Homeಮುಖಪುಟವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ...

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

- Advertisement -
- Advertisement -

ಎರಡು ಸಂಸ್ಥೆಗಳ (ವಿಕಿಮೀಡಿಯ-ಎಎನ್‌ಐ) ನಡುವಿನ ಕಾನೂನು ವಿವಾದದ ಬಗ್ಗೆ ವಿವರಗಳನ್ನು ಹೊಂದಿರುವ ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದು ಹಾಕುವಂತೆ ವಿಕಿಮೀಡಿಯ ಫೌಂಡೇಶನ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.8) ರದ್ದುಗೊಳಿಸಿದೆ ಎಂದು barandbench.com ವರದಿ ಮಾಡಿದೆ.

ದೆಹಲಿ ಹೈಕೋರ್ಟ್‌ನಲ್ಲಿ ವಿಕಿಪೀಡಿಯಾ ವಿರುದ್ಧ ಎಎನ್‌ಐ ಸುದ್ದಿ ಸಂಸ್ಥೆ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ಸೇರಿದಂತೆ ಇತರ ಮಾಹಿತಿಗಳನ್ನು ವಿವಾದಕ್ಕೀಡಾಗಿದ್ದ ವಿಕಿಪೀಡಿಯಾ ಪುಟ ಹೊಂದಿದೆ.

“ಕಳೆದ ವರ್ಷದ ಈ ಪುಟಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದ ದೆಹಲಿ ಹೈಕೋರ್ಟ್, ನ್ಯಾಯಾಲಯದ ಅವಲೋಕನಗಳ ಕುರಿತ ಚರ್ಚೆಯು ನ್ಯಾಯಾಂಗ ನಿಂದನೆಗೆ ಕಾರಣವಾಗುತ್ತದೆ” ಎಂದು ಹೇಳಿತ್ತು.

ಹೈಕೋರ್ಟ್ ವಿಕಿಪೀಡಿಯ ಪುಟ ತೆಗೆದು ಹಾಕುವಂತೆ ಹೊರಡಿಸಿದ್ದ ಆದೇಶದ ವಿರುದ್ಧ ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ನ್ಯಾಯಪೀಠ ಗುರುವಾರ ಪುರಸ್ಕರಿಸಿದೆ.

“ಹೈಕೋರ್ಟ್ ಹೊರಡಿಸಿದ ನಿರ್ದೇಶನವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಲು ನಮಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಮಾಧ್ಯಮಗಳಿಗೆ ವಿಷಯವನ್ನು ಅಳಿಸಲು ಅಥವಾ ತೆಗೆದುಹಾಕಲು ಹೇಳುವುದು ನ್ಯಾಯಾಂಗದ ಕೆಲಸವಲ್ಲ. ಅಂತಹ ಆದೇಶವನ್ನು ಸೂಕ್ತ ಕ್ರಮಗಳಲ್ಲಿ ಪ್ರಶ್ನಿಸಲು ಮಾಧ್ಯಮಗಳಿಗೆ ಮುಕ್ತ ಅವಕಾಶವಿದೆ” ಎಂದಿದೆ.

“ಉದಾರವಾದಿ ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗ ಮತ್ತು ಮಾಧ್ಯಮಗಳು ಪರಸ್ಪರ ಬೆಂಬಲಿಸಬೇಕು” ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಖಿಲ್ ಸಿಬಲ್, ಟ್ರೈಲೀಗಲ್‌ನ ವಕೀಲರಾದ ನಿಖಿಲ್ ನರೇಂದ್ರನ್ ಮತ್ತು ಟೈನ್ ಅಬ್ರಹಾಂ ಜೊತೆಗೆ ಎಝೆಡ್‌ಬಿ & ಪಾರ್ಟ್‌ನರ್ಸ್‌ನ ವಕೀಲರಾದ ವಿಜಯೇಂದ್ರ ಪ್ರತಾಪ್ ಸಿಂಗ್ ಮತ್ತು ಅಭಿಜ್ಞಾನ್ ಝಾ ವಿಕಿಪೀಡಿಯಾ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವಕೀಲ ಸಾಹಿಲ್ ತಗೋತ್ರ ಅವರೊಂದಿಗೆ ವಕೀಲ ಸಿದ್ಧಾಂತ್ ಕುಮಾರ್ ಅವರು ಎನ್‌ಎನ್‌ಐ ಪರವಾಗಿ ವಾದ ಮಂಡಿಸಿದ್ದರು.

