Homeಮುಖಪುಟಮೋದಿ ಅಲೆ ಮುಗೀತಾ? ಕುಸಿಯುತ್ತಿದೆ ಮೋದಿ, ಬಿಜೆಪಿಯ ತಳಪಾಯ

ಮೋದಿ ಅಲೆ ಮುಗೀತಾ? ಕುಸಿಯುತ್ತಿದೆ ಮೋದಿ, ಬಿಜೆಪಿಯ ತಳಪಾಯ

- Advertisement -
ವಿವಿಧ ರಾಜ್ಯಗಳಲ್ಲಿ ಏಪ್ರಿಲ್ 11 ರಂದು ನಡೆದ ಮೊದಲ ಹಂತದ ಚುನಾವಣೆಗೂ ಮೊದಲು ಪ್ರಕಟ/ಪ್ರಸಾರವಾದ ಚುನಾವಣಾ ಸಮೀಕ್ಷೆಗಳು ಎನ್‍ಡಿಎಗೆ ಸಣ್ಣ ಅಂತರದ ಬಹುಮತ ಅಥವಾ 272ರ ಮಾರ್ಕ್ ತಲುಪುವ ಸಾಧ್ಯತೆಯನ್ನು ತೋರಿಸಿದ್ದವು. ಆದರೆ ಈಗ ಏಪ್ರಿಲ್ 11ರ ನಂತರ ಸಮೀಕ್ಷೆ ಮಾಡಿದ ದೇಶದ ಎರಡು ವಿಶ್ವಾಸಾರ್ಹ ಚುನಾವಣಾ ಸಮೀಕ್ಷಾ ಸಂಸ್ಥೆಗಳ ಪ್ರಕಾರ ಮೋದಿ ಹವಾ ಬಕ್ಕಬರಲು ಬೀಳ್ತಾ ಇದೆ. ಸಿ-ವೋಟರ್ ಸಂಸ್ಥೆ ಪ್ರಕಾರ ಮೋದಿ ಜನಪ್ರಿಯತೆ ಬರೋಬ್ಬರಿ ಶೇ. 19ರಷ್ಟು ಕುಸಿದಿದೆ! ಸಿಎಸ್‍ಡಿಎಸ್ ಪ್ರಕಾರ, ಸೀಟು-ಸೀಟುಗಳ ಫೈಟಿನ ಲೆಕ್ಕದಲ್ಲಿ ಬಿಜೆಪಿ ಎಡವಿ ತೊಂದರೆಗೆ ಸಿಲುಕಿದೆ….
ಸಂಜಯ್ ಕುಮಾರ್
ಏಸಿಯನ್ ಏಜ್‍ನಲ್ಲಿ ಏಪ್ರಿಲ್ 13ರಂದು ಪ್ರಕಟವಾದ ‘ಮೊದಲ ಹಂತದ ಚುನಾವಣೆ ನಂತರ ಬಿಜೆಪಿಗೆ ಅನಾನುಕೂಲಕರ ಪರಿಸ್ಥಿತಿಯೇ?’ ಎಂಬ ತಲೆಬರಹದ ಲೇಖನದಲ್ಲಿ ಸಿಎಸ್‍ಡಿಎಸ್ ನಿರ್ದೇಶಕ ಸಂಜಯ ಕುಮಾರ್ ಹಲವು ಸಂಗತಿಗಳನ್ನು ನಮ್ಮ ಮುಂದೆ ಇಡುತ್ತಾರೆ:
• ಮೊದಲ ಹಂತದಲ್ಲಿ ಉತ್ತರಪ್ರದೇಶದಲ್ಲಿ ನಡೆದ ಎಂಟು ಲೋಕಸಭಾ ಚುನಾವಣೆಯಲ್ಲಿ ಘಾಜಿಯಾಬಾದ್ ಮತ್ತು ಗೌತಮ್ ಬುದ್ಧಿ ನಗರ ಕ್ಷೇತ್ರಗಳಲ್ಲಿ ಮಾತ್ರ ಮತದಾನ ಪ್ರಮಾಣದಲ್ಲಿ ಸಣ್ಣ ಏರಿಕೆ ಕಂಡಿದೆ. ಇಲ್ಲಿ ಕ್ರಮವಾಗಿ, ಕೇಂದ್ರ ಸಚಿವರಾದ ವಿ.ಕೆ. ಸಿಂಗ್ ಮತ್ತು  ಮಹೇಶ್ ಶರ್ಮಾ ಸ್ಪರ್ಧಿಸಿದ್ದಾರೆ.
• ಉಳಿದ ಆರು ಕ್ಷೇತ್ರಗಳಲ್ಲಿ (ಇಲ್ಲಿ ಮುಸ್ಲಿಮರ ಸಂಖ್ಯೆ ಸಾಪೇಕ್ಷವಾಗಿ ಹೆಚ್ಚು) 2014ರ ಚುನಾವಣೆಗಿಂತ ಮತದಾನ ಕಡಿಮೆಯಾಗಿದೆ.
