Homeಮುಖಪುಟಮೋದಿ ಅಲೆ ಮುಗೀತಾ? ಕುಸಿಯುತ್ತಿದೆ ಮೋದಿ, ಬಿಜೆಪಿಯ ತಳಪಾಯ

ಮೋದಿ ಅಲೆ ಮುಗೀತಾ? ಕುಸಿಯುತ್ತಿದೆ ಮೋದಿ, ಬಿಜೆಪಿಯ ತಳಪಾಯ

- Advertisement -
ವಿವಿಧ ರಾಜ್ಯಗಳಲ್ಲಿ ಏಪ್ರಿಲ್ 11 ರಂದು ನಡೆದ ಮೊದಲ ಹಂತದ ಚುನಾವಣೆಗೂ ಮೊದಲು ಪ್ರಕಟ/ಪ್ರಸಾರವಾದ ಚುನಾವಣಾ ಸಮೀಕ್ಷೆಗಳು ಎನ್‍ಡಿಎಗೆ ಸಣ್ಣ ಅಂತರದ ಬಹುಮತ ಅಥವಾ 272ರ ಮಾರ್ಕ್ ತಲುಪುವ ಸಾಧ್ಯತೆಯನ್ನು ತೋರಿಸಿದ್ದವು. ಆದರೆ ಈಗ ಏಪ್ರಿಲ್ 11ರ ನಂತರ ಸಮೀಕ್ಷೆ ಮಾಡಿದ ದೇಶದ ಎರಡು ವಿಶ್ವಾಸಾರ್ಹ ಚುನಾವಣಾ ಸಮೀಕ್ಷಾ ಸಂಸ್ಥೆಗಳ ಪ್ರಕಾರ ಮೋದಿ ಹವಾ ಬಕ್ಕಬರಲು ಬೀಳ್ತಾ ಇದೆ. ಸಿ-ವೋಟರ್ ಸಂಸ್ಥೆ ಪ್ರಕಾರ ಮೋದಿ ಜನಪ್ರಿಯತೆ ಬರೋಬ್ಬರಿ ಶೇ. 19ರಷ್ಟು ಕುಸಿದಿದೆ! ಸಿಎಸ್‍ಡಿಎಸ್ ಪ್ರಕಾರ, ಸೀಟು-ಸೀಟುಗಳ ಫೈಟಿನ ಲೆಕ್ಕದಲ್ಲಿ ಬಿಜೆಪಿ ಎಡವಿ ತೊಂದರೆಗೆ ಸಿಲುಕಿದೆ….
ಸಂಜಯ್ ಕುಮಾರ್
ಏಸಿಯನ್ ಏಜ್‍ನಲ್ಲಿ ಏಪ್ರಿಲ್ 13ರಂದು ಪ್ರಕಟವಾದ ‘ಮೊದಲ ಹಂತದ ಚುನಾವಣೆ ನಂತರ ಬಿಜೆಪಿಗೆ ಅನಾನುಕೂಲಕರ ಪರಿಸ್ಥಿತಿಯೇ?’ ಎಂಬ ತಲೆಬರಹದ ಲೇಖನದಲ್ಲಿ ಸಿಎಸ್‍ಡಿಎಸ್ ನಿರ್ದೇಶಕ ಸಂಜಯ ಕುಮಾರ್ ಹಲವು ಸಂಗತಿಗಳನ್ನು ನಮ್ಮ ಮುಂದೆ ಇಡುತ್ತಾರೆ:
• ಮೊದಲ ಹಂತದಲ್ಲಿ ಉತ್ತರಪ್ರದೇಶದಲ್ಲಿ ನಡೆದ ಎಂಟು ಲೋಕಸಭಾ ಚುನಾವಣೆಯಲ್ಲಿ ಘಾಜಿಯಾಬಾದ್ ಮತ್ತು ಗೌತಮ್ ಬುದ್ಧಿ ನಗರ ಕ್ಷೇತ್ರಗಳಲ್ಲಿ ಮಾತ್ರ ಮತದಾನ ಪ್ರಮಾಣದಲ್ಲಿ ಸಣ್ಣ ಏರಿಕೆ ಕಂಡಿದೆ. ಇಲ್ಲಿ ಕ್ರಮವಾಗಿ, ಕೇಂದ್ರ ಸಚಿವರಾದ ವಿ.ಕೆ. ಸಿಂಗ್ ಮತ್ತು  ಮಹೇಶ್ ಶರ್ಮಾ ಸ್ಪರ್ಧಿಸಿದ್ದಾರೆ.
• ಉಳಿದ ಆರು ಕ್ಷೇತ್ರಗಳಲ್ಲಿ (ಇಲ್ಲಿ ಮುಸ್ಲಿಮರ ಸಂಖ್ಯೆ ಸಾಪೇಕ್ಷವಾಗಿ ಹೆಚ್ಚು) 2014ರ ಚುನಾವಣೆಗಿಂತ ಮತದಾನ ಕಡಿಮೆಯಾಗಿದೆ.
