Homeಮುಖಪುಟಮೋದಿ ಅಲೆ ಮುಗೀತಾ? ಕುಸಿಯುತ್ತಿದೆ ಮೋದಿ, ಬಿಜೆಪಿಯ ತಳಪಾಯ

ಮೋದಿ ಅಲೆ ಮುಗೀತಾ? ಕುಸಿಯುತ್ತಿದೆ ಮೋದಿ, ಬಿಜೆಪಿಯ ತಳಪಾಯ

- Advertisement -
ವಿವಿಧ ರಾಜ್ಯಗಳಲ್ಲಿ ಏಪ್ರಿಲ್ 11 ರಂದು ನಡೆದ ಮೊದಲ ಹಂತದ ಚುನಾವಣೆಗೂ ಮೊದಲು ಪ್ರಕಟ/ಪ್ರಸಾರವಾದ ಚುನಾವಣಾ ಸಮೀಕ್ಷೆಗಳು ಎನ್‍ಡಿಎಗೆ ಸಣ್ಣ ಅಂತರದ ಬಹುಮತ ಅಥವಾ 272ರ ಮಾರ್ಕ್ ತಲುಪುವ ಸಾಧ್ಯತೆಯನ್ನು ತೋರಿಸಿದ್ದವು. ಆದರೆ ಈಗ ಏಪ್ರಿಲ್ 11ರ ನಂತರ ಸಮೀಕ್ಷೆ ಮಾಡಿದ ದೇಶದ ಎರಡು ವಿಶ್ವಾಸಾರ್ಹ ಚುನಾವಣಾ ಸಮೀಕ್ಷಾ ಸಂಸ್ಥೆಗಳ ಪ್ರಕಾರ ಮೋದಿ ಹವಾ ಬಕ್ಕಬರಲು ಬೀಳ್ತಾ ಇದೆ. ಸಿ-ವೋಟರ್ ಸಂಸ್ಥೆ ಪ್ರಕಾರ ಮೋದಿ ಜನಪ್ರಿಯತೆ ಬರೋಬ್ಬರಿ ಶೇ. 19ರಷ್ಟು ಕುಸಿದಿದೆ! ಸಿಎಸ್‍ಡಿಎಸ್ ಪ್ರಕಾರ, ಸೀಟು-ಸೀಟುಗಳ ಫೈಟಿನ ಲೆಕ್ಕದಲ್ಲಿ ಬಿಜೆಪಿ ಎಡವಿ ತೊಂದರೆಗೆ ಸಿಲುಕಿದೆ….
ಸಂಜಯ್ ಕುಮಾರ್
ಏಸಿಯನ್ ಏಜ್‍ನಲ್ಲಿ ಏಪ್ರಿಲ್ 13ರಂದು ಪ್ರಕಟವಾದ ‘ಮೊದಲ ಹಂತದ ಚುನಾವಣೆ ನಂತರ ಬಿಜೆಪಿಗೆ ಅನಾನುಕೂಲಕರ ಪರಿಸ್ಥಿತಿಯೇ?’ ಎಂಬ ತಲೆಬರಹದ ಲೇಖನದಲ್ಲಿ ಸಿಎಸ್‍ಡಿಎಸ್ ನಿರ್ದೇಶಕ ಸಂಜಯ ಕುಮಾರ್ ಹಲವು ಸಂಗತಿಗಳನ್ನು ನಮ್ಮ ಮುಂದೆ ಇಡುತ್ತಾರೆ:
• ಮೊದಲ ಹಂತದಲ್ಲಿ ಉತ್ತರಪ್ರದೇಶದಲ್ಲಿ ನಡೆದ ಎಂಟು ಲೋಕಸಭಾ ಚುನಾವಣೆಯಲ್ಲಿ ಘಾಜಿಯಾಬಾದ್ ಮತ್ತು ಗೌತಮ್ ಬುದ್ಧಿ ನಗರ ಕ್ಷೇತ್ರಗಳಲ್ಲಿ ಮಾತ್ರ ಮತದಾನ ಪ್ರಮಾಣದಲ್ಲಿ ಸಣ್ಣ ಏರಿಕೆ ಕಂಡಿದೆ. ಇಲ್ಲಿ ಕ್ರಮವಾಗಿ, ಕೇಂದ್ರ ಸಚಿವರಾದ ವಿ.ಕೆ. ಸಿಂಗ್ ಮತ್ತು  ಮಹೇಶ್ ಶರ್ಮಾ ಸ್ಪರ್ಧಿಸಿದ್ದಾರೆ.
• ಉಳಿದ ಆರು ಕ್ಷೇತ್ರಗಳಲ್ಲಿ (ಇಲ್ಲಿ ಮುಸ್ಲಿಮರ ಸಂಖ್ಯೆ ಸಾಪೇಕ್ಷವಾಗಿ ಹೆಚ್ಚು) 2014ರ ಚುನಾವಣೆಗಿಂತ ಮತದಾನ ಕಡಿಮೆಯಾಗಿದೆ.