• ನನ್ನ ಲೆಕ್ಕದ ಪ್ರಕಾರ, ಎಂಟರಲ್ಲಿ ಮೇಲೆ ಪ್ರಸ್ತಾಪಿಸಿದ ಎರಡರಲ್ಲಿ ಮಾತ್ರ ಬಿಜೆಪಿಗೆ ಅನುಕೂಲಕರ ಪರಿಸ್ಥಿತಿಯಿದೆ.
• ಹಾಗೆಯೇ ಆದರೆ, ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯಲ್ಲೇ ಬಿಜೆಪಿಗೆ 6 ಸೀಟುಗಳ ನಷ್ಟವಾಗಲಿದೆ. 2014ರಲ್ಲಿ ಬಿಜೆಪಿ ಇಲ್ಲಿ 8 ಸೀಟನ್ನೂ ಗೆದ್ದಿತ್ತು.
ಈ ಹಿಂದೆ ಇದೇ ಸಂಜಯ ಕುಮಾರ್ ಅವರು ಬಿಜೆಪಿ ಕುರಿತಾಗಿ ಮಾಡಿದ್ದ ಅಂದಾಜುಗಳಿಗೆ ಹೋಲಿಸಿದಾಗ, ಈ ಸಲದ ಅವರ ಲೆಕ್ಕದಲ್ಲಿ ಸಾಕಷ್ಟು ಗುಣಾತ್ಮಕ ಮತ್ತು ಪರಿಮಾಣಾತ್ಮಕ ಅಂಶಗಳನ್ನು ನೋಡಬಹುದು. ಈ ಲೇಖನಕ್ಕೂ ಒಂದು ವಾರ ಮುಂಚೆ ಬರೆದ ಲೇಖನದಲ್ಲಿ ಅವರು ‘ಬಿಜೆಪಿಗೆ ಅನುಕೂಲಕರ’ (advantage BJP) ಎಂದಿದ್ದರು. ಈಗ ಮೊದಲ ಹಂತದ ಚುನಾವಣೆ ನಂತರ, ಅವರು ‘ಬಿಜೆಪಿಗೆ ಅನಾನುಕೂಲಕರ?’ (disadvantage BJP?) ಎಂದು ಅಭಿಮತ ವ್ಯಕ್ತಪಡಿಸಿದ್ದಾರೆ.
ಸಂಜಯ ಕುಮಾರ್ ಅವರ ಲೆಕ್ಕ ಅಥವಾ ಅಂದಾಜನ್ನು ಸಿಎಸ್‍ಡಿಎಸ್‍ನ ಹಿಂದಿನ ಸರ್ವೆಗೆ ಹೋಲಿಸಿ, ಸೀಟುಗಳ ಲೆಕ್ಕದಲ್ಲಿ ವಿಶ್ಲೇಷಣೇ ಮಾಡಿದಾಗ:
ಮೊದಲ ಹಂತದ ಚುನಾವಣೆಗೂ  ಸ್ವಲ್ಪ ದಿನ ಮೊದಲು ಸಿಎಸ್‍ಡಿಎಸ್ ಪ್ರಕಟಿಸಿದ ಸಮೀಕ್ಷೆ ಪ್ರಕಾರ, ಉತ್ರಪ್ರದೇಶದಲ್ಲಿ ಬಿಜೆಪಿಗೆ 80ರಲ್ಲಿ 32-40 ಸೀಟು (ಅಂದರೆ ಶೇ.40-50) ಸಿಗುತ್ತದೆ ಎನ್ನಲಾಗಿತ್ತು. ಆದರೆ, ಮೊದಲ ಹಂತದ ಚುನಾವಣೆ ನಂತರ ಸಂಜಯಕುಮಾರ್ ಬರೆದಿರುವ ಲೇಖನದಲ್ಲಿ ಮೊದಲ ಹಂತದಲ್ಲಿ ಉತ್ತರಪ್ರದೇಶದಲ್ಲಿ ಚುನಾವಣೆ ನಡೆದ ಎಂಟು ಕ್ಷೇತ್ರಗಳಲ್ಲಿ ಬಿಜೆಪಿಗೆ ಎರಡೇ ಎರಡು ಸೀಟು ಸಿಗಲಿದೆ. ಮುಂದಿನ ಹಂತಗಳಲ್ಲಿ ಇದೇ ಟ್ರೆಂಡ್ ಮುಂದುವರೆದರೆ, ಬಿಜೆಪಿಗೆ  ಉತ್ತರ ಪ್ರದೇಶದ 80ರಲ್ಲಿ ಕೇವಲ 20-25 ಸೀಟು ಮಾತ್ರ ಸಿಗಲಿವೆ.
