Homeಮುಖಪುಟಪತ್ನಿಯ ದೇಹ ಪತಿಯ ಮಾಲಿಕತ್ವಕ್ಕೆ ಒಳಪಡುವುದಿಲ್ಲ - ಅಲಹಬಾದ್ ಹೈಕೋರ್ಟ್

ಪತ್ನಿಯ ದೇಹ ಪತಿಯ ಮಾಲಿಕತ್ವಕ್ಕೆ ಒಳಪಡುವುದಿಲ್ಲ – ಅಲಹಬಾದ್ ಹೈಕೋರ್ಟ್

- Advertisement -
- Advertisement -

ಹೆಂಡತಿಯ ದೇಹ, ಗೌಪ್ಯತೆ ಮತ್ತು ಹಕ್ಕುಗಳು ಅವಳ ಸ್ವಂತದ್ದಾಗಿದ್ದು, ಆಕೆಯ ಪತಿಯ ನಿಯಂತ್ರಣ ಅಥವಾ ಮಾಲೀಕತ್ವಕ್ಕೆ ಒಳಪಡುವುದಿಲ್ಲ ಎಂದು ಅರಿತುಕೊಳ್ಳಲು ಹಾಗೂ ಗಂಡಂದಿರ ವಿಕ್ಟೋರಿಯನ್ ಕಾಲದ ಹಳೆಯ ಮನಸ್ಥಿತಿಯನ್ನು ತೊಡೆದುಹಾಕಲು ಇದು ಸಕಾಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪತ್ನಿಯ ದೇಹ

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರ ಪೀಠವು ಪತ್ನಿ ತನ್ನ ಪತಿಯ ವಿಸ್ತರಣೆಯಲ್ಲ. ಅವಳಿಗೆ ತನ್ನದೇ ಆದ ಹಕ್ಕುಗಳು ಮತ್ತು ಆಸೆ ಆಕಾಂಕ್ಷೆಗಳನ್ನು ಹೊಂದಿರುವ ವ್ಯಕ್ತಿ ಎಂದು ಹೇಳಿದೆ. ಪತ್ನಿಯ ದೈಹಿಕ ಸ್ವಾಯತ್ತತೆ ಮತ್ತು ಗೌಪ್ಯತೆಯನ್ನು ಗೌರವಿಸುವುದು ಕಾನೂನು ಬಾಧ್ಯತೆ ಮಾತ್ರವಲ್ಲ, ನಿಜವಾದ ಸಮಾನ ಸಂಬಂಧವನ್ನು ಬೆಳೆಸುವಲ್ಲಿ ಗಂಡನ ನೈತಿಕ ಅಗತ್ಯವೂ ಆಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ಹೆಂಡತಿಗೆ ತಿಳಿಸದೆ ಮತ್ತು ಒಪ್ಪಿಗೆಯಿಲ್ಲದೆ ರಹಸ್ಯವಾಗಿ ಖಾಸಗಿ ಕ್ಷಣವನ್ನು ವೀಡಿಯೊ ರೆಕಾರ್ಡ್ ಮಾಡಿ, ನಂತರ ಅದನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ, ಜೊತೆಗೆ ಅದನ್ನು ಹೆಂಡತಿಯ ಸೋದರಸಂಬಂಧಿಯೊಂದಿಗೆ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸುವ ವೇಳೆ ನ್ಯಾಯಾಲಯ ಈ ಅವಲೋಕನ ಮಾಡಿದೆ.

ಪ್ರಕರಣದಲ್ಲಿ ಪತಿಯು ಚಾರ್ಜ್‌ಶೀಟ್ ಅನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದನು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸಂಪೂರ್ಣ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಬೇಕು ಎಂದು ಕೋರಿದ್ದನು. ಜೊತೆಗೆ ತಾನು ಕಾನೂನುಬದ್ಧವಾಗಿ ಪತಿಯಾಗಿರುವುದರಿಂದ ಐಟಿ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿದ್ದನು.

“ಪತ್ನಿಯ ದೇಹವು ಅವಳ ಸ್ವಂತ ಆಸ್ತಿಯಾಗಿದೆ. ಅವಳ ವೈಯಕ್ತಿಕ ಮತ್ತು ನಿಕಟ ಜೀವನದ ಎಲ್ಲಾ ಅಂಶಗಳಲ್ಲಿ ಅವಳ ಒಪ್ಪಿಗೆ ಪಡೆಯಬೇಕಾಗಿದೆ. ಗಂಡನ ಪಾತ್ರವು ಯಜಮಾನ ಅಥವಾ ಮಾಲೀಕನ ಪಾತ್ರವಲ್ಲ, ಬದಲಾಗಿ, ಸಮಾನ ಪಾಲುದಾರ ಮಾತ್ರವಾಗಿದೆ. ಅವನು ಪತ್ನಿಯ ಸ್ವಾಯತ್ತತೆ ಮತ್ತು ಪ್ರತ್ಯೇಕತೆಯನ್ನು ಗೌರವಿಸಲು ಬದ್ಧವಾಗಿರಬೇಕು. ಈ ಹಕ್ಕುಗಳನ್ನು ನಿಯಂತ್ರಿಸುವ ಅಥವಾ ಉಲ್ಲಂಘಿಸುವ ಪ್ರಯತ್ನಗಳು ಕಾನೂನಿನ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಮದುವೆಯು ಪತಿಗೆ ಮಾಲೀಕತ್ವವನ್ನು ನೀಡುವುದಿಲ್ಲ ಅಥವಾ ಅವನ ಹೆಂಡತಿಯ ಮೇಲೆ ನಿಯಂತ್ರಣವನ್ನು ನೀಡುವುದಿಲ್ಲ, ಹಾಗೂ ಮದುವೆಯು ಪತ್ನಿಯ ಸ್ವಾಯತ್ತತೆ ಅಥವಾ ಗೌಪ್ಯತೆಯ ಹಕ್ಕನ್ನು ದುರ್ಬಲಗೊಳಿಸುವುದಿಲ್ಲ. ಫೇಸ್‌ಬುಕ್‌ನಲ್ಲಿ ಖಾಸಗಿ ಕ್ಷಣದ ವೀಡಿಯೊವನ್ನು ಅಪ್‌ಲೋಡ್ ಮಾಡುವ ಮೂಲಕ, ಅರ್ಜಿದಾರ (ಪತಿ) ವೈವಾಹಿಕ ಸಂಬಂಧದ ಪವಿತ್ರತೆಯನ್ನು ಗಂಭೀರವಾಗಿ ಉಲ್ಲಂಘಿಸಿದ್ದಾರೆ.” ಎಂದು ಕೋರ್ಟ್‌ ಹೇಳಿದೆ. ಪತ್ನಿಯ ದೇಹ

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...