Homeಮುಖಪುಟಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶರು ಈ ಪ್ರಕರಣವು 'ಅಪರೂಪದಲ್ಲಿ ಅಪರೂಪ' ಎಂದು ಕರೆದಿದ್ದಾರೆ

- Advertisement -
- Advertisement -

ತನ್ನ ಪತ್ನಿ ‘ಉತ್ರಾ’ ಅವರಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ.

ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ ವಯಸ್ಸು ಮತ್ತು ಕ್ರಿಮಿನಲ್ ಹಿನ್ನಲೆ ಇಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿ ತೀರ್ಪಿತ್ತಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಪ್ರಾಸಿಕ್ಯೂಟರ್ ಪ್ರಕಾರ, ಕೊಲೆ ಮಾಡಿರುವುದಕ್ಕೆ ನೀಡಲಾಗಿರುವ ಜೀವಾವಧಿ ಅಲ್ಲದೆ, ಸೂರಜ್‌ ಕುಮಾರ್‌ಗೆ ಕೊಲೆ ಯತ್ನ ನಡೆಸಿದ ಅಪರಾಧಕ್ಕೆ ಜೀವಾವಧಿ ಘೋಷಿಸಲಾಗಿದೆ. ಜೊತೆಗೆ ಪತ್ನಿಗೆ ವಿಷದ ಮೂಲಕ ಹಾನಿ ಮಾಡಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆಯನ್ನು ಘೋಷಿಸಲಾಗಿದೆ. ಜೊತೆಗೆ ನ್ಯಾಯಾಲಯವು ಅಪರಾಧಿಗೆ ಒಟ್ಟು 5.85 ಲಕ್ಷ ದಂಡ ವಿಧಿಸಿದೆ.

“ಕೊಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದ್ದು, ವೈಜ್ಞಾನಿಕವಾಗಿ ಮತ್ತು ವೃತ್ತಿಪರವಾಗಿ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ. ಪ್ರಕರಣವೊಂದನ್ನು ಹೀಗೂ ತನಿಖೆ ಮಾಡಿ ಪತ್ತೆ ಮಾಡಬಹುದು ಎಂಬುದಕ್ಕೆ ಇದು ಒಂದು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಕೇರಳ ಡಿಜಿಪಿ ಹೇಳಿದ್ದಾರೆ.

ಸೂರಜ್‌ ಕುಮಾರ್‌ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ್ದ. ಅದಕ್ಕಿಂತಲೂ ಮುಂಚೆಯು ಆತ ಉತ್ರಾ ಅವರನ್ನು ಕೊಲೆ ಮಾಡಲು ಕೊಳಕು ಮಂಡಲ ಹಾವನ್ನು ಬಳಸಿದ್ದನು. ಆದರೆ ಕೊಲ್ಲಲಾಗಿರಲಿಲ್ಲ. ತದನಂತರ ಸೂರಜ್ ಕುಮಾರ್‌ ನಾಗರ ಹಾವನ್ನು ಹಲವು ದಿನಗಳ ಕಾಲ ಹಸಿವಿನಲ್ಲಿ ಕೆಡವಿದ್ದನು.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಹಾವು ಬಳಸಿ ಕೊಲೆ ಮಾಡಿದಂತಹ ಈ ಪ್ರಕರಣವು ಇಡೀ ದೇಶದಲ್ಲೆ ಮೊದಲು ಎಂದು ಲೈವ್ ಲಾ ವರದಿ ಮಾಡಿದೆ. ಇದೇ ರೀತಿ ಎರಡು ಪ್ರಕರಣಗಳು ಈ ಹಿಂದೆ ವರದಿಯಾಗಿತ್ತಾದರೂ, ಅದು ಸಾಬೀತಾಗದ ಕಾರಣ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ, ನಕಲಿ ಸರೀಸೃಪವನ್ನು ಬಳಸಿ ಮತ್ತು ಇಡೀ ಅಪರಾಧದ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು.

ಪ್ರಕರಣದ ಹಿನ್ನೆಲೆ:

ದೇಶವನ್ನೆ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, 25 ವರ್ಷದ ಗೃಹಿಣಿಯಾದ ಉತ್ರಾ 2020 ರ ಮೇ ತಿಂಗಳ 7 ರಂದು ಹಾವಿನ ಕಡಿತದಿಂದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಅದನ್ನು ನೈಸರ್ಗಿಕ ಹಾವು ಕಡಿತ ಎಂದು ಹೇಳಲಾಗಿತ್ತಾದರೂ, ಉತ್ರಾ ಅವರ ಕುಟುಂಬ ಅದನ್ನು ಕೊಲೆ ಎಂದು ಆರೋಪಿಸಿದ್ದರು.

ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬ ಉತ್ರಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿತ್ತು ಆರೋಪಿಸಿದ್ದರು. ಅಲ್ಲದೆ, ಮುಚ್ಚಿದ ಹವಾನಿಯಂತ್ರಿತ ಕೋಣೆಗೆ ಹಾವು ಬರಲು ಸಾಧ್ಯವಿಲ್ಲ. ಜೊತೆಗೆ ಮನೆಯ ನೆಲವು ಟೈಲ್ಸ್‌ ಹಾಕಿರುವುದರಿಂದ ಅದು ಅಸಾಧ್ಯ ಎಂದು ವಾದಿಸಿದ್ದರು. ಚಿನ್ನ ಮತ್ತು ಆಸ್ತಿಯನ್ನು ಪಡೆಯಲು ಈ ಹತ್ಯೆಯನ್ನು ನಡೆಸಲಾಗಿದೆ, ಈ ಘಟನೆಗೂ ಒಂಬತ್ತು ವಾರದ ಮುಂಚೆ ಕೂಡಾ ಉತ್ರಾ ಅವರಿಗೆ ಹಾವೊಂದು ಕಚ್ಚಿದ್ದರಿಂದ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ಹಾವಿನ ಶಾಪ ಕುಟುಂಬದ ಮೇಲಿದೆ ಎಂದು ಅವರನ್ನು ನಂಬಿಸಲಾಗಿತ್ತಾದರೂ, ಅದನ್ನು ನಂಬದ ಕುಟುಂಬ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಅದರಂತೆ, ಪೋಲಿಸ್ ತನಿಖೆ ಪ್ರಾರಂಭವಾಗಿ ಸೂರಜ್ ಕುಮಾರ್ ವಿರುದ್ದ 1000 ಪುಟಗಳ ಚಾರ್ಜ್ ಶೀಟ್ ತಯಾರಿಸಿದ್ದರು. ಇದರಲ್ಲಿ ಅವನ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದರು.

ಸೂರಜ್ ಕುಮಾರ್‌ ಜೊತೆಗೆ ಅವನಿಗೆ ಎರಡು ಹಾವಗಳನ್ನು ಪಡೆಯಲು ಸಹಾಯ ಮಾಡಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡಾ ಪೊಲೀಸರು ಬಂದಿಸಿದ್ದರು. ಸೂರಜ್ ಅವನಿಗೆ 10 ಸಾವಿರ ನೀಡಿ ಹಾವುಗಳನ್ನು ಖರೀದಿಸಿದ್ದನು. ಹಾವು ಮಾರಾಟ ಮಾಡಿದ ವ್ಯಕ್ತಿಗೆ ಸೂರಜ್ ಯಾಕಾಗಿ ತನ್ನಿಂದ ಹಾವುಗಳನ್ನು ಕೊಂಡುಕೊಂಡಿದ್ದಾನೆ ಎಂಬ ವಿಷಯ ತಿಳಿದಿರಲಿಲ್ಲ.

ಪೊಲೀಸ್‌ ವಿಚಾರಣೆಯ ಸಮಯದಲ್ಲಿ ಸೂರಜ್ ಕುಮಾರ್‌ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದನು. ತನ್ನ ಹೆಂಡತಿಯನ್ನು ಕೊಲ್ಲುವ ಉದ್ದೇಶದಿಂದ ಎರಡು ಹಾವುಗಳನ್ನು ಹಸಿವಿನಲ್ಲಿ ಕೆಡವಿ ಜಾರ್‌ ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದೆ ಎಂದು ಒಪ್ಪಿಕೊಂಡಿದ್ದನು. ಇದರ ನಂತರ, ಸೂರಜ್‌ನ ತಂದೆ, ತಾಯಿ ಮತ್ತು ಸಹೋದರಿಯನ್ನು ಬಂಧಿಸಲಾಗಿತ್ತು. ಅವರು ಉತ್ರಾ ಅವರ ಸುಮಾರು 38 ಪವನ್ ಚಿನ್ನವನ್ನು ಮನೆಯ ಹಿಂದಿನ ರಬ್ಬರ್‌ ಎಸ್ಟೇಟ್‌ನಲ್ಲಿ ಗುಂಡಿತೋಡಿ ಬಚ್ಚಿಟ್ಟಿದ್ದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...