Homeಮುಖಪುಟಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶರು ಈ ಪ್ರಕರಣವು 'ಅಪರೂಪದಲ್ಲಿ ಅಪರೂಪ' ಎಂದು ಕರೆದಿದ್ದಾರೆ

- Advertisement -
- Advertisement -

ತನ್ನ ಪತ್ನಿ ‘ಉತ್ರಾ’ ಅವರಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ.

ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ ವಯಸ್ಸು ಮತ್ತು ಕ್ರಿಮಿನಲ್ ಹಿನ್ನಲೆ ಇಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿ ತೀರ್ಪಿತ್ತಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಪ್ರಾಸಿಕ್ಯೂಟರ್ ಪ್ರಕಾರ, ಕೊಲೆ ಮಾಡಿರುವುದಕ್ಕೆ ನೀಡಲಾಗಿರುವ ಜೀವಾವಧಿ ಅಲ್ಲದೆ, ಸೂರಜ್‌ ಕುಮಾರ್‌ಗೆ ಕೊಲೆ ಯತ್ನ ನಡೆಸಿದ ಅಪರಾಧಕ್ಕೆ ಜೀವಾವಧಿ ಘೋಷಿಸಲಾಗಿದೆ. ಜೊತೆಗೆ ಪತ್ನಿಗೆ ವಿಷದ ಮೂಲಕ ಹಾನಿ ಮಾಡಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆಯನ್ನು ಘೋಷಿಸಲಾಗಿದೆ. ಜೊತೆಗೆ ನ್ಯಾಯಾಲಯವು ಅಪರಾಧಿಗೆ ಒಟ್ಟು 5.85 ಲಕ್ಷ ದಂಡ ವಿಧಿಸಿದೆ.

“ಕೊಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದ್ದು, ವೈಜ್ಞಾನಿಕವಾಗಿ ಮತ್ತು ವೃತ್ತಿಪರವಾಗಿ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ. ಪ್ರಕರಣವೊಂದನ್ನು ಹೀಗೂ ತನಿಖೆ ಮಾಡಿ ಪತ್ತೆ ಮಾಡಬಹುದು ಎಂಬುದಕ್ಕೆ ಇದು ಒಂದು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಕೇರಳ ಡಿಜಿಪಿ ಹೇಳಿದ್ದಾರೆ.

ಸೂರಜ್‌ ಕುಮಾರ್‌ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ್ದ. ಅದಕ್ಕಿಂತಲೂ ಮುಂಚೆಯು ಆತ ಉತ್ರಾ ಅವರನ್ನು ಕೊಲೆ ಮಾಡಲು ಕೊಳಕು ಮಂಡಲ ಹಾವನ್ನು ಬಳಸಿದ್ದನು. ಆದರೆ ಕೊಲ್ಲಲಾಗಿರಲಿಲ್ಲ. ತದನಂತರ ಸೂರಜ್ ಕುಮಾರ್‌ ನಾಗರ ಹಾವನ್ನು ಹಲವು ದಿನಗಳ ಕಾಲ ಹಸಿವಿನಲ್ಲಿ ಕೆಡವಿದ್ದನು.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಹಾವು ಬಳಸಿ ಕೊಲೆ ಮಾಡಿದಂತಹ ಈ ಪ್ರಕರಣವು ಇಡೀ ದೇಶದಲ್ಲೆ ಮೊದಲು ಎಂದು ಲೈವ್ ಲಾ ವರದಿ ಮಾಡಿದೆ. ಇದೇ ರೀತಿ ಎರಡು ಪ್ರಕರಣಗಳು ಈ ಹಿಂದೆ ವರದಿಯಾಗಿತ್ತಾದರೂ, ಅದು ಸಾಬೀತಾಗದ ಕಾರಣ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ, ನಕಲಿ ಸರೀಸೃಪವನ್ನು ಬಳಸಿ ಮತ್ತು ಇಡೀ ಅಪರಾಧದ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು.

ಪ್ರಕರಣದ ಹಿನ್ನೆಲೆ:

ದೇಶವನ್ನೆ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, 25 ವರ್ಷದ ಗೃಹಿಣಿಯಾದ ಉತ್ರಾ 2020 ರ ಮೇ ತಿಂಗಳ 7 ರಂದು ಹಾವಿನ ಕಡಿತದಿಂದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಅದನ್ನು ನೈಸರ್ಗಿಕ ಹಾವು ಕಡಿತ ಎಂದು ಹೇಳಲಾಗಿತ್ತಾದರೂ, ಉತ್ರಾ ಅವರ ಕುಟುಂಬ ಅದನ್ನು ಕೊಲೆ ಎಂದು ಆರೋಪಿಸಿದ್ದರು.

ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬ ಉತ್ರಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿತ್ತು ಆರೋಪಿಸಿದ್ದರು. ಅಲ್ಲದೆ, ಮುಚ್ಚಿದ ಹವಾನಿಯಂತ್ರಿತ ಕೋಣೆಗೆ ಹಾವು ಬರಲು ಸಾಧ್ಯವಿಲ್ಲ. ಜೊತೆಗೆ ಮನೆಯ ನೆಲವು ಟೈಲ್ಸ್‌ ಹಾಕಿರುವುದರಿಂದ ಅದು ಅಸಾಧ್ಯ ಎಂದು ವಾದಿಸಿದ್ದರು. ಚಿನ್ನ ಮತ್ತು ಆಸ್ತಿಯನ್ನು ಪಡೆಯಲು ಈ ಹತ್ಯೆಯನ್ನು ನಡೆಸಲಾಗಿದೆ, ಈ ಘಟನೆಗೂ ಒಂಬತ್ತು ವಾರದ ಮುಂಚೆ ಕೂಡಾ ಉತ್ರಾ ಅವರಿಗೆ ಹಾವೊಂದು ಕಚ್ಚಿದ್ದರಿಂದ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ಹಾವಿನ ಶಾಪ ಕುಟುಂಬದ ಮೇಲಿದೆ ಎಂದು ಅವರನ್ನು ನಂಬಿಸಲಾಗಿತ್ತಾದರೂ, ಅದನ್ನು ನಂಬದ ಕುಟುಂಬ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಅದರಂತೆ, ಪೋಲಿಸ್ ತನಿಖೆ ಪ್ರಾರಂಭವಾಗಿ ಸೂರಜ್ ಕುಮಾರ್ ವಿರುದ್ದ 1000 ಪುಟಗಳ ಚಾರ್ಜ್ ಶೀಟ್ ತಯಾರಿಸಿದ್ದರು. ಇದರಲ್ಲಿ ಅವನ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದರು.

ಸೂರಜ್ ಕುಮಾರ್‌ ಜೊತೆಗೆ ಅವನಿಗೆ ಎರಡು ಹಾವಗಳನ್ನು ಪಡೆಯಲು ಸಹಾಯ ಮಾಡಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡಾ ಪೊಲೀಸರು ಬಂದಿಸಿದ್ದರು. ಸೂರಜ್ ಅವನಿಗೆ 10 ಸಾವಿರ ನೀಡಿ ಹಾವುಗಳನ್ನು ಖರೀದಿಸಿದ್ದನು. ಹಾವು ಮಾರಾಟ ಮಾಡಿದ ವ್ಯಕ್ತಿಗೆ ಸೂರಜ್ ಯಾಕಾಗಿ ತನ್ನಿಂದ ಹಾವುಗಳನ್ನು ಕೊಂಡುಕೊಂಡಿದ್ದಾನೆ ಎಂಬ ವಿಷಯ ತಿಳಿದಿರಲಿಲ್ಲ.

ಪೊಲೀಸ್‌ ವಿಚಾರಣೆಯ ಸಮಯದಲ್ಲಿ ಸೂರಜ್ ಕುಮಾರ್‌ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದನು. ತನ್ನ ಹೆಂಡತಿಯನ್ನು ಕೊಲ್ಲುವ ಉದ್ದೇಶದಿಂದ ಎರಡು ಹಾವುಗಳನ್ನು ಹಸಿವಿನಲ್ಲಿ ಕೆಡವಿ ಜಾರ್‌ ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದೆ ಎಂದು ಒಪ್ಪಿಕೊಂಡಿದ್ದನು. ಇದರ ನಂತರ, ಸೂರಜ್‌ನ ತಂದೆ, ತಾಯಿ ಮತ್ತು ಸಹೋದರಿಯನ್ನು ಬಂಧಿಸಲಾಗಿತ್ತು. ಅವರು ಉತ್ರಾ ಅವರ ಸುಮಾರು 38 ಪವನ್ ಚಿನ್ನವನ್ನು ಮನೆಯ ಹಿಂದಿನ ರಬ್ಬರ್‌ ಎಸ್ಟೇಟ್‌ನಲ್ಲಿ ಗುಂಡಿತೋಡಿ ಬಚ್ಚಿಟ್ಟಿದ್ದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...