• ನನ್ನ ಲೆಕ್ಕದ ಪ್ರಕಾರ, ಎಂಟರಲ್ಲಿ ಮೇಲೆ ಪ್ರಸ್ತಾಪಿಸಿದ ಎರಡರಲ್ಲಿ ಮಾತ್ರ ಬಿಜೆಪಿಗೆ ಅನುಕೂಲಕರ ಪರಿಸ್ಥಿತಿಯಿದೆ.
• ಹಾಗೆಯೇ ಆದರೆ, ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯಲ್ಲೇ ಬಿಜೆಪಿಗೆ 6 ಸೀಟುಗಳ ನಷ್ಟವಾಗಲಿದೆ. 2014ರಲ್ಲಿ ಬಿಜೆಪಿ ಇಲ್ಲಿ 8 ಸೀಟನ್ನೂ ಗೆದ್ದಿತ್ತು.
ಈ ಹಿಂದೆ ಇದೇ ಸಂಜಯ ಕುಮಾರ್ ಅವರು ಬಿಜೆಪಿ ಕುರಿತಾಗಿ ಮಾಡಿದ್ದ ಅಂದಾಜುಗಳಿಗೆ ಹೋಲಿಸಿದಾಗ, ಈ ಸಲದ ಅವರ ಲೆಕ್ಕದಲ್ಲಿ ಸಾಕಷ್ಟು ಗುಣಾತ್ಮಕ ಮತ್ತು ಪರಿಮಾಣಾತ್ಮಕ ಅಂಶಗಳನ್ನು ನೋಡಬಹುದು. ಈ ಲೇಖನಕ್ಕೂ ಒಂದು ವಾರ ಮುಂಚೆ ಬರೆದ ಲೇಖನದಲ್ಲಿ ಅವರು ‘ಬಿಜೆಪಿಗೆ ಅನುಕೂಲಕರ’ (advantage BJP) ಎಂದಿದ್ದರು. ಈಗ ಮೊದಲ ಹಂತದ ಚುನಾವಣೆ ನಂತರ, ಅವರು ‘ಬಿಜೆಪಿಗೆ ಅನಾನುಕೂಲಕರ?’ (disadvantage BJP?) ಎಂದು ಅಭಿಮತ ವ್ಯಕ್ತಪಡಿಸಿದ್ದಾರೆ.
ಸಂಜಯ ಕುಮಾರ್ ಅವರ ಲೆಕ್ಕ ಅಥವಾ ಅಂದಾಜನ್ನು ಸಿಎಸ್‍ಡಿಎಸ್‍ನ ಹಿಂದಿನ ಸರ್ವೆಗೆ ಹೋಲಿಸಿ, ಸೀಟುಗಳ ಲೆಕ್ಕದಲ್ಲಿ ವಿಶ್ಲೇಷಣೇ ಮಾಡಿದಾಗ:
ಮೊದಲ ಹಂತದ ಚುನಾವಣೆಗೂ  ಸ್ವಲ್ಪ ದಿನ ಮೊದಲು ಸಿಎಸ್‍ಡಿಎಸ್ ಪ್ರಕಟಿಸಿದ ಸಮೀಕ್ಷೆ ಪ್ರಕಾರ, ಉತ್ರಪ್ರದೇಶದಲ್ಲಿ ಬಿಜೆಪಿಗೆ 80ರಲ್ಲಿ 32-40 ಸೀಟು (ಅಂದರೆ ಶೇ.40-50) ಸಿಗುತ್ತದೆ ಎನ್ನಲಾಗಿತ್ತು. ಆದರೆ, ಮೊದಲ ಹಂತದ ಚುನಾವಣೆ ನಂತರ ಸಂಜಯಕುಮಾರ್ ಬರೆದಿರುವ ಲೇಖನದಲ್ಲಿ ಮೊದಲ ಹಂತದಲ್ಲಿ ಉತ್ತರಪ್ರದೇಶದಲ್ಲಿ ಚುನಾವಣೆ ನಡೆದ ಎಂಟು ಕ್ಷೇತ್ರಗಳಲ್ಲಿ ಬಿಜೆಪಿಗೆ ಎರಡೇ ಎರಡು ಸೀಟು ಸಿಗಲಿದೆ. ಮುಂದಿನ ಹಂತಗಳಲ್ಲಿ ಇದೇ ಟ್ರೆಂಡ್ ಮುಂದುವರೆದರೆ, ಬಿಜೆಪಿಗೆ  ಉತ್ತರ ಪ್ರದೇಶದ 80ರಲ್ಲಿ ಕೇವಲ 20-25 ಸೀಟು ಮಾತ್ರ ಸಿಗಲಿವೆ.
