Homeಮುಖಪುಟಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ ಕೋರ್ಟ್ ಮುಂದೆ ವಾಗ್ದಾನ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಅವರ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆ ತರಲಾಗುವುದು. ಆದರೆ, ಇದು ಕೇವಲ ಮಾನವೀಯ ಆಧಾರದ ಮೇಲೆ ಮಾತ್ರ. ಇದರಿಂದ ನಮ್ಮ ಮೂಲ ವಾದ (merits of the case)ಅಥವಾ ಹಕ್ಕುಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಪ್ರಕರಣದಲ್ಲಿ ನಮ್ಮ ಅಧಿಕೃತ ನಿಲುವು ಬದಲಾಗುವುದಿಲ್ಲ, ಅವರನ್ನು ಭಾರತಕ್ಕೆ ಕರೆತಂದ ನಂತರ ನಾವು ಅವರ ಮೇಲೆ ನಿಗಾ (surveillance)ಇರಿಸುವ ಹಕ್ಕನ್ನೂ ಬಿಟ್ಟುಕೊಡುತ್ತಿಲ್ಲ" ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಬಹುದೇ? ಎಂದು ಸೋಮವಾರ ನ್ಯಾಯಾಲಯವು ಸರ್ಕಾರವನ್ನು ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಸ್‌ಜಿ ತುಷಾರ್ ಮೆಹ್ತಾ, ಸರ್ಕಾರದಿಂದ ಸೂಚನೆಗಳನ್ನು ಪಡೆಯುವುದಾಗಿ ಹೇಳಿದ್ದರು. ಅದರಂತೆ ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು ಇಬ್ಬರನ್ನು ವಾಪಸ್ ಕರೆತರುಲು ಒಪ್ಪಿಕೊಂಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಆಕೆಯ 8 ವರ್ಷದ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆತರುವುದಾಗಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ. ಇಬ್ಬರನ್ನೂ ದೆಹಲಿಯಲ್ಲಿ ವಶಕ್ಕೆ ಪಡೆದ ಕಾರಣ ಅವರನ್ನು ದೆಹಲಿಗೇ ವಾಪಸ್ ಕರೆತರುವುದಾಗಿ ತಿಳಿಸಿದ್ದಾರೆ. ಆದರೆ, ಅರ್ಜಿದಾರರ ಪರ ವಕೀಲರು ಮಹಿಳೆ ಮತ್ತು ಮಗನನ್ನು ಆಕೆಯ ತಂದೆ ವಾಸಿಸುವ ಪಶ್ವಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಪಟ್ಟಣಕ್ಕೆ ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆ ಪಶ್ಚಿಮ ಬಂಗಾಳ ಸರ್ಕಾರ ಆಕೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಬೇಕು. ಅಲ್ಲದೆ, ಆಕೆಯ ಮಗನನ್ನು ಸಹ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುನಾಲಿ ಖಾತೂನ್, ಆಕೆಯ ಮಗ ಸಬೀರ್ ಸೇರಿದಂತೆ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ 6 ಮಂದಿಯನ್ನು ವಾಪಸ್ ಕರೆತರುವಂತೆ ಸೆಪ್ಟೆಂಬರ್ 27ರಂದು ಕಲ್ಕತ್ತಾ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಇದರ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆ ಆರ್ಜಿಯ ವಿಚಾರಣೆ ನಡೆಯುತ್ತಿದೆ.

ಸುನಾಲಿ ಅವರ ತಂದೆ ಭೋದು ಶೇಖ್ ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿ ಗಡಿಪಾರು ಮಾಡಿದ್ದಾರೆ. ದಯಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಕೇಳಿಕೊಂಡಿದ್ದರು. ನಾನು ಪಶ್ಚಿಮ ಬಂಗಾಳದ ಖಾಯಂ ನಿವಾಸಿ. ನನ್ನ ಮಗಳು, ಅಳಿಯನೂ ಭಾರತದಲ್ಲಿ ಹುಟ್ಟಿ ಬೆಳೆದವರು. ನಮ್ಮ ಕುಟುಂಬ ತಲೆತಲಾಂತರದಿಂದ ಪಶ್ಚಿಮ ಬಂಗಾಳದಲ್ಲೇ ಇದೆ. ಕೆಲಸಕ್ಕಾಗಿ ಮಾತ್ರ ಮಗಳು, ಅಳಿಯ ದೆಹಲಿಗೆ ಹೋಗಿದ್ದರು ಎಂದು ಭೋದು ಶೇಖ್ ಹೇಳಿದ್ದರು.

ಇಂದು, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಗಡಿಪಾರು ಮಾಡಲಾದ ಇತರ ನಾಲ್ವರು ವ್ಯಕ್ತಿಗಳನ್ನು ವಾಪಸ್ ಕರೆ ತರುವ ಬಗ್ಗೆ ಕೇಂದ್ರದಿಂದ ಸೂಚನೆಗಳನ್ನು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಜಿ ತುಷಾರ್ ಮೆಹ್ತಾ, ಗಡಿಪಾರಾದವರು ಬಾಂಗ್ಲಾದೇಶಿಗರು, ಅವರನ್ನು ವಾಪಸ್ ಕರೆತರುವುದಕ್ಕೆ ಕೇಂದ್ರ ಸರ್ಕಾರದ ತೀವ್ರ ಆಕ್ಷೇಪವಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಕೆವಿಯಟ್ (ಮುಂಚಿತ ಎಚ್ಚರಿಕೆ ಅರ್ಜಿ) ಹಾಕಿ, ಆ ವ್ಯಕ್ತಿಗಳಿಗೆ ರಕ್ಷಣೆಯನ್ನು ಕೋರುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.

ಅರ್ಜಿದಾರ ಬೋಧು ಶೇಕ್ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು, ಸುನಾಲಿ ಖಾತೂನ್ ಭೋದು ಶೇಖ್ (ಭಾರತೀಯ ಪ್ರಜೆ) ಅವರೊಂದಿಗೆ ಜೈವಿಕ ಸಂಬಂಧವನ್ನು ಸಾಬೀತು ಮಾಡಬಹುದು ಎಂದಾದರೆ, ಅವರು ಭಾರತೀಯ ನಾಗರಿಕತ್ವವನ್ನೂ ಸಾಬೀತು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...