Homeಮುಖಪುಟಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ...

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

- Advertisement -
- Advertisement -

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯನ್ನು ಗುರಿಯಾಗಿಸಿ ಬಿಜೆಪಿ ಬೆಂಬಲಿಗರು ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡುತ್ತಿದ್ದು ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇದು ರಾಷ್ಟ್ರೀಯತೆಯೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯಸಭಾ ಸಂಸದ ಗೋಖಲೆ, “ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ವಿರುದ್ಧ ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡಲಾಗುತ್ತಿರುವುದನ್ನು ಕಾಣುವುದು ಆಘಾತಕಾರಿಯಾಗಿದೆ. ವಿಷವನ್ನು ಹರಡುವ ಹೆಚ್ಚಿನ ಖಾತೆಗಳು ಬಿಜೆಪಿಗೆ ಸಂಬಂಧಿಸಿವೆ. ಏಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಅವರು ಕೋಮು ಸಾಮರಸ್ಯಕ್ಕಾಗಿ ಮನವಿ ಮಾಡಿದ ಕಾರಣ ಅವರ ಮೇಲೆ ಈ ದಾಳಿ ನಡೆಯುತ್ತಿದೆ ಎಂದು ಗೋಖಲೆ ಉಲ್ಲೇಖಿಸಿದ್ದಾರೆ.”ಐಟಿ ಸಚಿವ ಅಶ್ವಿನಿ ವೈಷ್ಣವ್ ಇದಕ್ಕೆ ಉತ್ತರಿಸಬೇಕು – ಈ ಖಾತೆಗಳನ್ನು ಏಕೆ ತೆಗೆದುಹಾಕುತ್ತಿಲ್ಲ ಅಥವಾ ನಿರ್ಬಂಧಿಸುತ್ತಿಲ್ಲ? ಹತ್ಯೆಗೀಡಾದ ಸಶಸ್ತ್ರ ಪಡೆ ಅಧಿಕಾರಿಯ ಸಂತ್ರಸ್ತ ಪತ್ನಿಯನ್ನು ಗುರಿಯಾಗಿಸಿಕೊಂಡಾಗಲೂ ನಿಮ್ಮ ಪಕ್ಷದ ಪರವಾಗಿರುವ ಟ್ರೋಲ್‌ಗಳು ಕಾನೂನಿನ ವ್ಯಾಪ್ತಿಯಿಂದ ಹೊರಗಿವೆಯೆ? ಇದು ನಿಮ್ಮ ‘ರಾಷ್ಟ್ರೀಯತೆ’ಯೇ?” ಎಂದು ಅವರು ಕೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಮೃತಪಟ್ಟ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ತಮ್ಮ ಪತಿಯ 27 ನೇ ಹುಟ್ಟುಹಬ್ಬದಂದು ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ಅವರು ಶಾಂತಿ ಮತ್ತು ಕೋಮು ಸೌಹಾರ್ದತೆಗಾಗಿ ಹೃತ್ಪೂರ್ವಕ ಮನವಿ ಮಾಡಿದ್ದರು. ಇದರ ನಂತರ ಬಿಜೆಪಿ ಬೆಂಬಲಿಗರು ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

ಕಾರ್ಯಕ್ರಮದಲ್ಲಿ ಹಿಮಾಂಶಿ ಅವರು, “ಜನರು ಮುಸ್ಲಿಮರು ಅಥವಾ ಕಾಶ್ಮೀರಿಗಳ ಮೇಲೆ ಮುಗಿಬೀಳುವುದನ್ನು ನಾವು ಬಯಸುವುದಿಲ್ಲ. ನಮಗೆ ಈಗ ಶಾಂತಿ ಮಾತ್ರ ಬೇಕಾಗಿದೆ. ಖಂಡಿತ, ನಮಗೆ ನ್ಯಾಯ ಬೇಕು, ಆದರೆ ಸರ್ಕಾರವು ನಮಗೆ ಅನ್ಯಾಯ ಎಸಗಿದವರ ವಿರುದ್ಧ ನಿಖರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದ ಅವರು, ದೇಶವು ತನ್ನ ದಿವಂಗತ ಪತಿಗಾಗಿ ಪ್ರಾರ್ಥಿಸುವಂತೆ ಒತ್ತಾಯಿಸಿದ್ದರು.