ಈ ಕುರಿತು ‘ಕ್ವಿಂಟ್’ ಜೊತೆ ಮಾತಾಡಿರುವ ಸಂಜಯ ಕುಮಾರ್, ಮತದಾನದ ಬಗ್ಗೆ ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಹೆಚ್ಚು ಉತ್ಸುಕರಾಗಿರಬಹುದು. ಮಹಾಘಟಬಂಧನ್‍ಗೆ ‘ಫಿಕ್ಸ್’ ವೋಟ್‍ಗಳಿವೆ. ಮತದಾನ ಪ್ರಮಾಣದಲ್ಲಿ ಕಡಿಮೆ ಆಯಿತೆಂದರೆ, ಬಿಜೆಪಿ ಎಡವಟ್ಟು ಮಾಡಿಕೊಂಡಿದೆ ಎಂದೇ ಅರ್ಥ’ ಎಂದು ವಿಶ್ಲೇಷಣೆ ಮಾಡಿದ್ದಾರೆ.
ಇದೇ ಲೆಕ್ಕಾಚಾರವನ್ನು ಬಿಹಾರ್ ಮತ್ತು ಮಹಾರಾಷ್ಟ್ರಕ್ಕೂ ವಿಸ್ತರಿಸುವ ಅವರು, ಬಿಹಾರದಲ್ಲಿ ಮೊದಲ ಹಂತದಲ್ಲಿ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ. ಅಂದರೆ ಅದು ಬಿಜೆಪಿ ಮೈತ್ರಿಗೆ ಕಷ್ಟ ಎಂದೇ ಅರ್ಥ ಎನ್ನುತ್ತಾರೆ. ಈ ಮೊದಲಿನ ಸರ್ವೆಯಲ್ಲಿ ಸಿಎಸ್‍ಡಿಎಸ್ ಸರ್ವೆ ಬಿಹಾರದಲ್ಲಿ ಎನ್‍ಡಿಎಗೆ ಸ್ವೀಪ್ ಎಂಬರ್ಥದಲ್ಲಿ ಹೇಳಿತ್ತು. ಮಹಾರಾಷ್ಟ್ರದ ವಿದರ್ಭದಲ್ಲೂ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬರಲಾರದು ಎನ್ನುತ್ತಾರೆ ಸಂಜಯ ಕುಮಾರ್. ಇದೇ ಮೊದಲ ಬಾರಿಗೆ ಮತ ಹಂಚಿಕೆ ಆಧಾರವನ್ನು ಬಿಟ್ಟು ಸೀಟ್‍ಗಳನ್ನು ಆಧಾರವಾಗಿ ಇಟ್ಟುಕೊಂಡು ಸಿಎಸ್‍ಡಿಎಸ್ ಸಮೀಕ್ಷೆ ಮಾಡಿದೆ.
ಸಿ-ವೋಟರ್: ‘ಮೋದಿ ಜನಪ್ರಿಯತೆ ಕುಸಿತ’
ಇನ್ನೊಂದು ವಿಶ್ವಾಸಾರ್ಹ ಸಮೀಕ್ಷಾ ಸಂಸ್ಥೆ ಸಿ-ವೋಟರ್ ಕೂಡ ಬಿಜೆಪಿಗೆ ತೊದರೆ ಎಂಬರ್ಥದಲ್ಲಿ ಅಂಕಿಅಂಶಗಳನ್ನು ನೀಡಲು ಶುರು ಮಾಡಿದೆ. ಮೋದಿ ಮತ್ತು ಅವರ ಸರ್ಕಾರದ ಜನಪ್ರಿಯತೆ ಈ ಒಂದೇ ತಿಂಗಳಲ್ಲಿ 19 ಅಂಕಗಳಷ್ಟು  ಕುಸಿದಿದೆ ಎಂದು ಅದರ ಲೇಟೆಸ್ಟ್ ಸಮೀಕ್ಷೆ ಹೇಳುತ್ತಿದೆ. ಈ ಹಿಂದಿನ ಸರ್ವೆಯಲ್ಲಿ ಅದು ಬಾಲಾಕೋಟ್ ದಾಳಿ ನಂತರ ಮೋದಿ ಜನಪ್ರಿಯತೆ ಹೆಚ್ಚಿದೆ ಎಂದು ಹೇಳಿತ್ತು. ಹೊಸ ಸಮೀಕ್ಷೆಯಲ್ಲಿ ಅದು ಕೇವಲ ಒಂದೇ ತಿಂಗಳಲ್ಲಿ 19 ಅಂಕಗಳಷ್ಟು ಕುಸಿದೆ ಎಂದು ಅಂಕಿಅಂಶಗಳನ್ನು ನೀಡಿದೆ.
