Homeಕರ್ನಾಟಕಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

ಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

- Advertisement -
- Advertisement -

ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಪ್ರಶ್ನಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ, “ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

“ಲಾಕ್‌ಡೌನ್‌ ಬಳಿಕ ಅಪರಾಧ ಪ್ರಕರಣಗಳು ಶೇ. 20ರಷ್ಟು ಹೆಚ್ಚಾಗಿದೆ ಎಂದು ಬಸವರಾಜ್‌ ಬೊಮ್ಮಾಯಿಯವರೇ 15 ದಿನಗಳ ಹಿಂದೆ ಒಪ್ಪಿಕೊಂಡಿದ್ದರು. ಆದರೂ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ನಡೆಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನೇಕ ಠಾಣೆಗಳಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆರಿಗೆ ಹೆಚ್ಚಳದ ವಿರುದ್ದ ದೆಹಲಿಯಲ್ಲಿ ಸಹಿ ಸಂಗ್ರಹ ಮಾಡುತ್ತಿರುವ ಎಎಪಿ; ಬಿಜೆಪಿ ಪ್ರತಿಕ್ರಿಯಿಸಿದ್ದೇನು?

’ಜೂನ್‌ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 703 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಕಳೆದ 35 ದಿನಗಳಲ್ಲಿ ಮಾಜಿ ಜನಪ್ರತಿನಿಧಿ, ಕೂಲಿ ಕಾರ್ಮಿಕ, ಗೃಹಿಣಿ, ಆಟೋ ಚಾಲಕರು ಸೇರಿದಂತೆ ಬೆಂಗಳೂರಿನ 8 ಮಂದಿಯ ಕೊಲೆಯಾಗಿದೆ. ಕಳೆದ ಏಳು ತಿಂಗಳಿನಲ್ಲಿ ರಾಜಧಾನಿಯಲ್ಲಿ 82 ಕೊಲೆ, 22 ಡಕಾಯಿತಿ, 87 ಸರಗಳ್ಳತನ, 219 ದರೋಡೆ, 304 ಲೈಂಗಿಕ ಕಿರುಕುಳ, 521 ಕಳವು ಪ್ರಕರಣ ದಾಖಲಾಗಿವೆ. ಪುಡಿ ರೌಡಿಗಳೂ ಕೂಡ ಕೊಲೆಯಂತಹ ಭೀಕರ ಅಪರಾಧ ಮಾಡುತ್ತಿದ್ದಾರೆ. ಪೊಲೀಸರೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅಪರಾಧಿಗಳು ರಾಜಾರೋಷವಾಗಿ ಹಾಗೂ ಜನಸಾಮಾನ್ಯರು ಹೆದರಿಕೆಯಿಂದ ಬದುಕುವಂತೆ ಮಾಡಿರುವುದೇ ಬೊಮ್ಮಾಯಿಯವರ ಸಾಧನೆ’ ಎಂದು ಜಗದೀಶ್‌ ಸದಂ ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ನಾಯಕ ವಿಜಯ್‌ ಶಾಸ್ತ್ರಿಮಠ್‌ ಮಾತನಾಡಿ, “ರಾಜ್ಯದಲ್ಲಿ ಸೈಬರ್‌ ಅಪರಾಧಗಳು ಕೂಡ ಹೆಚ್ಚಾಗುತ್ತಿದೆ. ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಅವರ ಸ್ನೇಹಿತರಿಗೆಲ್ಲ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿ ಹಣ ಕೇಳುವ ದೊಡ್ಡ ಜಾಲವಿದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೇರಿದಂತೆ ರಾಜ್ಯದ ಲಕ್ಷಕ್ಕೂ ಅಧಿಕ ಸಾಮಾಜಿಕ ತಾಣ ಬಳಕೆದಾರರು ಇದರಿಂದ ತೊಂದರೆ ಅನುಭವಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಇಂತಹ ಯಾವುದೇ ಪ್ರಕರಣವನ್ನು ಬೇಧಿಸಿಲ್ಲ. ಇದರಿಂದಾಗಿ ಜನರು ಸಾಮಾಜಿಕ ತಾಣಗಳಿಂದ ದೂರವಾಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ” ಎಂದಿದ್ದಾರೆ.

“ಈ ಬಗ್ಗೆ ಮುಖ್ಯಮಂತ್ರಿಗಳು ಕೂಡಲೇ ಉನ್ನತ ಅಧಿಕಾರಿಗಳ ಸಭೆ ಕರೆದು, ಅಪರಾಧಗಳಿಗೆ ಕಡಿವಾಣ ಹಾಕುವ ಬಗ್ಗೆ ಗಂಭಿರವಾಗಿ ಚರ್ಚಿಸಬೇಕು. ಒಂದು ತಿಂಗಳೊಳಗೆ ʻಶೂನ್ಯ ಅಪರಾಧಗಳ ರಾಜ್ಯʼ ಎಂಬ ಖ್ಯಾತಿಗೆ ಕರ್ನಾಟಕ ಪಾತ್ರವಾಗುವಂತೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...