Homeಮುಖಪುಟವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಏಷ್ಯನ್ ನ್ಯೂಸ್ ಏಜೆನ್ಸಿ (ANI) ಸಂಸ್ಥೆಯ ವಿರುದ್ಧ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ವಿಕಿಪೀಡಿಯಾ ಪುಟ ಮತ್ತು ಇತರ ಚರ್ಚೆಗಳನ್ನು ತೆಗೆದುಹಾಕುವಂತೆ ನಿರ್ದೇಶಿಸುವ ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ. “ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆ ಮತ್ತು ಸಿಂಧುತ್ವದ ಬಗ್ಗೆ ನಮಗೆ ಕಳವಳ ಇದೆ” ಎಂದು ಪೀಠವು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿಕಿಪೀಡಿಯಾ vs ಎಎನ್‌ಐ ಪ್ರಕರಣ

ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ವಿಕಿಪೀಡಿಯಾ ಪುಟದಲ್ಲಿನ ವಿಷಯವು ನಡೆಯುತ್ತಿರುವ ನ್ಯಾಯಾಲಯದ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂಬ ದೆಹಲಿ ಹೈಕೋರ್ಟ್‌ನ ಅಭಿಪ್ರಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇದೇ ವೇಳೆ ನ್ಯಾಯಾಲಯವು ANI ಗೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 4 ರಂದು ಉತ್ತರಿಸಲು ಹೇಳಿದೆ.

ANI ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ವಿಚಾರಣೆ ನಡೆಸುವಾಗ, ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠವು “ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs. ವಿಕಿಮೀಡಿಯ ಫೌಂಡೇಶನ್” ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದುಹಾಕುವಂತೆ ನಿರ್ದೇಶಿಸಿತ್ತು. ವಿಕಿಪೀಡಿಯಾ vs ಎಎನ್‌ಐ ಪ್ರಕರಣ

ಪುಟದಲ್ಲಿನ ಕೆಲವು ಹೇಳಿಕೆಗಳು, ವಿಶೇಷವಾಗಿ ಭಾರತದಲ್ಲಿ ವಿಕಿಪೀಡಿಯಾವನ್ನು ಸ್ಥಗಿತಗೊಳಿಸುವಂತೆ ನ್ಯಾಯಾಧೀಶರು ಬೆದರಿಕೆ ಹಾಕಿದ್ದಾರೆ ಎಂಬ ಹೇಳಿಕೆಯು ಪ್ರಾಥಮಿಕವಾಗಿ ನ್ಯಾಯಾಲಯದ ನಿಂದನೆಗೆ ಸಮಾನವಾಗಿದೆ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು. ಪುಟದಲ್ಲಿನ ವಿಷಯ ಮತ್ತು ನಂತರದ ಚರ್ಚೆಗಳು ನ್ಯಾಯಾಲಯದ ವಿಚಾರಣೆಗೆ ಅಡ್ಡಿಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿತ್ತು.

