Homeಮುಖಪುಟಪತ್ನಿಯ ದೇಹ ಪತಿಯ ಮಾಲಿಕತ್ವಕ್ಕೆ ಒಳಪಡುವುದಿಲ್ಲ - ಅಲಹಬಾದ್ ಹೈಕೋರ್ಟ್

ಪತ್ನಿಯ ದೇಹ ಪತಿಯ ಮಾಲಿಕತ್ವಕ್ಕೆ ಒಳಪಡುವುದಿಲ್ಲ – ಅಲಹಬಾದ್ ಹೈಕೋರ್ಟ್

- Advertisement -
- Advertisement -

ಹೆಂಡತಿಯ ದೇಹ, ಗೌಪ್ಯತೆ ಮತ್ತು ಹಕ್ಕುಗಳು ಅವಳ ಸ್ವಂತದ್ದಾಗಿದ್ದು, ಆಕೆಯ ಪತಿಯ ನಿಯಂತ್ರಣ ಅಥವಾ ಮಾಲೀಕತ್ವಕ್ಕೆ ಒಳಪಡುವುದಿಲ್ಲ ಎಂದು ಅರಿತುಕೊಳ್ಳಲು ಹಾಗೂ ಗಂಡಂದಿರ ವಿಕ್ಟೋರಿಯನ್ ಕಾಲದ ಹಳೆಯ ಮನಸ್ಥಿತಿಯನ್ನು ತೊಡೆದುಹಾಕಲು ಇದು ಸಕಾಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪತ್ನಿಯ ದೇಹ

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರ ಪೀಠವು ಪತ್ನಿ ತನ್ನ ಪತಿಯ ವಿಸ್ತರಣೆಯಲ್ಲ. ಅವಳಿಗೆ ತನ್ನದೇ ಆದ ಹಕ್ಕುಗಳು ಮತ್ತು ಆಸೆ ಆಕಾಂಕ್ಷೆಗಳನ್ನು ಹೊಂದಿರುವ ವ್ಯಕ್ತಿ ಎಂದು ಹೇಳಿದೆ. ಪತ್ನಿಯ ದೈಹಿಕ ಸ್ವಾಯತ್ತತೆ ಮತ್ತು ಗೌಪ್ಯತೆಯನ್ನು ಗೌರವಿಸುವುದು ಕಾನೂನು ಬಾಧ್ಯತೆ ಮಾತ್ರವಲ್ಲ, ನಿಜವಾದ ಸಮಾನ ಸಂಬಂಧವನ್ನು ಬೆಳೆಸುವಲ್ಲಿ ಗಂಡನ ನೈತಿಕ ಅಗತ್ಯವೂ ಆಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ಹೆಂಡತಿಗೆ ತಿಳಿಸದೆ ಮತ್ತು ಒಪ್ಪಿಗೆಯಿಲ್ಲದೆ ರಹಸ್ಯವಾಗಿ ಖಾಸಗಿ ಕ್ಷಣವನ್ನು ವೀಡಿಯೊ ರೆಕಾರ್ಡ್ ಮಾಡಿ, ನಂತರ ಅದನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ, ಜೊತೆಗೆ ಅದನ್ನು ಹೆಂಡತಿಯ ಸೋದರಸಂಬಂಧಿಯೊಂದಿಗೆ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸುವ ವೇಳೆ ನ್ಯಾಯಾಲಯ ಈ ಅವಲೋಕನ ಮಾಡಿದೆ.

ಪ್ರಕರಣದಲ್ಲಿ ಪತಿಯು ಚಾರ್ಜ್‌ಶೀಟ್ ಅನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದನು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸಂಪೂರ್ಣ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಬೇಕು ಎಂದು ಕೋರಿದ್ದನು. ಜೊತೆಗೆ ತಾನು ಕಾನೂನುಬದ್ಧವಾಗಿ ಪತಿಯಾಗಿರುವುದರಿಂದ ಐಟಿ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿದ್ದನು.

“ಪತ್ನಿಯ ದೇಹವು ಅವಳ ಸ್ವಂತ ಆಸ್ತಿಯಾಗಿದೆ. ಅವಳ ವೈಯಕ್ತಿಕ ಮತ್ತು ನಿಕಟ ಜೀವನದ ಎಲ್ಲಾ ಅಂಶಗಳಲ್ಲಿ ಅವಳ ಒಪ್ಪಿಗೆ ಪಡೆಯಬೇಕಾಗಿದೆ. ಗಂಡನ ಪಾತ್ರವು ಯಜಮಾನ ಅಥವಾ ಮಾಲೀಕನ ಪಾತ್ರವಲ್ಲ, ಬದಲಾಗಿ, ಸಮಾನ ಪಾಲುದಾರ ಮಾತ್ರವಾಗಿದೆ. ಅವನು ಪತ್ನಿಯ ಸ್ವಾಯತ್ತತೆ ಮತ್ತು ಪ್ರತ್ಯೇಕತೆಯನ್ನು ಗೌರವಿಸಲು ಬದ್ಧವಾಗಿರಬೇಕು. ಈ ಹಕ್ಕುಗಳನ್ನು ನಿಯಂತ್ರಿಸುವ ಅಥವಾ ಉಲ್ಲಂಘಿಸುವ ಪ್ರಯತ್ನಗಳು ಕಾನೂನಿನ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಮದುವೆಯು ಪತಿಗೆ ಮಾಲೀಕತ್ವವನ್ನು ನೀಡುವುದಿಲ್ಲ ಅಥವಾ ಅವನ ಹೆಂಡತಿಯ ಮೇಲೆ ನಿಯಂತ್ರಣವನ್ನು ನೀಡುವುದಿಲ್ಲ, ಹಾಗೂ ಮದುವೆಯು ಪತ್ನಿಯ ಸ್ವಾಯತ್ತತೆ ಅಥವಾ ಗೌಪ್ಯತೆಯ ಹಕ್ಕನ್ನು ದುರ್ಬಲಗೊಳಿಸುವುದಿಲ್ಲ. ಫೇಸ್‌ಬುಕ್‌ನಲ್ಲಿ ಖಾಸಗಿ ಕ್ಷಣದ ವೀಡಿಯೊವನ್ನು ಅಪ್‌ಲೋಡ್ ಮಾಡುವ ಮೂಲಕ, ಅರ್ಜಿದಾರ (ಪತಿ) ವೈವಾಹಿಕ ಸಂಬಂಧದ ಪವಿತ್ರತೆಯನ್ನು ಗಂಭೀರವಾಗಿ ಉಲ್ಲಂಘಿಸಿದ್ದಾರೆ.” ಎಂದು ಕೋರ್ಟ್‌ ಹೇಳಿದೆ. ಪತ್ನಿಯ ದೇಹ

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...