Homeಮುಖಪುಟಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶರು ಈ ಪ್ರಕರಣವು 'ಅಪರೂಪದಲ್ಲಿ ಅಪರೂಪ' ಎಂದು ಕರೆದಿದ್ದಾರೆ

- Advertisement -
- Advertisement -

ತನ್ನ ಪತ್ನಿ ‘ಉತ್ರಾ’ ಅವರಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ.

ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ ವಯಸ್ಸು ಮತ್ತು ಕ್ರಿಮಿನಲ್ ಹಿನ್ನಲೆ ಇಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿ ತೀರ್ಪಿತ್ತಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಪ್ರಾಸಿಕ್ಯೂಟರ್ ಪ್ರಕಾರ, ಕೊಲೆ ಮಾಡಿರುವುದಕ್ಕೆ ನೀಡಲಾಗಿರುವ ಜೀವಾವಧಿ ಅಲ್ಲದೆ, ಸೂರಜ್‌ ಕುಮಾರ್‌ಗೆ ಕೊಲೆ ಯತ್ನ ನಡೆಸಿದ ಅಪರಾಧಕ್ಕೆ ಜೀವಾವಧಿ ಘೋಷಿಸಲಾಗಿದೆ. ಜೊತೆಗೆ ಪತ್ನಿಗೆ ವಿಷದ ಮೂಲಕ ಹಾನಿ ಮಾಡಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆಯನ್ನು ಘೋಷಿಸಲಾಗಿದೆ. ಜೊತೆಗೆ ನ್ಯಾಯಾಲಯವು ಅಪರಾಧಿಗೆ ಒಟ್ಟು 5.85 ಲಕ್ಷ ದಂಡ ವಿಧಿಸಿದೆ.

“ಕೊಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದ್ದು, ವೈಜ್ಞಾನಿಕವಾಗಿ ಮತ್ತು ವೃತ್ತಿಪರವಾಗಿ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ. ಪ್ರಕರಣವೊಂದನ್ನು ಹೀಗೂ ತನಿಖೆ ಮಾಡಿ ಪತ್ತೆ ಮಾಡಬಹುದು ಎಂಬುದಕ್ಕೆ ಇದು ಒಂದು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಕೇರಳ ಡಿಜಿಪಿ ಹೇಳಿದ್ದಾರೆ.

ಸೂರಜ್‌ ಕುಮಾರ್‌ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ್ದ. ಅದಕ್ಕಿಂತಲೂ ಮುಂಚೆಯು ಆತ ಉತ್ರಾ ಅವರನ್ನು ಕೊಲೆ ಮಾಡಲು ಕೊಳಕು ಮಂಡಲ ಹಾವನ್ನು ಬಳಸಿದ್ದನು. ಆದರೆ ಕೊಲ್ಲಲಾಗಿರಲಿಲ್ಲ. ತದನಂತರ ಸೂರಜ್ ಕುಮಾರ್‌ ನಾಗರ ಹಾವನ್ನು ಹಲವು ದಿನಗಳ ಕಾಲ ಹಸಿವಿನಲ್ಲಿ ಕೆಡವಿದ್ದನು.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಹಾವು ಬಳಸಿ ಕೊಲೆ ಮಾಡಿದಂತಹ ಈ ಪ್ರಕರಣವು ಇಡೀ ದೇಶದಲ್ಲೆ ಮೊದಲು ಎಂದು ಲೈವ್ ಲಾ ವರದಿ ಮಾಡಿದೆ. ಇದೇ ರೀತಿ ಎರಡು ಪ್ರಕರಣಗಳು ಈ ಹಿಂದೆ ವರದಿಯಾಗಿತ್ತಾದರೂ, ಅದು ಸಾಬೀತಾಗದ ಕಾರಣ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ, ನಕಲಿ ಸರೀಸೃಪವನ್ನು ಬಳಸಿ ಮತ್ತು ಇಡೀ ಅಪರಾಧದ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು.

ಪ್ರಕರಣದ ಹಿನ್ನೆಲೆ:

ದೇಶವನ್ನೆ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, 25 ವರ್ಷದ ಗೃಹಿಣಿಯಾದ ಉತ್ರಾ 2020 ರ ಮೇ ತಿಂಗಳ 7 ರಂದು ಹಾವಿನ ಕಡಿತದಿಂದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಅದನ್ನು ನೈಸರ್ಗಿಕ ಹಾವು ಕಡಿತ ಎಂದು ಹೇಳಲಾಗಿತ್ತಾದರೂ, ಉತ್ರಾ ಅವರ ಕುಟುಂಬ ಅದನ್ನು ಕೊಲೆ ಎಂದು ಆರೋಪಿಸಿದ್ದರು.

ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬ ಉತ್ರಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿತ್ತು ಆರೋಪಿಸಿದ್ದರು. ಅಲ್ಲದೆ, ಮುಚ್ಚಿದ ಹವಾನಿಯಂತ್ರಿತ ಕೋಣೆಗೆ ಹಾವು ಬರಲು ಸಾಧ್ಯವಿಲ್ಲ. ಜೊತೆಗೆ ಮನೆಯ ನೆಲವು ಟೈಲ್ಸ್‌ ಹಾಕಿರುವುದರಿಂದ ಅದು ಅಸಾಧ್ಯ ಎಂದು ವಾದಿಸಿದ್ದರು. ಚಿನ್ನ ಮತ್ತು ಆಸ್ತಿಯನ್ನು ಪಡೆಯಲು ಈ ಹತ್ಯೆಯನ್ನು ನಡೆಸಲಾಗಿದೆ, ಈ ಘಟನೆಗೂ ಒಂಬತ್ತು ವಾರದ ಮುಂಚೆ ಕೂಡಾ ಉತ್ರಾ ಅವರಿಗೆ ಹಾವೊಂದು ಕಚ್ಚಿದ್ದರಿಂದ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ಹಾವಿನ ಶಾಪ ಕುಟುಂಬದ ಮೇಲಿದೆ ಎಂದು ಅವರನ್ನು ನಂಬಿಸಲಾಗಿತ್ತಾದರೂ, ಅದನ್ನು ನಂಬದ ಕುಟುಂಬ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಅದರಂತೆ, ಪೋಲಿಸ್ ತನಿಖೆ ಪ್ರಾರಂಭವಾಗಿ ಸೂರಜ್ ಕುಮಾರ್ ವಿರುದ್ದ 1000 ಪುಟಗಳ ಚಾರ್ಜ್ ಶೀಟ್ ತಯಾರಿಸಿದ್ದರು. ಇದರಲ್ಲಿ ಅವನ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದರು.

ಸೂರಜ್ ಕುಮಾರ್‌ ಜೊತೆಗೆ ಅವನಿಗೆ ಎರಡು ಹಾವಗಳನ್ನು ಪಡೆಯಲು ಸಹಾಯ ಮಾಡಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡಾ ಪೊಲೀಸರು ಬಂದಿಸಿದ್ದರು. ಸೂರಜ್ ಅವನಿಗೆ 10 ಸಾವಿರ ನೀಡಿ ಹಾವುಗಳನ್ನು ಖರೀದಿಸಿದ್ದನು. ಹಾವು ಮಾರಾಟ ಮಾಡಿದ ವ್ಯಕ್ತಿಗೆ ಸೂರಜ್ ಯಾಕಾಗಿ ತನ್ನಿಂದ ಹಾವುಗಳನ್ನು ಕೊಂಡುಕೊಂಡಿದ್ದಾನೆ ಎಂಬ ವಿಷಯ ತಿಳಿದಿರಲಿಲ್ಲ.

ಪೊಲೀಸ್‌ ವಿಚಾರಣೆಯ ಸಮಯದಲ್ಲಿ ಸೂರಜ್ ಕುಮಾರ್‌ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದನು. ತನ್ನ ಹೆಂಡತಿಯನ್ನು ಕೊಲ್ಲುವ ಉದ್ದೇಶದಿಂದ ಎರಡು ಹಾವುಗಳನ್ನು ಹಸಿವಿನಲ್ಲಿ ಕೆಡವಿ ಜಾರ್‌ ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದೆ ಎಂದು ಒಪ್ಪಿಕೊಂಡಿದ್ದನು. ಇದರ ನಂತರ, ಸೂರಜ್‌ನ ತಂದೆ, ತಾಯಿ ಮತ್ತು ಸಹೋದರಿಯನ್ನು ಬಂಧಿಸಲಾಗಿತ್ತು. ಅವರು ಉತ್ರಾ ಅವರ ಸುಮಾರು 38 ಪವನ್ ಚಿನ್ನವನ್ನು ಮನೆಯ ಹಿಂದಿನ ರಬ್ಬರ್‌ ಎಸ್ಟೇಟ್‌ನಲ್ಲಿ ಗುಂಡಿತೋಡಿ ಬಚ್ಚಿಟ್ಟಿದ್ದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...