ನ್ಯಾಯಾಲಯದ ವಿಚಾರಣೆಗಳ ಹೇಳಿಕೆಗಳು ಮತ್ತು ಟೀಕೆಗಳನ್ನು ಅಸಾಮಾನ್ಯವೆಂದು ನೋಡಲಾಗುವುದಿಲ್ಲ ಎಂದು ಸೂಚಿಸಿದ ನ್ಯಾಯಮೂರ್ತಿ ಓಕಾ, “ಈ ನ್ಯಾಯಾಲಯದಲ್ಲಿ, ನಾವು ವಿಷಯಗಳನ್ನು ಹೇಳುತ್ತೇವೆ ಮತ್ತು ಯಾರಾದರೂ ಅದರ ಬಗ್ಗೆ ಹೇಳಿಕೆ ನೀಡಲು ಬಯಸುತ್ತಾರೆ … ಅಂತದ್ದು ನಡೆಯುತ್ತದೆ. ಕೆಲವೊಮ್ಮೆ ಜನರು ನ್ಯಾಯಾಲಯವು ಪೂರ್ವಭಾವಿ ಮನಸ್ಸಿನಿಂದ ಇಲ್ಲಿ ಕುಳಿತಿದೆ ಎಂದು ಹೇಳುತ್ತಾರೆ ಅಥವಾ ನೀವು ವಿಚಾರಣೆಯನ್ನು ಮಾಡುತ್ತಿಲ್ಲ ಎಂದು ಹೇಳುತ್ತಾರೆ. ಜನರು ಇಂತಹ ಮಾತುಗಳನ್ನು ಹೇಳುತ್ತಲೆ ಇರುತ್ತಾರೆ, ಆದರೆ ಅದನ್ನು ನಾವು ಸಹಿಸಿಕೊಳ್ಳಬೇಕಾಗುತ್ತದೆ.” ಎಂದು ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಆದೇಶವನ್ನು ಟೀಕಿಸಿದ ಅವರು, “ವಕೀಲರು ಉತ್ತಮವಾದ ವಾದಗಳನ್ನು ಮಾಡಲು ಕೆಲವೊಮ್ಮೆ ನಾವು ಮುಕ್ತ ನ್ಯಾಯಾಲಯದಲ್ಲಿ ಅನೇಕ ವಿಷಯಗಳನ್ನು ಹೇಳುತ್ತೇವೆ. ಈಗ, ನ್ಯಾಯಾಲಯ ಮೌಖಿಕವಾಗಿ ಏನಾದರೂ ಹೇಳಿದರೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ, ಎಲ್ಲೋ ಒಂದು ಹೇಳಿಕೆ ನೀಡಲ್ಪಟ್ಟರೆ, ಅಂತಹ ಹೇಳಿಕೆಗಳ ಬಗ್ಗೆ ನ್ಯಾಯಾಲಯ ಏಕೆ ಕಟುವಾಗಿ ವರ್ತಿಸಬೇಕು… ನ್ಯಾಯಾಲಯದಲ್ಲಿ ನಡೆಯುವ ವಿಚಾರದ ಬಗ್ಗೆ ಜನರು ಏನನ್ನಾದರೂ ಚರ್ಚಿಸುತ್ತಾರೆ, ಅದಕ್ಕೆ ಹಸ್ತಕ್ಷೇಪಕ್ಕೆ ಮಾಡುವುದು ಸರಿಯೆ?” ಎಂದು ಹೇಳಿದ್ದಾರೆ.

ವಿಕಿಮೀಡಿಯಾ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ದೆಹಲಿ ಹೈಕೋರ್ಟ್ ಮಾನನಷ್ಟದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಿದೆ ಎಂದು ವಾದಿಸಿದ್ದಾರೆ. ಸಂಬಂಧಪಟ್ಟ ವಿಷಯವು ವಿಕಿಮೀಡಿಯಾದ್ದಲ್ಲ, ಬದಲಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಲೇಖನದಿಂದ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ANI ವಿರುದ್ಧ ಕೂಡಾ ತೀವ್ರವಾಗಿ ವಾಗ್ದಾಳಿ ನಡೆಸಿದರು. ಈ ವಿಷಯವು ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ. ವಿಕಿಮೀಡಿಯಾ ಪುಟದಲ್ಲಿನ ಹೇಳಿಕೆಗಳಿಗೆ ಕಾರಣರಾದ ವ್ಯಕ್ತಿಗಳು ನ್ಯಾಯಾಲಯದಲ್ಲಿ ಇಲ್ಲ ಎಂದು ANI ವಕೀಲರು ವಾದಿಸಿದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಓಕಾ, “ನೀವು ಒಂದು ಪ್ರಮುಖ ಅಂಶವನ್ನು ಕಳೆದುಕೊಂಡಿದ್ದೀರಿ. ಅಂತಿಮವಾಗಿ, ಇದು ಮಾಧ್ಯಮವಾಗಿದ್ದು. ಪ್ರಶ್ನೆಯಿರುವುದು ಮಾಧ್ಯಮದ ಸ್ವಾತಂತ್ರ್ಯದ ಬಗ್ಗೆ ಆಗಿದೆ.” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...