• ನನ್ನ ಲೆಕ್ಕದ ಪ್ರಕಾರ, ಎಂಟರಲ್ಲಿ ಮೇಲೆ ಪ್ರಸ್ತಾಪಿಸಿದ ಎರಡರಲ್ಲಿ ಮಾತ್ರ ಬಿಜೆಪಿಗೆ ಅನುಕೂಲಕರ ಪರಿಸ್ಥಿತಿಯಿದೆ.
• ಹಾಗೆಯೇ ಆದರೆ, ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯಲ್ಲೇ ಬಿಜೆಪಿಗೆ 6 ಸೀಟುಗಳ ನಷ್ಟವಾಗಲಿದೆ. 2014ರಲ್ಲಿ ಬಿಜೆಪಿ ಇಲ್ಲಿ 8 ಸೀಟನ್ನೂ ಗೆದ್ದಿತ್ತು.
ಈ ಹಿಂದೆ ಇದೇ ಸಂಜಯ ಕುಮಾರ್ ಅವರು ಬಿಜೆಪಿ ಕುರಿತಾಗಿ ಮಾಡಿದ್ದ ಅಂದಾಜುಗಳಿಗೆ ಹೋಲಿಸಿದಾಗ, ಈ ಸಲದ ಅವರ ಲೆಕ್ಕದಲ್ಲಿ ಸಾಕಷ್ಟು ಗುಣಾತ್ಮಕ ಮತ್ತು ಪರಿಮಾಣಾತ್ಮಕ ಅಂಶಗಳನ್ನು ನೋಡಬಹುದು. ಈ ಲೇಖನಕ್ಕೂ ಒಂದು ವಾರ ಮುಂಚೆ ಬರೆದ ಲೇಖನದಲ್ಲಿ ಅವರು ‘ಬಿಜೆಪಿಗೆ ಅನುಕೂಲಕರ’ (advantage BJP) ಎಂದಿದ್ದರು. ಈಗ ಮೊದಲ ಹಂತದ ಚುನಾವಣೆ ನಂತರ, ಅವರು ‘ಬಿಜೆಪಿಗೆ ಅನಾನುಕೂಲಕರ?’ (disadvantage BJP?) ಎಂದು ಅಭಿಮತ ವ್ಯಕ್ತಪಡಿಸಿದ್ದಾರೆ.
ಸಂಜಯ ಕುಮಾರ್ ಅವರ ಲೆಕ್ಕ ಅಥವಾ ಅಂದಾಜನ್ನು ಸಿಎಸ್‍ಡಿಎಸ್‍ನ ಹಿಂದಿನ ಸರ್ವೆಗೆ ಹೋಲಿಸಿ, ಸೀಟುಗಳ ಲೆಕ್ಕದಲ್ಲಿ ವಿಶ್ಲೇಷಣೇ ಮಾಡಿದಾಗ:
ಮೊದಲ ಹಂತದ ಚುನಾವಣೆಗೂ  ಸ್ವಲ್ಪ ದಿನ ಮೊದಲು ಸಿಎಸ್‍ಡಿಎಸ್ ಪ್ರಕಟಿಸಿದ ಸಮೀಕ್ಷೆ ಪ್ರಕಾರ, ಉತ್ರಪ್ರದೇಶದಲ್ಲಿ ಬಿಜೆಪಿಗೆ 80ರಲ್ಲಿ 32-40 ಸೀಟು (ಅಂದರೆ ಶೇ.40-50) ಸಿಗುತ್ತದೆ ಎನ್ನಲಾಗಿತ್ತು. ಆದರೆ, ಮೊದಲ ಹಂತದ ಚುನಾವಣೆ ನಂತರ ಸಂಜಯಕುಮಾರ್ ಬರೆದಿರುವ ಲೇಖನದಲ್ಲಿ ಮೊದಲ ಹಂತದಲ್ಲಿ ಉತ್ತರಪ್ರದೇಶದಲ್ಲಿ ಚುನಾವಣೆ ನಡೆದ ಎಂಟು ಕ್ಷೇತ್ರಗಳಲ್ಲಿ ಬಿಜೆಪಿಗೆ ಎರಡೇ ಎರಡು ಸೀಟು ಸಿಗಲಿದೆ. ಮುಂದಿನ ಹಂತಗಳಲ್ಲಿ ಇದೇ ಟ್ರೆಂಡ್ ಮುಂದುವರೆದರೆ, ಬಿಜೆಪಿಗೆ  ಉತ್ತರ ಪ್ರದೇಶದ 80ರಲ್ಲಿ ಕೇವಲ 20-25 ಸೀಟು ಮಾತ್ರ ಸಿಗಲಿವೆ.
