Homeಮುಖಪುಟಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ...

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

- Advertisement -
- Advertisement -

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯನ್ನು ಗುರಿಯಾಗಿಸಿ ಬಿಜೆಪಿ ಬೆಂಬಲಿಗರು ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡುತ್ತಿದ್ದು ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇದು ರಾಷ್ಟ್ರೀಯತೆಯೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯಸಭಾ ಸಂಸದ ಗೋಖಲೆ, “ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ವಿರುದ್ಧ ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡಲಾಗುತ್ತಿರುವುದನ್ನು ಕಾಣುವುದು ಆಘಾತಕಾರಿಯಾಗಿದೆ. ವಿಷವನ್ನು ಹರಡುವ ಹೆಚ್ಚಿನ ಖಾತೆಗಳು ಬಿಜೆಪಿಗೆ ಸಂಬಂಧಿಸಿವೆ. ಏಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಅವರು ಕೋಮು ಸಾಮರಸ್ಯಕ್ಕಾಗಿ ಮನವಿ ಮಾಡಿದ ಕಾರಣ ಅವರ ಮೇಲೆ ಈ ದಾಳಿ ನಡೆಯುತ್ತಿದೆ ಎಂದು ಗೋಖಲೆ ಉಲ್ಲೇಖಿಸಿದ್ದಾರೆ.”ಐಟಿ ಸಚಿವ ಅಶ್ವಿನಿ ವೈಷ್ಣವ್ ಇದಕ್ಕೆ ಉತ್ತರಿಸಬೇಕು – ಈ ಖಾತೆಗಳನ್ನು ಏಕೆ ತೆಗೆದುಹಾಕುತ್ತಿಲ್ಲ ಅಥವಾ ನಿರ್ಬಂಧಿಸುತ್ತಿಲ್ಲ? ಹತ್ಯೆಗೀಡಾದ ಸಶಸ್ತ್ರ ಪಡೆ ಅಧಿಕಾರಿಯ ಸಂತ್ರಸ್ತ ಪತ್ನಿಯನ್ನು ಗುರಿಯಾಗಿಸಿಕೊಂಡಾಗಲೂ ನಿಮ್ಮ ಪಕ್ಷದ ಪರವಾಗಿರುವ ಟ್ರೋಲ್‌ಗಳು ಕಾನೂನಿನ ವ್ಯಾಪ್ತಿಯಿಂದ ಹೊರಗಿವೆಯೆ? ಇದು ನಿಮ್ಮ ‘ರಾಷ್ಟ್ರೀಯತೆ’ಯೇ?” ಎಂದು ಅವರು ಕೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಮೃತಪಟ್ಟ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ತಮ್ಮ ಪತಿಯ 27 ನೇ ಹುಟ್ಟುಹಬ್ಬದಂದು ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ಅವರು ಶಾಂತಿ ಮತ್ತು ಕೋಮು ಸೌಹಾರ್ದತೆಗಾಗಿ ಹೃತ್ಪೂರ್ವಕ ಮನವಿ ಮಾಡಿದ್ದರು. ಇದರ ನಂತರ ಬಿಜೆಪಿ ಬೆಂಬಲಿಗರು ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

ಕಾರ್ಯಕ್ರಮದಲ್ಲಿ ಹಿಮಾಂಶಿ ಅವರು, “ಜನರು ಮುಸ್ಲಿಮರು ಅಥವಾ ಕಾಶ್ಮೀರಿಗಳ ಮೇಲೆ ಮುಗಿಬೀಳುವುದನ್ನು ನಾವು ಬಯಸುವುದಿಲ್ಲ. ನಮಗೆ ಈಗ ಶಾಂತಿ ಮಾತ್ರ ಬೇಕಾಗಿದೆ. ಖಂಡಿತ, ನಮಗೆ ನ್ಯಾಯ ಬೇಕು, ಆದರೆ ಸರ್ಕಾರವು ನಮಗೆ ಅನ್ಯಾಯ ಎಸಗಿದವರ ವಿರುದ್ಧ ನಿಖರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದ ಅವರು, ದೇಶವು ತನ್ನ ದಿವಂಗತ ಪತಿಗಾಗಿ ಪ್ರಾರ್ಥಿಸುವಂತೆ ಒತ್ತಾಯಿಸಿದ್ದರು.

