Homeಮುಖಪುಟಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ...

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

- Advertisement -
- Advertisement -

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯನ್ನು ಗುರಿಯಾಗಿಸಿ ಬಿಜೆಪಿ ಬೆಂಬಲಿಗರು ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡುತ್ತಿದ್ದು ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇದು ರಾಷ್ಟ್ರೀಯತೆಯೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯಸಭಾ ಸಂಸದ ಗೋಖಲೆ, “ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ವಿರುದ್ಧ ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡಲಾಗುತ್ತಿರುವುದನ್ನು ಕಾಣುವುದು ಆಘಾತಕಾರಿಯಾಗಿದೆ. ವಿಷವನ್ನು ಹರಡುವ ಹೆಚ್ಚಿನ ಖಾತೆಗಳು ಬಿಜೆಪಿಗೆ ಸಂಬಂಧಿಸಿವೆ. ಏಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಅವರು ಕೋಮು ಸಾಮರಸ್ಯಕ್ಕಾಗಿ ಮನವಿ ಮಾಡಿದ ಕಾರಣ ಅವರ ಮೇಲೆ ಈ ದಾಳಿ ನಡೆಯುತ್ತಿದೆ ಎಂದು ಗೋಖಲೆ ಉಲ್ಲೇಖಿಸಿದ್ದಾರೆ.”ಐಟಿ ಸಚಿವ ಅಶ್ವಿನಿ ವೈಷ್ಣವ್ ಇದಕ್ಕೆ ಉತ್ತರಿಸಬೇಕು – ಈ ಖಾತೆಗಳನ್ನು ಏಕೆ ತೆಗೆದುಹಾಕುತ್ತಿಲ್ಲ ಅಥವಾ ನಿರ್ಬಂಧಿಸುತ್ತಿಲ್ಲ? ಹತ್ಯೆಗೀಡಾದ ಸಶಸ್ತ್ರ ಪಡೆ ಅಧಿಕಾರಿಯ ಸಂತ್ರಸ್ತ ಪತ್ನಿಯನ್ನು ಗುರಿಯಾಗಿಸಿಕೊಂಡಾಗಲೂ ನಿಮ್ಮ ಪಕ್ಷದ ಪರವಾಗಿರುವ ಟ್ರೋಲ್‌ಗಳು ಕಾನೂನಿನ ವ್ಯಾಪ್ತಿಯಿಂದ ಹೊರಗಿವೆಯೆ? ಇದು ನಿಮ್ಮ ‘ರಾಷ್ಟ್ರೀಯತೆ’ಯೇ?” ಎಂದು ಅವರು ಕೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಮೃತಪಟ್ಟ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ತಮ್ಮ ಪತಿಯ 27 ನೇ ಹುಟ್ಟುಹಬ್ಬದಂದು ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ಅವರು ಶಾಂತಿ ಮತ್ತು ಕೋಮು ಸೌಹಾರ್ದತೆಗಾಗಿ ಹೃತ್ಪೂರ್ವಕ ಮನವಿ ಮಾಡಿದ್ದರು. ಇದರ ನಂತರ ಬಿಜೆಪಿ ಬೆಂಬಲಿಗರು ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

ಕಾರ್ಯಕ್ರಮದಲ್ಲಿ ಹಿಮಾಂಶಿ ಅವರು, “ಜನರು ಮುಸ್ಲಿಮರು ಅಥವಾ ಕಾಶ್ಮೀರಿಗಳ ಮೇಲೆ ಮುಗಿಬೀಳುವುದನ್ನು ನಾವು ಬಯಸುವುದಿಲ್ಲ. ನಮಗೆ ಈಗ ಶಾಂತಿ ಮಾತ್ರ ಬೇಕಾಗಿದೆ. ಖಂಡಿತ, ನಮಗೆ ನ್ಯಾಯ ಬೇಕು, ಆದರೆ ಸರ್ಕಾರವು ನಮಗೆ ಅನ್ಯಾಯ ಎಸಗಿದವರ ವಿರುದ್ಧ ನಿಖರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದ ಅವರು, ದೇಶವು ತನ್ನ ದಿವಂಗತ ಪತಿಗಾಗಿ ಪ್ರಾರ್ಥಿಸುವಂತೆ ಒತ್ತಾಯಿಸಿದ್ದರು.

