Homeಮುಖಪುಟಪಾಕಿಸ್ತಾನದಲ್ಲಿ ವಿಕಿಪೀಡಿಯಾ ಬ್ಯಾನ್‌: ಸರ್ಕಾರ ಘೋಷಣೆ

ಪಾಕಿಸ್ತಾನದಲ್ಲಿ ವಿಕಿಪೀಡಿಯಾ ಬ್ಯಾನ್‌: ಸರ್ಕಾರ ಘೋಷಣೆ

- Advertisement -
- Advertisement -

ಧರ್ಮನಿಂದೆಯ ವಿಷಯವನ್ನು ನಿರ್ಬಂಧಿಸದ ಅಥವಾ ತೆರವು ಮಾಡದ ಕಾರಣಕ್ಕಾಗಿ ಪಾಕಿಸ್ತಾನ ಸರ್ಕಾರವು ಶನಿವಾರ ವಿಕಿಪೀಡಿಯಾವನ್ನು ನಿಷೇಧಿಸಿರುವುದಾಗಿ ಪಾಕಿಸ್ತಾನದ ಮಾಧ್ಯಮವಾದ ‘ಡಾನ್‌’ ವರದಿ ಮಾಡಿದೆ.

ನಿರ್ದೇಶನಗಳನ್ನು ಅನುಸರಿಸಲು ವಿಕಿಪೀಡಿಯಾಕ್ಕೆ 48 ಗಂಟೆಗಳ ಗಡುವು ನೀಡಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸರ್ಕಾರ ಹೇಳಿದೆ.

ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರದ ವಕ್ತಾರ ಮಲಾಹತ್ ಒಬೈದ್ ಅವರು ಡಾನ್‌ಗೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ಆದೇಶಗಳನ್ನು ಅನುಸರಿಸದ ಕಾರಣಕ್ಕಾಗಿ ವಿಕಿಪೀಡಿಯಾವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

“ನಿಯಂತ್ರಕ ಪ್ರಾಧಿಕಾರದಿಂದ ಗುರುತಿಸಲ್ಪಟ್ಟಿರುವ ತ್ಯಾಗದ ವಿಷಯವನ್ನು ವಿಕಿಪೀಡಿಯಾವು ತೆಗೆದುಹಾಕಿದ ನಂತರ ನಿರ್ಧಾರವನ್ನು ಪರಿಶೀಲಿಸಬಹುದು” ಎಂದು ಸ್ಪಷ್ಟಪಡಿಸಿದ್ದಾರೆ.

ವೆಬ್‌ಸೈಟ್ ನಡೆಸುತ್ತಿರುವ ವಿಕಿಪೀಡಿಯಾ ಫೌಂಡೇಶನ್, “ವಿಕಿಪೀಡಿಯಾದಲ್ಲಿ ಯಾವ ವಿಷಯವನ್ನು ಸೇರಿಸಲಾಗಿದೆ ಅಥವಾ ಆ ವಿಷಯವನ್ನು ಹೇಗೆ ನಿರ್ವಹಿಸಲಾಗುತ್ತದೆ ಎಂಬುದರ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ಶುಕ್ರವಾರ ಹೇಳಿದೆ.

ಪಾಕಿಸ್ತಾನದಲ್ಲಿ ವಿಕಿಪೀಡಿಯಾ ಜಾಲತಾಣವನ್ನು ಮರುಸ್ಥಾಪಿಸಬೇಕು ಎಂದು ಫೌಂಡೇಷನ್‌ ಸರ್ಕಾರಕ್ಕೆ ತಿಳಿಸಿದೆ.

“ಪಾಕಿಸ್ತಾನದಲ್ಲಿ, ಇಂಗ್ಲಿಷ್ ವಿಕಿಪೀಡಿಯಾವು ತಿಂಗಳಿಗೆ 50 ಮಿಲಿಯನ್ ಪೇಜ್‌ ವೀವ್ಸ್‌ ಪಡೆಯುತ್ತದೆ” ಎಂದು ವಿಕಿಪೀಡಿಯಾ ಫೌಂಡೇಶನ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

“ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳ ಪೈಕಿ ಐದನೇ ಸ್ಥಾನದಲ್ಲಿರುವ ಪಾಕಿಸ್ತಾನದಲ್ಲಿ ವಿಕಿಪೀಡಿಯಾವನ್ನು ನಿರ್ಬಂಧಿಸಿದರೆ ಉಚಿತ ಜ್ಞಾನ ಭಂಡಾರವನ್ನೇ ನಿರಾಕರಿಸಿದಂತೆ. ಇದು ಮುಂದುವರಿದರೆ, ಪಾಕಿಸ್ತಾನದ ಜ್ಞಾನ, ಇತಿಹಾಸ ಮತ್ತು ಸಂಸ್ಕೃತಿಯನ್ನು ತಿಳಿಯುವುದನ್ನೇ ನಿರ್ಬಂಧಿಸಿದಂತೆ” ಎಂದಿದೆ.

“ಜ್ಞಾನವು ಮನುಷ್ಯನ ಹಕ್ಕಾಗಿದೆ. ವಿಕಿಪೀಡಿಯಾದಲ್ಲಿನ ಜ್ಞಾನದ ಕಾರಣಕ್ಕಾಗಿ ಪಾಕಿಸ್ತಾನ ಸರ್ಕಾರ ವಿಕಿಪೀಡಿಯಾ ಪ್ರವೇಶಕ್ಕೆ ಅನುಮತಿ ನೀಡುತ್ತದೆ ಎಂಬ ಭರವಸೆ ಇದೆ. ಇದರಿಂದಾಗಿ ಪಾಕಿಸ್ತಾನದ ಜನರು ಪ್ರಪಂಚದೊಂದಿಗೆ ಜ್ಞಾನವನ್ನು ಸ್ವೀಕರಿಸಲು ಮತ್ತು ಹಂಚಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಫೌಂಡೇಷನ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...