ರಾ’ ಅವರಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ.

ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ ವಯಸ್ಸು ಮತ್ತು ಕ್ರಿಮಿನಲ್ ಹಿನ್ನಲೆ ಇಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿ ತೀರ್ಪಿತ್ತಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಪ್ರಾಸಿಕ್ಯೂಟರ್ ಪ್ರಕಾರ, ಕೊಲೆ ಮಾಡಿರುವುದಕ್ಕೆ ನೀಡಲಾಗಿರುವ ಜೀವಾವಧಿ ಅಲ್ಲದೆ, ಸೂರಜ್‌ ಕುಮಾರ್‌ಗೆ ಕೊಲೆ ಯತ್ನ ನಡೆಸಿದ ಅಪರಾಧಕ್ಕೆ ಜೀವಾವಧಿ ಘೋಷಿಸಲಾಗಿದೆ. ಜೊತೆಗೆ ಪತ್ನಿಗೆ ವಿಷದ ಮೂಲಕ ಹಾನಿ ಮಾಡಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆಯನ್ನು ಘೋಷಿಸಲಾಗಿದೆ. ಜೊತೆಗೆ ನ್ಯಾಯಾಲಯವು ಅಪರಾಧಿಗೆ ಒಟ್ಟು 5.85 ಲಕ್ಷ ದಂಡ ವಿಧಿಸಿದೆ.

“ಕೊಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದ್ದು, ವೈಜ್ಞಾನಿಕವಾಗಿ ಮತ್ತು ವೃತ್ತಿಪರವಾಗಿ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ. ಪ್ರಕರಣವೊಂದನ್ನು ಹೀಗೂ ತನಿಖೆ ಮಾಡಿ ಪತ್ತೆ ಮಾಡಬಹುದು ಎಂಬುದಕ್ಕೆ ಇದು ಒಂದು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಕೇರಳ ಡಿಜಿಪಿ ಹೇಳಿದ್ದಾರೆ.

ಸೂರಜ್‌ ಕುಮಾರ್‌ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ್ದ. ಅದಕ್ಕಿಂತಲೂ ಮುಂಚೆಯು ಆತ ಉತ್ರಾ ಅವರನ್ನು ಕೊಲೆ ಮಾಡಲು ಕೊಳಕು ಮಂಡಲ ಹಾವನ್ನು ಬಳಸಿದ್ದನು. ಆದರೆ ಕೊಲ್ಲಲಾಗಿರಲಿಲ್ಲ. ತದನಂತರ ಸೂರಜ್ ಕುಮಾರ್‌ ನಾಗರ ಹಾವನ್ನು ಹಲವು ದಿನಗಳ ಕಾಲ ಹಸಿವಿನಲ್ಲಿ ಕೆಡವಿದ್ದನು.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಹಾವು ಬಳಸಿ ಕೊಲೆ ಮಾಡಿದಂತಹ ಈ ಪ್ರಕರಣವು ಇಡೀ ದೇಶದಲ್ಲೆ ಮೊದಲು ಎಂದು ಲೈವ್ ಲಾ ವರದಿ ಮಾಡಿದೆ. ಇದೇ ರೀತಿ ಎರಡು ಪ್ರಕರಣಗಳು ಈ ಹಿಂದೆ ವರದಿಯಾಗಿತ್ತಾದರೂ, ಅದು ಸಾಬೀತಾಗದ ಕಾರಣ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ, ನಕಲಿ ಸರೀಸೃಪವನ್ನು ಬಳಸಿ ಮತ್ತು ಇಡೀ ಅಪರಾಧದ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು.

ಪ್ರಕರಣದ ಹಿನ್ನೆಲೆ:

ದೇಶವನ್ನೆ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, 25 ವರ್ಷದ ಗೃಹಿಣಿಯಾದ ಉತ್ರಾ 2020 ರ ಮೇ ತಿಂಗಳ 7 ರಂದು ಹಾವಿನ ಕಡಿತದಿಂದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಅದನ್ನು ನೈಸರ್ಗಿಕ ಹಾವು ಕಡಿತ ಎಂದು ಹೇಳಲಾಗಿತ್ತಾದರೂ, ಉತ್ರಾ ಅವರ ಕುಟುಂಬ ಅದನ್ನು ಕೊಲೆ ಎಂದು ಆರೋಪಿಸಿದ್ದರು.

ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬ ಉತ್ರಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿತ್ತು ಆರೋಪಿಸಿದ್ದರು. ಅಲ್ಲದೆ, ಮುಚ್ಚಿದ ಹವಾನಿಯಂತ್ರಿತ ಕೋಣೆಗೆ ಹಾವು ಬರಲು ಸಾಧ್ಯವಿಲ್ಲ. ಜೊತೆಗೆ ಮನೆಯ ನೆಲವು ಟೈಲ್ಸ್‌ ಹಾಕಿರುವುದರಿಂದ ಅದು ಅಸಾಧ್ಯ ಎಂದು ವಾದಿಸಿದ್ದರು. ಚಿನ್ನ ಮತ್ತು ಆಸ್ತಿಯನ್ನು ಪಡೆಯಲು ಈ ಹತ್ಯೆಯನ್ನು ನಡೆಸಲಾಗಿದೆ, ಈ ಘಟನೆಗೂ ಒಂಬತ್ತು ವಾರದ ಮುಂಚೆ ಕೂಡಾ ಉತ್ರಾ ಅವರಿಗೆ ಹಾವೊಂದು ಕಚ್ಚಿದ್ದರಿಂದ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ಹಾವಿನ ಶಾಪ ಕುಟುಂಬದ ಮೇಲಿದೆ ಎಂದು ಅವರನ್ನು ನಂಬಿಸಲಾಗಿತ್ತಾದರೂ, ಅದನ್ನು ನಂಬದ ಕುಟುಂಬ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಅದರಂತೆ, ಪೋಲಿಸ್ ತನಿಖೆ ಪ್ರಾರಂಭವಾಗಿ ಸೂರಜ್ ಕುಮಾರ್ ವಿರುದ್ದ 1000 ಪುಟಗಳ ಚಾರ್ಜ್ ಶೀಟ್ ತಯಾರಿಸಿದ್ದರು. ಇದರಲ್ಲಿ ಅವನ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದರು.

ಸೂರಜ್ ಕುಮಾರ್‌ ಜೊತೆಗೆ ಅವನಿಗೆ ಎರಡು ಹಾವಗಳನ್ನು ಪಡೆಯಲು ಸಹಾಯ ಮಾಡಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡಾ ಪೊಲೀಸರು ಬಂದಿಸಿದ್ದರು. ಸೂರಜ್ ಅವನಿಗೆ 10 ಸಾವಿರ ನೀಡಿ ಹಾವುಗಳನ್ನು ಖರೀದಿಸಿದ್ದನು. ಹಾವು ಮಾರಾಟ ಮಾಡಿದ ವ್ಯಕ್ತಿಗೆ ಸೂರಜ್ ಯಾಕಾಗಿ ತನ್ನಿಂದ ಹಾವುಗಳನ್ನು ಕೊಂಡುಕೊಂಡಿದ್ದಾನೆ ಎಂಬ ವಿಷಯ ತಿಳಿದಿರಲಿಲ್ಲ.

ಪೊಲೀಸ್‌ ವಿಚಾರಣೆಯ ಸಮಯದಲ್ಲಿ ಸೂರಜ್ ಕುಮಾರ್‌ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದನು. ತನ್ನ ಹೆಂಡತಿಯನ್ನು ಕೊಲ್ಲುವ ಉದ್ದೇಶದಿಂದ ಎರಡು ಹಾವುಗಳನ್ನು ಹಸಿವಿನಲ್ಲಿ ಕೆಡವಿ ಜಾರ್‌ ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದೆ ಎಂದು ಒಪ್ಪಿಕೊಂಡಿದ್ದನು. ಇದರ ನಂತರ, ಸೂರಜ್‌ನ ತಂದೆ, ತಾಯಿ ಮತ್ತು ಸಹೋದರಿಯನ್ನು ಬಂಧಿಸಲಾಗಿತ್ತು. ಅವರು ಉತ್ರಾ ಅವರ ಸುಮಾರು 38 ಪವನ್ ಚಿನ್ನವನ್ನು ಮನೆಯ ಹಿಂದಿನ ರಬ್ಬರ್‌ ಎಸ್ಟೇಟ್‌ನಲ್ಲಿ ಗುಂಡಿತೋಡಿ ಬಚ್ಚಿಟ್ಟಿದ್ದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...