Homeಮುಖಪುಟಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶರು ಈ ಪ್ರಕರಣವು 'ಅಪರೂಪದಲ್ಲಿ ಅಪರೂಪ' ಎಂದು ಕರೆದಿದ್ದಾರೆ

- Advertisement -
- Advertisement -

ತನ್ನ ಪತ್ನಿ ‘ಉತ್ರಾ’ ಅವರಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ.

ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ ವಯಸ್ಸು ಮತ್ತು ಕ್ರಿಮಿನಲ್ ಹಿನ್ನಲೆ ಇಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿ ತೀರ್ಪಿತ್ತಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಪ್ರಾಸಿಕ್ಯೂಟರ್ ಪ್ರಕಾರ, ಕೊಲೆ ಮಾಡಿರುವುದಕ್ಕೆ ನೀಡಲಾಗಿರುವ ಜೀವಾವಧಿ ಅಲ್ಲದೆ, ಸೂರಜ್‌ ಕುಮಾರ್‌ಗೆ ಕೊಲೆ ಯತ್ನ ನಡೆಸಿದ ಅಪರಾಧಕ್ಕೆ ಜೀವಾವಧಿ ಘೋಷಿಸಲಾಗಿದೆ. ಜೊತೆಗೆ ಪತ್ನಿಗೆ ವಿಷದ ಮೂಲಕ ಹಾನಿ ಮಾಡಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆಯನ್ನು ಘೋಷಿಸಲಾಗಿದೆ. ಜೊತೆಗೆ ನ್ಯಾಯಾಲಯವು ಅಪರಾಧಿಗೆ ಒಟ್ಟು 5.85 ಲಕ್ಷ ದಂಡ ವಿಧಿಸಿದೆ.

“ಕೊಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದ್ದು, ವೈಜ್ಞಾನಿಕವಾಗಿ ಮತ್ತು ವೃತ್ತಿಪರವಾಗಿ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ. ಪ್ರಕರಣವೊಂದನ್ನು ಹೀಗೂ ತನಿಖೆ ಮಾಡಿ ಪತ್ತೆ ಮಾಡಬಹುದು ಎಂಬುದಕ್ಕೆ ಇದು ಒಂದು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಕೇರಳ ಡಿಜಿಪಿ ಹೇಳಿದ್ದಾರೆ.

ಸೂರಜ್‌ ಕುಮಾರ್‌ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ್ದ. ಅದಕ್ಕಿಂತಲೂ ಮುಂಚೆಯು ಆತ ಉತ್ರಾ ಅವರನ್ನು ಕೊಲೆ ಮಾಡಲು ಕೊಳಕು ಮಂಡಲ ಹಾವನ್ನು ಬಳಸಿದ್ದನು. ಆದರೆ ಕೊಲ್ಲಲಾಗಿರಲಿಲ್ಲ. ತದನಂತರ ಸೂರಜ್ ಕುಮಾರ್‌ ನಾಗರ ಹಾವನ್ನು ಹಲವು ದಿನಗಳ ಕಾಲ ಹಸಿವಿನಲ್ಲಿ ಕೆಡವಿದ್ದನು.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಹಾವು ಬಳಸಿ ಕೊಲೆ ಮಾಡಿದಂತಹ ಈ ಪ್ರಕರಣವು ಇಡೀ ದೇಶದಲ್ಲೆ ಮೊದಲು ಎಂದು ಲೈವ್ ಲಾ ವರದಿ ಮಾಡಿದೆ. ಇದೇ ರೀತಿ ಎರಡು ಪ್ರಕರಣಗಳು ಈ ಹಿಂದೆ ವರದಿಯಾಗಿತ್ತಾದರೂ, ಅದು ಸಾಬೀತಾಗದ ಕಾರಣ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ, ನಕಲಿ ಸರೀಸೃಪವನ್ನು ಬಳಸಿ ಮತ್ತು ಇಡೀ ಅಪರಾಧದ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು.

ಪ್ರಕರಣದ ಹಿನ್ನೆಲೆ:

ದೇಶವನ್ನೆ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, 25 ವರ್ಷದ ಗೃಹಿಣಿಯಾದ ಉತ್ರಾ 2020 ರ ಮೇ ತಿಂಗಳ 7 ರಂದು ಹಾವಿನ ಕಡಿತದಿಂದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಅದನ್ನು ನೈಸರ್ಗಿಕ ಹಾವು ಕಡಿತ ಎಂದು ಹೇಳಲಾಗಿತ್ತಾದರೂ, ಉತ್ರಾ ಅವರ ಕುಟುಂಬ ಅದನ್ನು ಕೊಲೆ ಎಂದು ಆರೋಪಿಸಿದ್ದರು.

ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬ ಉತ್ರಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿತ್ತು ಆರೋಪಿಸಿದ್ದರು. ಅಲ್ಲದೆ, ಮುಚ್ಚಿದ ಹವಾನಿಯಂತ್ರಿತ ಕೋಣೆಗೆ ಹಾವು ಬರಲು ಸಾಧ್ಯವಿಲ್ಲ. ಜೊತೆಗೆ ಮನೆಯ ನೆಲವು ಟೈಲ್ಸ್‌ ಹಾಕಿರುವುದರಿಂದ ಅದು ಅಸಾಧ್ಯ ಎಂದು ವಾದಿಸಿದ್ದರು. ಚಿನ್ನ ಮತ್ತು ಆಸ್ತಿಯನ್ನು ಪಡೆಯಲು ಈ ಹತ್ಯೆಯನ್ನು ನಡೆಸಲಾಗಿದೆ, ಈ ಘಟನೆಗೂ ಒಂಬತ್ತು ವಾರದ ಮುಂಚೆ ಕೂಡಾ ಉತ್ರಾ ಅವರಿಗೆ ಹಾವೊಂದು ಕಚ್ಚಿದ್ದರಿಂದ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ಹಾವಿನ ಶಾಪ ಕುಟುಂಬದ ಮೇಲಿದೆ ಎಂದು ಅವರನ್ನು ನಂಬಿಸಲಾಗಿತ್ತಾದರೂ, ಅದನ್ನು ನಂಬದ ಕುಟುಂಬ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಅದರಂತೆ, ಪೋಲಿಸ್ ತನಿಖೆ ಪ್ರಾರಂಭವಾಗಿ ಸೂರಜ್ ಕುಮಾರ್ ವಿರುದ್ದ 1000 ಪುಟಗಳ ಚಾರ್ಜ್ ಶೀಟ್ ತಯಾರಿಸಿದ್ದರು. ಇದರಲ್ಲಿ ಅವನ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದರು.

ಸೂರಜ್ ಕುಮಾರ್‌ ಜೊತೆಗೆ ಅವನಿಗೆ ಎರಡು ಹಾವಗಳನ್ನು ಪಡೆಯಲು ಸಹಾಯ ಮಾಡಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡಾ ಪೊಲೀಸರು ಬಂದಿಸಿದ್ದರು. ಸೂರಜ್ ಅವನಿಗೆ 10 ಸಾವಿರ ನೀಡಿ ಹಾವುಗಳನ್ನು ಖರೀದಿಸಿದ್ದನು. ಹಾವು ಮಾರಾಟ ಮಾಡಿದ ವ್ಯಕ್ತಿಗೆ ಸೂರಜ್ ಯಾಕಾಗಿ ತನ್ನಿಂದ ಹಾವುಗಳನ್ನು ಕೊಂಡುಕೊಂಡಿದ್ದಾನೆ ಎಂಬ ವಿಷಯ ತಿಳಿದಿರಲಿಲ್ಲ.

ಪೊಲೀಸ್‌ ವಿಚಾರಣೆಯ ಸಮಯದಲ್ಲಿ ಸೂರಜ್ ಕುಮಾರ್‌ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದನು. ತನ್ನ ಹೆಂಡತಿಯನ್ನು ಕೊಲ್ಲುವ ಉದ್ದೇಶದಿಂದ ಎರಡು ಹಾವುಗಳನ್ನು ಹಸಿವಿನಲ್ಲಿ ಕೆಡವಿ ಜಾರ್‌ ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದೆ ಎಂದು ಒಪ್ಪಿಕೊಂಡಿದ್ದನು. ಇದರ ನಂತರ, ಸೂರಜ್‌ನ ತಂದೆ, ತಾಯಿ ಮತ್ತು ಸಹೋದರಿಯನ್ನು ಬಂಧಿಸಲಾಗಿತ್ತು. ಅವರು ಉತ್ರಾ ಅವರ ಸುಮಾರು 38 ಪವನ್ ಚಿನ್ನವನ್ನು ಮನೆಯ ಹಿಂದಿನ ರಬ್ಬರ್‌ ಎಸ್ಟೇಟ್‌ನಲ್ಲಿ ಗುಂಡಿತೋಡಿ ಬಚ್ಚಿಟ್ಟಿದ್ದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...