ಅವರ ಈ ಹೇಳಿಕೆಯ ನಂತರ ಬಿಜೆಪಿ ಪರವಾಗಿರುವ ಹಲವಾರು ಜನರು ಅವರ ವಿರುದ್ಧ ನಿಂದನೆಗೆ ನಿಂತಿದ್ದು, ಕೋಮು ಪ್ರತೀಕಾರ ಮಾಡದಂತೆ ಅವರು ಕರೆ ನೀಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಂಡು ಟ್ರೋಲ್‌ಗಳನ್ನು ಮಾಡಲಾಗುತ್ತಿವೆ.

ಅದಾಗ್ಯೂ, ರಾಷ್ಟ್ರೀಯ ಮಹಿಳಾ ಆಯೋಗ (NCW) ಈ ಟ್ರೋಲಿಂಗ್ ಅನ್ನು ಖಂಡಿಸಿದ್ದು, ಇದನ್ನು “ದುರದೃಷ್ಟಕರ” ಎಂದು ಬಣ್ಣಿಸಿದೆ. ಮಹಿಳೆಯನ್ನು ಅವರ ಸೈದ್ಧಾಂತಿಕ ಅಭಿವ್ಯಕ್ತಿ ಅಥವಾ ವೈಯಕ್ತಿಕ ವಿಚಾರಕ್ಕಾಗಿ ಗುರಿಯಾಗಿಸಿಕೊಳ್ಳುವುದು ಸರಿಯಲ್ಲ ಎಂದು ಪ್ರತಿಪಾದಿಸಿದೆ.

“ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮರಣದ ನಂತರ, ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರ ಹೇಳಿಕೆಗಳಲ್ಲಿ ಒಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗುತ್ತಿರುವ ರೀತಿ ದುರದೃಷ್ಟಕರ” ಎಂದು NCW ಎಕ್ಸ್‌ನಲ್ಲಿ ತಿಳಿಸಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಹಿಮಾಂಶಿ ಅವರನ್ನು ಬೆಂಬಲಿಸಿ, ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ ಮತ್ತು ದೇಶವು ಅವರ ಸಂದೇಶದಿಂದ ಸ್ಫೂರ್ತಿ ಪಡೆಯಬೇಕೆಂದು ಹೇಳಿದ್ದಾರೆ.

“ತನ್ನ ಪತಿಯ ಹುತಾತ್ಮತೆಯ ಹೊರತಾಗಿಯೂ, ಭಾರತೀಯರು ಕಾಶ್ಮೀರಿಗಳನ್ನು ಅಥವಾ ಮುಸ್ಲಿಮರನ್ನು ದೂಷಿಸಬಾರದು ಮತ್ತು ಗುರಿಯಾಗಿಸಬಾರದು ಎಂದು ಒತ್ತಾಯಿಸಿದ ಹಿಮಾಂಶಿ ನರ್ವಾಲ್ ಅವರಿಂದ ನಾವು ಸ್ಫೂರ್ತಿ ಪಡೆಯಬೇಕು” ಎಂದು ಮುಫ್ತಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ದಾಳಿಗೆ ಕೆಲವು ದಿನಗಳ ಹಿಂದೆಯಷ್ಟೆ ಹಿಮಾಂಶಿ ಅವರನ್ನು ವಿವಾಹವಾದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ದುರಂತ ಹತ್ಯೆಯು ದೇಶವನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಅಂತಿಮ ವಿಧಿವಿಧಾನಗಳನ್ನು ಅವರ ಹುಟ್ಟೂರು ಹರಿಯಾಣದ ಕರ್ನಾಲ್‌ನಲ್ಲಿ ನಡೆಸಲಾಯಿತು. ನೌಕಾಪಡೆಯ ಸಿಬ್ಬಂದಿ ಗುಂಡು ಹಾರಿಸಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...