Homeಮುಖಪುಟಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ ಕೋರ್ಟ್ ಮುಂದೆ ವಾಗ್ದಾನ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಅವರ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆ ತರಲಾಗುವುದು. ಆದರೆ, ಇದು ಕೇವಲ ಮಾನವೀಯ ಆಧಾರದ ಮೇಲೆ ಮಾತ್ರ. ಇದರಿಂದ ನಮ್ಮ ಮೂಲ ವಾದ (merits of the case)ಅಥವಾ ಹಕ್ಕುಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಪ್ರಕರಣದಲ್ಲಿ ನಮ್ಮ ಅಧಿಕೃತ ನಿಲುವು ಬದಲಾಗುವುದಿಲ್ಲ, ಅವರನ್ನು ಭಾರತಕ್ಕೆ ಕರೆತಂದ ನಂತರ ನಾವು ಅವರ ಮೇಲೆ ನಿಗಾ (surveillance)ಇರಿಸುವ ಹಕ್ಕನ್ನೂ ಬಿಟ್ಟುಕೊಡುತ್ತಿಲ್ಲ" ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಬಹುದೇ? ಎಂದು ಸೋಮವಾರ ನ್ಯಾಯಾಲಯವು ಸರ್ಕಾರವನ್ನು ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಸ್‌ಜಿ ತುಷಾರ್ ಮೆಹ್ತಾ, ಸರ್ಕಾರದಿಂದ ಸೂಚನೆಗಳನ್ನು ಪಡೆಯುವುದಾಗಿ ಹೇಳಿದ್ದರು. ಅದರಂತೆ ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು ಇಬ್ಬರನ್ನು ವಾಪಸ್ ಕರೆತರುಲು ಒಪ್ಪಿಕೊಂಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಆಕೆಯ 8 ವರ್ಷದ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆತರುವುದಾಗಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ. ಇಬ್ಬರನ್ನೂ ದೆಹಲಿಯಲ್ಲಿ ವಶಕ್ಕೆ ಪಡೆದ ಕಾರಣ ಅವರನ್ನು ದೆಹಲಿಗೇ ವಾಪಸ್ ಕರೆತರುವುದಾಗಿ ತಿಳಿಸಿದ್ದಾರೆ. ಆದರೆ, ಅರ್ಜಿದಾರರ ಪರ ವಕೀಲರು ಮಹಿಳೆ ಮತ್ತು ಮಗನನ್ನು ಆಕೆಯ ತಂದೆ ವಾಸಿಸುವ ಪಶ್ವಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಪಟ್ಟಣಕ್ಕೆ ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆ ಪಶ್ಚಿಮ ಬಂಗಾಳ ಸರ್ಕಾರ ಆಕೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಬೇಕು. ಅಲ್ಲದೆ, ಆಕೆಯ ಮಗನನ್ನು ಸಹ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುನಾಲಿ ಖಾತೂನ್, ಆಕೆಯ ಮಗ ಸಬೀರ್ ಸೇರಿದಂತೆ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ 6 ಮಂದಿಯನ್ನು ವಾಪಸ್ ಕರೆತರುವಂತೆ ಸೆಪ್ಟೆಂಬರ್ 27ರಂದು ಕಲ್ಕತ್ತಾ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಇದರ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆ ಆರ್ಜಿಯ ವಿಚಾರಣೆ ನಡೆಯುತ್ತಿದೆ.

ಸುನಾಲಿ ಅವರ ತಂದೆ ಭೋದು ಶೇಖ್ ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿ ಗಡಿಪಾರು ಮಾಡಿದ್ದಾರೆ. ದಯಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಕೇಳಿಕೊಂಡಿದ್ದರು. ನಾನು ಪಶ್ಚಿಮ ಬಂಗಾಳದ ಖಾಯಂ ನಿವಾಸಿ. ನನ್ನ ಮಗಳು, ಅಳಿಯನೂ ಭಾರತದಲ್ಲಿ ಹುಟ್ಟಿ ಬೆಳೆದವರು. ನಮ್ಮ ಕುಟುಂಬ ತಲೆತಲಾಂತರದಿಂದ ಪಶ್ಚಿಮ ಬಂಗಾಳದಲ್ಲೇ ಇದೆ. ಕೆಲಸಕ್ಕಾಗಿ ಮಾತ್ರ ಮಗಳು, ಅಳಿಯ ದೆಹಲಿಗೆ ಹೋಗಿದ್ದರು ಎಂದು ಭೋದು ಶೇಖ್ ಹೇಳಿದ್ದರು.

ಇಂದು, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಗಡಿಪಾರು ಮಾಡಲಾದ ಇತರ ನಾಲ್ವರು ವ್ಯಕ್ತಿಗಳನ್ನು ವಾಪಸ್ ಕರೆ ತರುವ ಬಗ್ಗೆ ಕೇಂದ್ರದಿಂದ ಸೂಚನೆಗಳನ್ನು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಜಿ ತುಷಾರ್ ಮೆಹ್ತಾ, ಗಡಿಪಾರಾದವರು ಬಾಂಗ್ಲಾದೇಶಿಗರು, ಅವರನ್ನು ವಾಪಸ್ ಕರೆತರುವುದಕ್ಕೆ ಕೇಂದ್ರ ಸರ್ಕಾರದ ತೀವ್ರ ಆಕ್ಷೇಪವಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಕೆವಿಯಟ್ (ಮುಂಚಿತ ಎಚ್ಚರಿಕೆ ಅರ್ಜಿ) ಹಾಕಿ, ಆ ವ್ಯಕ್ತಿಗಳಿಗೆ ರಕ್ಷಣೆಯನ್ನು ಕೋರುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.

ಅರ್ಜಿದಾರ ಬೋಧು ಶೇಕ್ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು, ಸುನಾಲಿ ಖಾತೂನ್ ಭೋದು ಶೇಖ್ (ಭಾರತೀಯ ಪ್ರಜೆ) ಅವರೊಂದಿಗೆ ಜೈವಿಕ ಸಂಬಂಧವನ್ನು ಸಾಬೀತು ಮಾಡಬಹುದು ಎಂದಾದರೆ, ಅವರು ಭಾರತೀಯ ನಾಗರಿಕತ್ವವನ್ನೂ ಸಾಬೀತು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...