ಈ ಕುರಿತು ‘ಕ್ವಿಂಟ್’ ಜೊತೆ ಮಾತಾಡಿರುವ ಸಂಜಯ ಕುಮಾರ್, ಮತದಾನದ ಬಗ್ಗೆ ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಹೆಚ್ಚು ಉತ್ಸುಕರಾಗಿರಬಹುದು. ಮಹಾಘಟಬಂಧನ್‍ಗೆ ‘ಫಿಕ್ಸ್’ ವೋಟ್‍ಗಳಿವೆ. ಮತದಾನ ಪ್ರಮಾಣದಲ್ಲಿ ಕಡಿಮೆ ಆಯಿತೆಂದರೆ, ಬಿಜೆಪಿ ಎಡವಟ್ಟು ಮಾಡಿಕೊಂಡಿದೆ ಎಂದೇ ಅರ್ಥ’ ಎಂದು ವಿಶ್ಲೇಷಣೆ ಮಾಡಿದ್ದಾರೆ.
ಇದೇ ಲೆಕ್ಕಾಚಾರವನ್ನು ಬಿಹಾರ್ ಮತ್ತು ಮಹಾರಾಷ್ಟ್ರಕ್ಕೂ ವಿಸ್ತರಿಸುವ ಅವರು, ಬಿಹಾರದಲ್ಲಿ ಮೊದಲ ಹಂತದಲ್ಲಿ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ. ಅಂದರೆ ಅದು ಬಿಜೆಪಿ ಮೈತ್ರಿಗೆ ಕಷ್ಟ ಎಂದೇ ಅರ್ಥ ಎನ್ನುತ್ತಾರೆ. ಈ ಮೊದಲಿನ ಸರ್ವೆಯಲ್ಲಿ ಸಿಎಸ್‍ಡಿಎಸ್ ಸರ್ವೆ ಬಿಹಾರದಲ್ಲಿ ಎನ್‍ಡಿಎಗೆ ಸ್ವೀಪ್ ಎಂಬರ್ಥದಲ್ಲಿ ಹೇಳಿತ್ತು. ಮಹಾರಾಷ್ಟ್ರದ ವಿದರ್ಭದಲ್ಲೂ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬರಲಾರದು ಎನ್ನುತ್ತಾರೆ ಸಂಜಯ ಕುಮಾರ್. ಇದೇ ಮೊದಲ ಬಾರಿಗೆ ಮತ ಹಂಚಿಕೆ ಆಧಾರವನ್ನು ಬಿಟ್ಟು ಸೀಟ್‍ಗಳನ್ನು ಆಧಾರವಾಗಿ ಇಟ್ಟುಕೊಂಡು ಸಿಎಸ್‍ಡಿಎಸ್ ಸಮೀಕ್ಷೆ ಮಾಡಿದೆ.
ಸಿ-ವೋಟರ್: ‘ಮೋದಿ ಜನಪ್ರಿಯತೆ ಕುಸಿತ’
ಇನ್ನೊಂದು ವಿಶ್ವಾಸಾರ್ಹ ಸಮೀಕ್ಷಾ ಸಂಸ್ಥೆ ಸಿ-ವೋಟರ್ ಕೂಡ ಬಿಜೆಪಿಗೆ ತೊದರೆ ಎಂಬರ್ಥದಲ್ಲಿ ಅಂಕಿಅಂಶಗಳನ್ನು ನೀಡಲು ಶುರು ಮಾಡಿದೆ. ಮೋದಿ ಮತ್ತು ಅವರ ಸರ್ಕಾರದ ಜನಪ್ರಿಯತೆ ಈ ಒಂದೇ ತಿಂಗಳಲ್ಲಿ 19 ಅಂಕಗಳಷ್ಟು  ಕುಸಿದಿದೆ ಎಂದು ಅದರ ಲೇಟೆಸ್ಟ್ ಸಮೀಕ್ಷೆ ಹೇಳುತ್ತಿದೆ. ಈ ಹಿಂದಿನ ಸರ್ವೆಯಲ್ಲಿ ಅದು ಬಾಲಾಕೋಟ್ ದಾಳಿ ನಂತರ ಮೋದಿ ಜನಪ್ರಿಯತೆ ಹೆಚ್ಚಿದೆ ಎಂದು ಹೇಳಿತ್ತು. ಹೊಸ ಸಮೀಕ್ಷೆಯಲ್ಲಿ ಅದು ಕೇವಲ ಒಂದೇ ತಿಂಗಳಲ್ಲಿ 19 ಅಂಕಗಳಷ್ಟು ಕುಸಿದೆ ಎಂದು ಅಂಕಿಅಂಶಗಳನ್ನು ನೀಡಿದೆ.