ವಿಕಿಪೀಡಿಯಾ ಪುಟವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಈ ಹಿಂದೆ ಟೀಕಿಸಿದ್ದ ಸುಪ್ರೀಂ ಕೋರ್ಟ್, “ನ್ಯಾಯಾಧೀಶರು ಇಷ್ಟಪಡುವುದಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್‌ ಪ್ರಕ್ರಿಯೆಗಳ ಕುರಿತಾದ ಮಾಹಿತಿಯನ್ನು ತೆಗೆದುಹಾಕುವಂತೆ ಆದೇಶಿಸಲು ಸಾಧ್ಯವಿಲ್ಲ” ಎಂದಿತ್ತು.

ಎಎನ್‌ಐ ಕುರಿತಾದ ವಿಕಿಪೀಡಿಯಾ ಪುಟದಲ್ಲಿ, ‘ಅದು (ಎಎನ್‌ಐ) ಪ್ರಸ್ತುತ ಕೇಂದ್ರ ಸರ್ಕಾರದ ಪ್ರಚಾರ ಸಾಧನ’ ಎಂದು ಮಾಹಿತಿ ಎಡಿಟ್ ಮಾಡಲು ವಿಕಿಮೀಡಿಯಾ ಫೌಂಡೇಶನ್ ಅನುಮತಿಸಿದೆ ಎಂದು ಆರೋಪಿಸಿ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿರುವುದು ಈ ಪ್ರಕರಣದ ಮೂಲ.

ಎಎನ್‌ಐ ಹೂಡಿರುವ ಮೊಕದ್ದಮೆ ಸಂಬಂಧ ಜುಲೈ 9, 2024 ರಂದು ವಿಕಿಪೀಡಿಯಾದ ಮಾತೃ ಸಂಸ್ಥೆ ವಿಕಿಮೀಡಿಯಾ ಫೌಂಡೇಶನ್‌ಗೆ ಸಮನ್ಸ್ ಜಾರಿ ಮಾಡಿದ್ದ ದೆಹಲಿ ಹೈಕೋರ್ಟ್, ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ವಿಷಯಗಳನ್ನು ಎಡಿಟ್ ಮಾಡಿದ ಮೂವರ ಮಾಹಿತಿ ಬಹಿರಂಗಪಡಿಸುವಂತೆ ಆದೇಶಿಸಿತ್ತು.

ನಂತರ, ಹೈಕೋರ್ಟ್ ಆದೇಶವನ್ನು ವಿಕಿಮೀಡಿಯಾ ಪಾಲಿಸಿಲ್ಲ ಎಂದು ಆರೋಪಿಸಿದ್ದ ಎಎನ್‌ಐ, ಹೈಕೋರ್ಟ್‌ನ ಏಕ ಸದಸ್ಯ ಪೀಠದ ಮುಂದೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಸೆಪ್ಟೆಂಬರ್ 5, 2024ರಂದು ಏಕ ಸದಸ್ಯ ಪೀಠದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು ವಿಕಿಮೀಡಿಯಾದ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಕ್ಟೋಬರ್ 25ರಂದು ವಿಕಿಮೀಡಿಯಾದ ಅಧಿಕೃತ ಪ್ರತಿನಿಧಿಯೊಬ್ಬರು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಿರಬೇಕು ಎಂದು ಆದೇಶಿಸಿದ್ದರು. ನಂತರ ವಿಕಿಮೀಡಿಯಾ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಈ ವಿಷಯ ವಿಭಾಗೀಯ ಪೀಠದ ಮುಂದೆ ಬಂದಾಗ, ಪ್ರಕರಣದ ಬಗ್ಗೆಯೇ ಒಂದು ಪುಟವನ್ನು ರಚಿಸಲಾಗಿದೆ ಎಂದು ಪೀಠ ಗಮನಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟವನ್ನು ಪ್ರಕಟಿಸಲು ಅನುಮತಿಸಿದ್ದಕ್ಕೆ ಹೈಕೋರ್ಟ್ ವಿಕಿಪೀಡಿಯಾ ವಿರುದ್ದ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಮುಖ್ಯ ನ್ಯಾಯಮೂರ್ತಿ ಮನಮೋಹನ್ (ಈಗ ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದಿದ್ದಾರೆ) ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠವು ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ಪುಟವನ್ನು ತೆಗೆದು ಹಾಕುವಂತೆ ವಿಕಿಪೀಡಿಯಾಗೆ ಆದೇಶಿಸಿತ್ತು.

