Homeಮುಖಪುಟಪತ್ನಿಯ ದೇಹ ಪತಿಯ ಮಾಲಿಕತ್ವಕ್ಕೆ ಒಳಪಡುವುದಿಲ್ಲ - ಅಲಹಬಾದ್ ಹೈಕೋರ್ಟ್

ಪತ್ನಿಯ ದೇಹ ಪತಿಯ ಮಾಲಿಕತ್ವಕ್ಕೆ ಒಳಪಡುವುದಿಲ್ಲ – ಅಲಹಬಾದ್ ಹೈಕೋರ್ಟ್

- Advertisement -
- Advertisement -

ಹೆಂಡತಿಯ ದೇಹ, ಗೌಪ್ಯತೆ ಮತ್ತು ಹಕ್ಕುಗಳು ಅವಳ ಸ್ವಂತದ್ದಾಗಿದ್ದು, ಆಕೆಯ ಪತಿಯ ನಿಯಂತ್ರಣ ಅಥವಾ ಮಾಲೀಕತ್ವಕ್ಕೆ ಒಳಪಡುವುದಿಲ್ಲ ಎಂದು ಅರಿತುಕೊಳ್ಳಲು ಹಾಗೂ ಗಂಡಂದಿರ ವಿಕ್ಟೋರಿಯನ್ ಕಾಲದ ಹಳೆಯ ಮನಸ್ಥಿತಿಯನ್ನು ತೊಡೆದುಹಾಕಲು ಇದು ಸಕಾಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪತ್ನಿಯ ದೇಹ

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರ ಪೀಠವು ಪತ್ನಿ ತನ್ನ ಪತಿಯ ವಿಸ್ತರಣೆಯಲ್ಲ. ಅವಳಿಗೆ ತನ್ನದೇ ಆದ ಹಕ್ಕುಗಳು ಮತ್ತು ಆಸೆ ಆಕಾಂಕ್ಷೆಗಳನ್ನು ಹೊಂದಿರುವ ವ್ಯಕ್ತಿ ಎಂದು ಹೇಳಿದೆ. ಪತ್ನಿಯ ದೈಹಿಕ ಸ್ವಾಯತ್ತತೆ ಮತ್ತು ಗೌಪ್ಯತೆಯನ್ನು ಗೌರವಿಸುವುದು ಕಾನೂನು ಬಾಧ್ಯತೆ ಮಾತ್ರವಲ್ಲ, ನಿಜವಾದ ಸಮಾನ ಸಂಬಂಧವನ್ನು ಬೆಳೆಸುವಲ್ಲಿ ಗಂಡನ ನೈತಿಕ ಅಗತ್ಯವೂ ಆಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ಹೆಂಡತಿಗೆ ತಿಳಿಸದೆ ಮತ್ತು ಒಪ್ಪಿಗೆಯಿಲ್ಲದೆ ರಹಸ್ಯವಾಗಿ ಖಾಸಗಿ ಕ್ಷಣವನ್ನು ವೀಡಿಯೊ ರೆಕಾರ್ಡ್ ಮಾಡಿ, ನಂತರ ಅದನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ, ಜೊತೆಗೆ ಅದನ್ನು ಹೆಂಡತಿಯ ಸೋದರಸಂಬಂಧಿಯೊಂದಿಗೆ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸುವ ವೇಳೆ ನ್ಯಾಯಾಲಯ ಈ ಅವಲೋಕನ ಮಾಡಿದೆ.

ಪ್ರಕರಣದಲ್ಲಿ ಪತಿಯು ಚಾರ್ಜ್‌ಶೀಟ್ ಅನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದನು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸಂಪೂರ್ಣ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಬೇಕು ಎಂದು ಕೋರಿದ್ದನು. ಜೊತೆಗೆ ತಾನು ಕಾನೂನುಬದ್ಧವಾಗಿ ಪತಿಯಾಗಿರುವುದರಿಂದ ಐಟಿ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿದ್ದನು.

“ಪತ್ನಿಯ ದೇಹವು ಅವಳ ಸ್ವಂತ ಆಸ್ತಿಯಾಗಿದೆ. ಅವಳ ವೈಯಕ್ತಿಕ ಮತ್ತು ನಿಕಟ ಜೀವನದ ಎಲ್ಲಾ ಅಂಶಗಳಲ್ಲಿ ಅವಳ ಒಪ್ಪಿಗೆ ಪಡೆಯಬೇಕಾಗಿದೆ. ಗಂಡನ ಪಾತ್ರವು ಯಜಮಾನ ಅಥವಾ ಮಾಲೀಕನ ಪಾತ್ರವಲ್ಲ, ಬದಲಾಗಿ, ಸಮಾನ ಪಾಲುದಾರ ಮಾತ್ರವಾಗಿದೆ. ಅವನು ಪತ್ನಿಯ ಸ್ವಾಯತ್ತತೆ ಮತ್ತು ಪ್ರತ್ಯೇಕತೆಯನ್ನು ಗೌರವಿಸಲು ಬದ್ಧವಾಗಿರಬೇಕು. ಈ ಹಕ್ಕುಗಳನ್ನು ನಿಯಂತ್ರಿಸುವ ಅಥವಾ ಉಲ್ಲಂಘಿಸುವ ಪ್ರಯತ್ನಗಳು ಕಾನೂನಿನ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಮದುವೆಯು ಪತಿಗೆ ಮಾಲೀಕತ್ವವನ್ನು ನೀಡುವುದಿಲ್ಲ ಅಥವಾ ಅವನ ಹೆಂಡತಿಯ ಮೇಲೆ ನಿಯಂತ್ರಣವನ್ನು ನೀಡುವುದಿಲ್ಲ, ಹಾಗೂ ಮದುವೆಯು ಪತ್ನಿಯ ಸ್ವಾಯತ್ತತೆ ಅಥವಾ ಗೌಪ್ಯತೆಯ ಹಕ್ಕನ್ನು ದುರ್ಬಲಗೊಳಿಸುವುದಿಲ್ಲ. ಫೇಸ್‌ಬುಕ್‌ನಲ್ಲಿ ಖಾಸಗಿ ಕ್ಷಣದ ವೀಡಿಯೊವನ್ನು ಅಪ್‌ಲೋಡ್ ಮಾಡುವ ಮೂಲಕ, ಅರ್ಜಿದಾರ (ಪತಿ) ವೈವಾಹಿಕ ಸಂಬಂಧದ ಪವಿತ್ರತೆಯನ್ನು ಗಂಭೀರವಾಗಿ ಉಲ್ಲಂಘಿಸಿದ್ದಾರೆ.” ಎಂದು ಕೋರ್ಟ್‌ ಹೇಳಿದೆ. ಪತ್ನಿಯ ದೇಹ

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...