ಮಾರ್ಚ್ 7ರಂದು ಮೋದಿ ಸರ್ಕಾರದ ಜನಪ್ರಿಯತೆ ದರ ಶೇ. 62.02 ಇತ್ತು. ನಂತರ ಅದರಲ್ಲಿ ಸಣ್ಣಗೆ ಕುಸಿತ ಶುರುವಾಯಿತು. ಏಪ್ರಿಲ್ 12 ರ ಮೊದಲ ಹಂತದ ಚುನಾವಣೆ ಬಳಿಕ ಅದು ಶೇ. 43.25ಕ್ಕೆ ಕುಸಿದಿದೆ ಎನ್ನುತ್ತದೆ ಸ-ವೋಟರರನ ಲೇಟೆಸ್ಟ್ ಸರ್ವೆ.
     ಸಮೀಕ್ಷೆ ಅಂದಾಜಿಗಿಂತ ಕೆಳಕ್ಕೆ ಬಿಜೆಪಿ
• ಸಿಎಸ್‍ಡಿಎಸ್‍ನ ಸಂಜಯಕುಮಾರ್ ಮತ್ತು ಸಿ-ವೋಟರ್‍ನ ಲೇಟೆಸ್ಟ್ ಲೆಕ್ಕಾಚಾರ ಮತ್ತು ಸಮೀಕ್ಷೆಗಳ ಪ್ರಕಾರ, ಮೊದಲ ಹಂತಕ್ಕೂ ಮೊದಲು ಸರ್ವೆಗಳು ಬಿಜೆಪಿ ಮತ್ತು ಎನ್‍ಡಿಎಗೆ ಅಂದಾಜಿಸಿದ್ದಕ್ಕಿಂತ ಕಡಿಮೆ ಸೀಟುಗಳು ಸಿಗಲಿವೆ.
• ಸಿ-ವೋಟರ್ ಪ್ರಕಾರ, ಬಾಲಾಕೋಟ್ ವಿಷಯ ಈಗ ಕಾಣೆಯಾಗಿದ್ದು, ಮೋದಿಯ ಜನಪ್ರಿಯತೆ ಕೆಳಮುಖದಲ್ಲಿ ಚಲಿಸುತ್ತಿದೆ.
• ಪ್ರಧಾನಿ ಹುದ್ದೆಗೆ ಮೋದಿಯೇ ಸೂಕ್ತ ಎಂಬ ಅಭಿಪ್ರಾಯಕ್ಕೆ ಹೆಚ್ಚು ಬೆಂಬಲ  ನೀಡಿದ್ದ ಉತ್ತರ  ಪ್ರದೇಶ,  ಮಹಾರಾಷ್ಟ್ರ ಮತ್ತು ಬಿಹಾರ್‍ಗಳಲ್ಲಿ ಬಿಜೆಪಿ/ಎನ್‍ಡಿಎ ಮೈತ್ರಿ ಲೆಕ್ಕಾಚಾರ, ಜಾತಿ ಮತ್ತು ಅಭ್ಯರ್ಥಿಗಳ ಆಯ್ಕೆಯಲ್ಲಿ ಅಶಕ್ತವಾಗಿವೆ.
• ಉತ್ತರಪ್ರದೇಶದಲ್ಲಿ ಮಹಾಘಟಬಂಧನ್‍ಗೆ ದೊಡ್ಡ ಲಾಭ ಸಿಗಲಿದ್ದರೆ, ಬಿಹಾರ್ ಮತ್ತು ಮಹಾರಾಷ್ಟ್ರಗಳಲ್ಲಿ ಸೀಟ್-ಟು-ಸೀಟ್ ಕದನವಿರುವುದು ಬಿಜೆಪಿ ಮತ್ತು ಮೋದಿಗೆ ಹಿನ್ನಡೆಯೇ ಎನ್ನುತ್ತಾರೆ ಸಂಜಯ ಕುಮಾರ್.
• ಕೊನೆಯ ಹಂತದ ಸರ್ವೆಗಳು ಎನ್‍ಡಿಎಗೆ 260-270 ಸೀಟುಗಳು ಸಿಗಲಿವೆ ಎಂದಿದ್ದವು. ಆದರೆ ಈಗ ಮೊದಲ ಹಂತದ ನಂತರದಲ್ಲಿ ಸಿ-ವೋಟರ್ ಟ್ರ್ಯಾಕರ್ ಮತ್ತು ಸಿಎಸ್‍ಡಿಎಸ್ ನಿರ್ದೇಶಕ ಸಣಜಯ ಕುಮಾರ್ ವಿಶ್ಲೇಷಣೆ ಪ್ರಕಾರ, ಎನ್‍ಡಿಎ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಕುಸಿಯಲಿದೆ.
(ಆಧಾರ: ದಿ ಕ್ವಿಂಟ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...