ಈ ಕುರಿತು ‘ಕ್ವಿಂಟ್’ ಜೊತೆ ಮಾತಾಡಿರುವ ಸಂಜಯ ಕುಮಾರ್, ಮತದಾನದ ಬಗ್ಗೆ ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಹೆಚ್ಚು ಉತ್ಸುಕರಾಗಿರಬಹುದು. ಮಹಾಘಟಬಂಧನ್‍ಗೆ ‘ಫಿಕ್ಸ್’ ವೋಟ್‍ಗಳಿವೆ. ಮತದಾನ ಪ್ರಮಾಣದಲ್ಲಿ ಕಡಿಮೆ ಆಯಿತೆಂದರೆ, ಬಿಜೆಪಿ ಎಡವಟ್ಟು ಮಾಡಿಕೊಂಡಿದೆ ಎಂದೇ ಅರ್ಥ’ ಎಂದು ವಿಶ್ಲೇಷಣೆ ಮಾಡಿದ್ದಾರೆ.
ಇದೇ ಲೆಕ್ಕಾಚಾರವನ್ನು ಬಿಹಾರ್ ಮತ್ತು ಮಹಾರಾಷ್ಟ್ರಕ್ಕೂ ವಿಸ್ತರಿಸುವ ಅವರು, ಬಿಹಾರದಲ್ಲಿ ಮೊದಲ ಹಂತದಲ್ಲಿ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ. ಅಂದರೆ ಅದು ಬಿಜೆಪಿ ಮೈತ್ರಿಗೆ ಕಷ್ಟ ಎಂದೇ ಅರ್ಥ ಎನ್ನುತ್ತಾರೆ. ಈ ಮೊದಲಿನ ಸರ್ವೆಯಲ್ಲಿ ಸಿಎಸ್‍ಡಿಎಸ್ ಸರ್ವೆ ಬಿಹಾರದಲ್ಲಿ ಎನ್‍ಡಿಎಗೆ ಸ್ವೀಪ್ ಎಂಬರ್ಥದಲ್ಲಿ ಹೇಳಿತ್ತು. ಮಹಾರಾಷ್ಟ್ರದ ವಿದರ್ಭದಲ್ಲೂ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬರಲಾರದು ಎನ್ನುತ್ತಾರೆ ಸಂಜಯ ಕುಮಾರ್. ಇದೇ ಮೊದಲ ಬಾರಿಗೆ ಮತ ಹಂಚಿಕೆ ಆಧಾರವನ್ನು ಬಿಟ್ಟು ಸೀಟ್‍ಗಳನ್ನು ಆಧಾರವಾಗಿ ಇಟ್ಟುಕೊಂಡು ಸಿಎಸ್‍ಡಿಎಸ್ ಸಮೀಕ್ಷೆ ಮಾಡಿದೆ.
ಸಿ-ವೋಟರ್: ‘ಮೋದಿ ಜನಪ್ರಿಯತೆ ಕುಸಿತ’
ಇನ್ನೊಂದು ವಿಶ್ವಾಸಾರ್ಹ ಸಮೀಕ್ಷಾ ಸಂಸ್ಥೆ ಸಿ-ವೋಟರ್ ಕೂಡ ಬಿಜೆಪಿಗೆ ತೊದರೆ ಎಂಬರ್ಥದಲ್ಲಿ ಅಂಕಿಅಂಶಗಳನ್ನು ನೀಡಲು ಶುರು ಮಾಡಿದೆ. ಮೋದಿ ಮತ್ತು ಅವರ ಸರ್ಕಾರದ ಜನಪ್ರಿಯತೆ ಈ ಒಂದೇ ತಿಂಗಳಲ್ಲಿ 19 ಅಂಕಗಳಷ್ಟು  ಕುಸಿದಿದೆ ಎಂದು ಅದರ ಲೇಟೆಸ್ಟ್ ಸಮೀಕ್ಷೆ ಹೇಳುತ್ತಿದೆ. ಈ ಹಿಂದಿನ ಸರ್ವೆಯಲ್ಲಿ ಅದು ಬಾಲಾಕೋಟ್ ದಾಳಿ ನಂತರ ಮೋದಿ ಜನಪ್ರಿಯತೆ ಹೆಚ್ಚಿದೆ ಎಂದು ಹೇಳಿತ್ತು. ಹೊಸ ಸಮೀಕ್ಷೆಯಲ್ಲಿ ಅದು ಕೇವಲ ಒಂದೇ ತಿಂಗಳಲ್ಲಿ 19 ಅಂಕಗಳಷ್ಟು ಕುಸಿದೆ ಎಂದು ಅಂಕಿಅಂಶಗಳನ್ನು ನೀಡಿದೆ.