ಅವರ ಈ ಹೇಳಿಕೆಯ ನಂತರ ಬಿಜೆಪಿ ಪರವಾಗಿರುವ ಹಲವಾರು ಜನರು ಅವರ ವಿರುದ್ಧ ನಿಂದನೆಗೆ ನಿಂತಿದ್ದು, ಕೋಮು ಪ್ರತೀಕಾರ ಮಾಡದಂತೆ ಅವರು ಕರೆ ನೀಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಂಡು ಟ್ರೋಲ್‌ಗಳನ್ನು ಮಾಡಲಾಗುತ್ತಿವೆ.

ಅದಾಗ್ಯೂ, ರಾಷ್ಟ್ರೀಯ ಮಹಿಳಾ ಆಯೋಗ (NCW) ಈ ಟ್ರೋಲಿಂಗ್ ಅನ್ನು ಖಂಡಿಸಿದ್ದು, ಇದನ್ನು “ದುರದೃಷ್ಟಕರ” ಎಂದು ಬಣ್ಣಿಸಿದೆ. ಮಹಿಳೆಯನ್ನು ಅವರ ಸೈದ್ಧಾಂತಿಕ ಅಭಿವ್ಯಕ್ತಿ ಅಥವಾ ವೈಯಕ್ತಿಕ ವಿಚಾರಕ್ಕಾಗಿ ಗುರಿಯಾಗಿಸಿಕೊಳ್ಳುವುದು ಸರಿಯಲ್ಲ ಎಂದು ಪ್ರತಿಪಾದಿಸಿದೆ.

“ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮರಣದ ನಂತರ, ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರ ಹೇಳಿಕೆಗಳಲ್ಲಿ ಒಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗುತ್ತಿರುವ ರೀತಿ ದುರದೃಷ್ಟಕರ” ಎಂದು NCW ಎಕ್ಸ್‌ನಲ್ಲಿ ತಿಳಿಸಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಹಿಮಾಂಶಿ ಅವರನ್ನು ಬೆಂಬಲಿಸಿ, ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ ಮತ್ತು ದೇಶವು ಅವರ ಸಂದೇಶದಿಂದ ಸ್ಫೂರ್ತಿ ಪಡೆಯಬೇಕೆಂದು ಹೇಳಿದ್ದಾರೆ.

“ತನ್ನ ಪತಿಯ ಹುತಾತ್ಮತೆಯ ಹೊರತಾಗಿಯೂ, ಭಾರತೀಯರು ಕಾಶ್ಮೀರಿಗಳನ್ನು ಅಥವಾ ಮುಸ್ಲಿಮರನ್ನು ದೂಷಿಸಬಾರದು ಮತ್ತು ಗುರಿಯಾಗಿಸಬಾರದು ಎಂದು ಒತ್ತಾಯಿಸಿದ ಹಿಮಾಂಶಿ ನರ್ವಾಲ್ ಅವರಿಂದ ನಾವು ಸ್ಫೂರ್ತಿ ಪಡೆಯಬೇಕು” ಎಂದು ಮುಫ್ತಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ದಾಳಿಗೆ ಕೆಲವು ದಿನಗಳ ಹಿಂದೆಯಷ್ಟೆ ಹಿಮಾಂಶಿ ಅವರನ್ನು ವಿವಾಹವಾದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ದುರಂತ ಹತ್ಯೆಯು ದೇಶವನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಅಂತಿಮ ವಿಧಿವಿಧಾನಗಳನ್ನು ಅವರ ಹುಟ್ಟೂರು ಹರಿಯಾಣದ ಕರ್ನಾಲ್‌ನಲ್ಲಿ ನಡೆಸಲಾಯಿತು. ನೌಕಾಪಡೆಯ ಸಿಬ್ಬಂದಿ ಗುಂಡು ಹಾರಿಸಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...