ಮಾರ್ಚ್ 7ರಂದು ಮೋದಿ ಸರ್ಕಾರದ ಜನಪ್ರಿಯತೆ ದರ ಶೇ. 62.02 ಇತ್ತು. ನಂತರ ಅದರಲ್ಲಿ ಸಣ್ಣಗೆ ಕುಸಿತ ಶುರುವಾಯಿತು. ಏಪ್ರಿಲ್ 12 ರ ಮೊದಲ ಹಂತದ ಚುನಾವಣೆ ಬಳಿಕ ಅದು ಶೇ. 43.25ಕ್ಕೆ ಕುಸಿದಿದೆ ಎನ್ನುತ್ತದೆ ಸ-ವೋಟರರನ ಲೇಟೆಸ್ಟ್ ಸರ್ವೆ.
     ಸಮೀಕ್ಷೆ ಅಂದಾಜಿಗಿಂತ ಕೆಳಕ್ಕೆ ಬಿಜೆಪಿ
• ಸಿಎಸ್‍ಡಿಎಸ್‍ನ ಸಂಜಯಕುಮಾರ್ ಮತ್ತು ಸಿ-ವೋಟರ್‍ನ ಲೇಟೆಸ್ಟ್ ಲೆಕ್ಕಾಚಾರ ಮತ್ತು ಸಮೀಕ್ಷೆಗಳ ಪ್ರಕಾರ, ಮೊದಲ ಹಂತಕ್ಕೂ ಮೊದಲು ಸರ್ವೆಗಳು ಬಿಜೆಪಿ ಮತ್ತು ಎನ್‍ಡಿಎಗೆ ಅಂದಾಜಿಸಿದ್ದಕ್ಕಿಂತ ಕಡಿಮೆ ಸೀಟುಗಳು ಸಿಗಲಿವೆ.
• ಸಿ-ವೋಟರ್ ಪ್ರಕಾರ, ಬಾಲಾಕೋಟ್ ವಿಷಯ ಈಗ ಕಾಣೆಯಾಗಿದ್ದು, ಮೋದಿಯ ಜನಪ್ರಿಯತೆ ಕೆಳಮುಖದಲ್ಲಿ ಚಲಿಸುತ್ತಿದೆ.
• ಪ್ರಧಾನಿ ಹುದ್ದೆಗೆ ಮೋದಿಯೇ ಸೂಕ್ತ ಎಂಬ ಅಭಿಪ್ರಾಯಕ್ಕೆ ಹೆಚ್ಚು ಬೆಂಬಲ  ನೀಡಿದ್ದ ಉತ್ತರ  ಪ್ರದೇಶ,  ಮಹಾರಾಷ್ಟ್ರ ಮತ್ತು ಬಿಹಾರ್‍ಗಳಲ್ಲಿ ಬಿಜೆಪಿ/ಎನ್‍ಡಿಎ ಮೈತ್ರಿ ಲೆಕ್ಕಾಚಾರ, ಜಾತಿ ಮತ್ತು ಅಭ್ಯರ್ಥಿಗಳ ಆಯ್ಕೆಯಲ್ಲಿ ಅಶಕ್ತವಾಗಿವೆ.
• ಉತ್ತರಪ್ರದೇಶದಲ್ಲಿ ಮಹಾಘಟಬಂಧನ್‍ಗೆ ದೊಡ್ಡ ಲಾಭ ಸಿಗಲಿದ್ದರೆ, ಬಿಹಾರ್ ಮತ್ತು ಮಹಾರಾಷ್ಟ್ರಗಳಲ್ಲಿ ಸೀಟ್-ಟು-ಸೀಟ್ ಕದನವಿರುವುದು ಬಿಜೆಪಿ ಮತ್ತು ಮೋದಿಗೆ ಹಿನ್ನಡೆಯೇ ಎನ್ನುತ್ತಾರೆ ಸಂಜಯ ಕುಮಾರ್.
• ಕೊನೆಯ ಹಂತದ ಸರ್ವೆಗಳು ಎನ್‍ಡಿಎಗೆ 260-270 ಸೀಟುಗಳು ಸಿಗಲಿವೆ ಎಂದಿದ್ದವು. ಆದರೆ ಈಗ ಮೊದಲ ಹಂತದ ನಂತರದಲ್ಲಿ ಸಿ-ವೋಟರ್ ಟ್ರ್ಯಾಕರ್ ಮತ್ತು ಸಿಎಸ್‍ಡಿಎಸ್ ನಿರ್ದೇಶಕ ಸಣಜಯ ಕುಮಾರ್ ವಿಶ್ಲೇಷಣೆ ಪ್ರಕಾರ, ಎನ್‍ಡಿಎ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಕುಸಿಯಲಿದೆ.
(ಆಧಾರ: ದಿ ಕ್ವಿಂಟ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...