ಮಾರ್ಚ್ 7ರಂದು ಮೋದಿ ಸರ್ಕಾರದ ಜನಪ್ರಿಯತೆ ದರ ಶೇ. 62.02 ಇತ್ತು. ನಂತರ ಅದರಲ್ಲಿ ಸಣ್ಣಗೆ ಕುಸಿತ ಶುರುವಾಯಿತು. ಏಪ್ರಿಲ್ 12 ರ ಮೊದಲ ಹಂತದ ಚುನಾವಣೆ ಬಳಿಕ ಅದು ಶೇ. 43.25ಕ್ಕೆ ಕುಸಿದಿದೆ ಎನ್ನುತ್ತದೆ ಸ-ವೋಟರರನ ಲೇಟೆಸ್ಟ್ ಸರ್ವೆ.
     ಸಮೀಕ್ಷೆ ಅಂದಾಜಿಗಿಂತ ಕೆಳಕ್ಕೆ ಬಿಜೆಪಿ
• ಸಿಎಸ್‍ಡಿಎಸ್‍ನ ಸಂಜಯಕುಮಾರ್ ಮತ್ತು ಸಿ-ವೋಟರ್‍ನ ಲೇಟೆಸ್ಟ್ ಲೆಕ್ಕಾಚಾರ ಮತ್ತು ಸಮೀಕ್ಷೆಗಳ ಪ್ರಕಾರ, ಮೊದಲ ಹಂತಕ್ಕೂ ಮೊದಲು ಸರ್ವೆಗಳು ಬಿಜೆಪಿ ಮತ್ತು ಎನ್‍ಡಿಎಗೆ ಅಂದಾಜಿಸಿದ್ದಕ್ಕಿಂತ ಕಡಿಮೆ ಸೀಟುಗಳು ಸಿಗಲಿವೆ.
• ಸಿ-ವೋಟರ್ ಪ್ರಕಾರ, ಬಾಲಾಕೋಟ್ ವಿಷಯ ಈಗ ಕಾಣೆಯಾಗಿದ್ದು, ಮೋದಿಯ ಜನಪ್ರಿಯತೆ ಕೆಳಮುಖದಲ್ಲಿ ಚಲಿಸುತ್ತಿದೆ.
• ಪ್ರಧಾನಿ ಹುದ್ದೆಗೆ ಮೋದಿಯೇ ಸೂಕ್ತ ಎಂಬ ಅಭಿಪ್ರಾಯಕ್ಕೆ ಹೆಚ್ಚು ಬೆಂಬಲ  ನೀಡಿದ್ದ ಉತ್ತರ  ಪ್ರದೇಶ,  ಮಹಾರಾಷ್ಟ್ರ ಮತ್ತು ಬಿಹಾರ್‍ಗಳಲ್ಲಿ ಬಿಜೆಪಿ/ಎನ್‍ಡಿಎ ಮೈತ್ರಿ ಲೆಕ್ಕಾಚಾರ, ಜಾತಿ ಮತ್ತು ಅಭ್ಯರ್ಥಿಗಳ ಆಯ್ಕೆಯಲ್ಲಿ ಅಶಕ್ತವಾಗಿವೆ.
• ಉತ್ತರಪ್ರದೇಶದಲ್ಲಿ ಮಹಾಘಟಬಂಧನ್‍ಗೆ ದೊಡ್ಡ ಲಾಭ ಸಿಗಲಿದ್ದರೆ, ಬಿಹಾರ್ ಮತ್ತು ಮಹಾರಾಷ್ಟ್ರಗಳಲ್ಲಿ ಸೀಟ್-ಟು-ಸೀಟ್ ಕದನವಿರುವುದು ಬಿಜೆಪಿ ಮತ್ತು ಮೋದಿಗೆ ಹಿನ್ನಡೆಯೇ ಎನ್ನುತ್ತಾರೆ ಸಂಜಯ ಕುಮಾರ್.
• ಕೊನೆಯ ಹಂತದ ಸರ್ವೆಗಳು ಎನ್‍ಡಿಎಗೆ 260-270 ಸೀಟುಗಳು ಸಿಗಲಿವೆ ಎಂದಿದ್ದವು. ಆದರೆ ಈಗ ಮೊದಲ ಹಂತದ ನಂತರದಲ್ಲಿ ಸಿ-ವೋಟರ್ ಟ್ರ್ಯಾಕರ್ ಮತ್ತು ಸಿಎಸ್‍ಡಿಎಸ್ ನಿರ್ದೇಶಕ ಸಣಜಯ ಕುಮಾರ್ ವಿಶ್ಲೇಷಣೆ ಪ್ರಕಾರ, ಎನ್‍ಡಿಎ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಕುಸಿಯಲಿದೆ.
(ಆಧಾರ: ದಿ ಕ್ವಿಂಟ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...