Homeಕರ್ನಾಟಕಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

ಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

- Advertisement -
- Advertisement -

ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಪ್ರಶ್ನಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ, “ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

“ಲಾಕ್‌ಡೌನ್‌ ಬಳಿಕ ಅಪರಾಧ ಪ್ರಕರಣಗಳು ಶೇ. 20ರಷ್ಟು ಹೆಚ್ಚಾಗಿದೆ ಎಂದು ಬಸವರಾಜ್‌ ಬೊಮ್ಮಾಯಿಯವರೇ 15 ದಿನಗಳ ಹಿಂದೆ ಒಪ್ಪಿಕೊಂಡಿದ್ದರು. ಆದರೂ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ನಡೆಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನೇಕ ಠಾಣೆಗಳಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆರಿಗೆ ಹೆಚ್ಚಳದ ವಿರುದ್ದ ದೆಹಲಿಯಲ್ಲಿ ಸಹಿ ಸಂಗ್ರಹ ಮಾಡುತ್ತಿರುವ ಎಎಪಿ; ಬಿಜೆಪಿ ಪ್ರತಿಕ್ರಿಯಿಸಿದ್ದೇನು?

’ಜೂನ್‌ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 703 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಕಳೆದ 35 ದಿನಗಳಲ್ಲಿ ಮಾಜಿ ಜನಪ್ರತಿನಿಧಿ, ಕೂಲಿ ಕಾರ್ಮಿಕ, ಗೃಹಿಣಿ, ಆಟೋ ಚಾಲಕರು ಸೇರಿದಂತೆ ಬೆಂಗಳೂರಿನ 8 ಮಂದಿಯ ಕೊಲೆಯಾಗಿದೆ. ಕಳೆದ ಏಳು ತಿಂಗಳಿನಲ್ಲಿ ರಾಜಧಾನಿಯಲ್ಲಿ 82 ಕೊಲೆ, 22 ಡಕಾಯಿತಿ, 87 ಸರಗಳ್ಳತನ, 219 ದರೋಡೆ, 304 ಲೈಂಗಿಕ ಕಿರುಕುಳ, 521 ಕಳವು ಪ್ರಕರಣ ದಾಖಲಾಗಿವೆ. ಪುಡಿ ರೌಡಿಗಳೂ ಕೂಡ ಕೊಲೆಯಂತಹ ಭೀಕರ ಅಪರಾಧ ಮಾಡುತ್ತಿದ್ದಾರೆ. ಪೊಲೀಸರೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅಪರಾಧಿಗಳು ರಾಜಾರೋಷವಾಗಿ ಹಾಗೂ ಜನಸಾಮಾನ್ಯರು ಹೆದರಿಕೆಯಿಂದ ಬದುಕುವಂತೆ ಮಾಡಿರುವುದೇ ಬೊಮ್ಮಾಯಿಯವರ ಸಾಧನೆ’ ಎಂದು ಜಗದೀಶ್‌ ಸದಂ ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ನಾಯಕ ವಿಜಯ್‌ ಶಾಸ್ತ್ರಿಮಠ್‌ ಮಾತನಾಡಿ, “ರಾಜ್ಯದಲ್ಲಿ ಸೈಬರ್‌ ಅಪರಾಧಗಳು ಕೂಡ ಹೆಚ್ಚಾಗುತ್ತಿದೆ. ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಅವರ ಸ್ನೇಹಿತರಿಗೆಲ್ಲ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿ ಹಣ ಕೇಳುವ ದೊಡ್ಡ ಜಾಲವಿದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೇರಿದಂತೆ ರಾಜ್ಯದ ಲಕ್ಷಕ್ಕೂ ಅಧಿಕ ಸಾಮಾಜಿಕ ತಾಣ ಬಳಕೆದಾರರು ಇದರಿಂದ ತೊಂದರೆ ಅನುಭವಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಇಂತಹ ಯಾವುದೇ ಪ್ರಕರಣವನ್ನು ಬೇಧಿಸಿಲ್ಲ. ಇದರಿಂದಾಗಿ ಜನರು ಸಾಮಾಜಿಕ ತಾಣಗಳಿಂದ ದೂರವಾಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ” ಎಂದಿದ್ದಾರೆ.

“ಈ ಬಗ್ಗೆ ಮುಖ್ಯಮಂತ್ರಿಗಳು ಕೂಡಲೇ ಉನ್ನತ ಅಧಿಕಾರಿಗಳ ಸಭೆ ಕರೆದು, ಅಪರಾಧಗಳಿಗೆ ಕಡಿವಾಣ ಹಾಕುವ ಬಗ್ಗೆ ಗಂಭಿರವಾಗಿ ಚರ್ಚಿಸಬೇಕು. ಒಂದು ತಿಂಗಳೊಳಗೆ ʻಶೂನ್ಯ ಅಪರಾಧಗಳ ರಾಜ್ಯʼ ಎಂಬ ಖ್ಯಾತಿಗೆ ಕರ್ನಾಟಕ ಪಾತ್ರವಾಗುವಂತೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...