ಅವರ ಈ ಹೇಳಿಕೆಯ ನಂತರ ಬಿಜೆಪಿ ಪರವಾಗಿರುವ ಹಲವಾರು ಜನರು ಅವರ ವಿರುದ್ಧ ನಿಂದನೆಗೆ ನಿಂತಿದ್ದು, ಕೋಮು ಪ್ರತೀಕಾರ ಮಾಡದಂತೆ ಅವರು ಕರೆ ನೀಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಂಡು ಟ್ರೋಲ್‌ಗಳನ್ನು ಮಾಡಲಾಗುತ್ತಿವೆ.

ಅದಾಗ್ಯೂ, ರಾಷ್ಟ್ರೀಯ ಮಹಿಳಾ ಆಯೋಗ (NCW) ಈ ಟ್ರೋಲಿಂಗ್ ಅನ್ನು ಖಂಡಿಸಿದ್ದು, ಇದನ್ನು “ದುರದೃಷ್ಟಕರ” ಎಂದು ಬಣ್ಣಿಸಿದೆ. ಮಹಿಳೆಯನ್ನು ಅವರ ಸೈದ್ಧಾಂತಿಕ ಅಭಿವ್ಯಕ್ತಿ ಅಥವಾ ವೈಯಕ್ತಿಕ ವಿಚಾರಕ್ಕಾಗಿ ಗುರಿಯಾಗಿಸಿಕೊಳ್ಳುವುದು ಸರಿಯಲ್ಲ ಎಂದು ಪ್ರತಿಪಾದಿಸಿದೆ.

“ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮರಣದ ನಂತರ, ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರ ಹೇಳಿಕೆಗಳಲ್ಲಿ ಒಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗುತ್ತಿರುವ ರೀತಿ ದುರದೃಷ್ಟಕರ” ಎಂದು NCW ಎಕ್ಸ್‌ನಲ್ಲಿ ತಿಳಿಸಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಹಿಮಾಂಶಿ ಅವರನ್ನು ಬೆಂಬಲಿಸಿ, ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ ಮತ್ತು ದೇಶವು ಅವರ ಸಂದೇಶದಿಂದ ಸ್ಫೂರ್ತಿ ಪಡೆಯಬೇಕೆಂದು ಹೇಳಿದ್ದಾರೆ.

“ತನ್ನ ಪತಿಯ ಹುತಾತ್ಮತೆಯ ಹೊರತಾಗಿಯೂ, ಭಾರತೀಯರು ಕಾಶ್ಮೀರಿಗಳನ್ನು ಅಥವಾ ಮುಸ್ಲಿಮರನ್ನು ದೂಷಿಸಬಾರದು ಮತ್ತು ಗುರಿಯಾಗಿಸಬಾರದು ಎಂದು ಒತ್ತಾಯಿಸಿದ ಹಿಮಾಂಶಿ ನರ್ವಾಲ್ ಅವರಿಂದ ನಾವು ಸ್ಫೂರ್ತಿ ಪಡೆಯಬೇಕು” ಎಂದು ಮುಫ್ತಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ದಾಳಿಗೆ ಕೆಲವು ದಿನಗಳ ಹಿಂದೆಯಷ್ಟೆ ಹಿಮಾಂಶಿ ಅವರನ್ನು ವಿವಾಹವಾದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ದುರಂತ ಹತ್ಯೆಯು ದೇಶವನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಅಂತಿಮ ವಿಧಿವಿಧಾನಗಳನ್ನು ಅವರ ಹುಟ್ಟೂರು ಹರಿಯಾಣದ ಕರ್ನಾಲ್‌ನಲ್ಲಿ ನಡೆಸಲಾಯಿತು. ನೌಕಾಪಡೆಯ ಸಿಬ್ಬಂದಿ ಗುಂಡು ಹಾರಿಸಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...