ವಿಕಿಪೀಡಿಯಾ ಆದೇಶವನ್ನು ಪಾಲಿಸಿದರೂ, ಅದು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಈ ನಡುವೆ, ಎಎನ್‌ಐ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ಸೇರಿಸಲಾದ ಮಾನನಷ್ಟಕರ ಮಾಹಿತಿಗಳನ್ನು ತೆಗೆದು ಹಾಕುವಂತೆ ವಿಕಿಪೀಡಿಯಾಗೆ ಏಪ್ರಿಲ್ 2ರಂದು ಮಧ್ಯಂತರ ಆದೇಶ ಆದೇಶ ನೀಡಿತ್ತು.

ಈ ಆದೇಶವನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 17 ರಂದು ರದ್ದುಗೊಳಿಸಿದೆ. ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರು ಹೊಸದಾಗಿ ವಿಚಾರಣೆ ನಡೆಸಲಿದ್ದಾರೆ.

ಹೊಸ ವಿಚಾರಣೆ ಆರಂಭ

ಎಎನ್‌ಐ ಮತ್ತು ವಿಕಿಮೀಡಿಯಾ ನಡುವಿನ ಮಾನನಷ್ಟ ಪ್ರಕರಣದ ಹೊಸ ವಿಚಾರಣೆ ಗುರುವಾರ ದೆಹಲಿ ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರ ಪೀಠ ಆರಂಭಿಸಿದೆ.

ವಿಕಿಪೀಡಿಯಾದಲ್ಲಿ ತನ್ನ ಬಗ್ಗೆ ಇರುವ ಮಾನನಷ್ಟಕರ ಮಾಹಿತಿಗೆ ಎಎನ್‌ಐ ಮಧ್ಯಂತರ ತಡೆಯಾಜ್ಞೆ ಕೋರಿದೆ. ಈ ಹಿನ್ನೆಲೆ, ವಿಕಿಪೀಡಿಯಾದ ಮಾತೃ ಸಂಸ್ಥೆ ವಿಕಿಮೀಡಿಯಾ ಫೌಂಡೇಶನ್‌ಗೆ ಶುಕ್ರವಾರ (ಮೇ.8) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದು, ಜುಲೈ 7ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದ್ದಾರೆ.

ವಿಕಿಮೀಡಿಯಾದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಖಿಲ್ ಸಿಬಲ್, ನೋಟಿಸ್‌ಗೆ ಉತ್ತರಿಸಲು ಹೆಚ್ಚಿನ ಕಾಲವಕಾಶ ಕೋರಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಿಂಗ್ ಅವರು, ಎಎನ್‌ಐ ಆರೋಪ ನಿಜವೆಂದು ಕಂಡುಬಂದರೆ ಅದರ ಪರಿಣಾಮವನ್ನು ಯಾರು ಎದುರಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ಎಎನ್‌ಐ ಪರ ವಕೀಲ ಸಿದ್ಧಾಂತ್ ಕುಮಾರ್ ಅವರು ವಾದ ಮಂಡಿಸಿ, ವಿಕಿಪೀಡಿಯಾ ಮಧ್ಯವರ್ತಿಯಾಗಿರುವುದರಿಂದ (ಮಾಹಿತಿ ಎಡಿಟ್ ಮಾಡಿದವರು ಪಕ್ಷಕಾರರು ಎಂದರ್ಥ) ಅರ್ಹತೆಯ ಆಧಾರದ ಮೇಲೆ ಈ ವಿಷಯವನ್ನು ಪ್ರಶ್ನಿಸಲು ಯಾವುದೇ ಅರ್ಹತೆ ಇಲ್ಲ ಎಂದಿದ್ದಾರೆ.

ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...