Homeಮುಖಪುಟಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ ಕೋರ್ಟ್ ಮುಂದೆ ವಾಗ್ದಾನ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಅವರ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆ ತರಲಾಗುವುದು. ಆದರೆ, ಇದು ಕೇವಲ ಮಾನವೀಯ ಆಧಾರದ ಮೇಲೆ ಮಾತ್ರ. ಇದರಿಂದ ನಮ್ಮ ಮೂಲ ವಾದ (merits of the case)ಅಥವಾ ಹಕ್ಕುಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಪ್ರಕರಣದಲ್ಲಿ ನಮ್ಮ ಅಧಿಕೃತ ನಿಲುವು ಬದಲಾಗುವುದಿಲ್ಲ, ಅವರನ್ನು ಭಾರತಕ್ಕೆ ಕರೆತಂದ ನಂತರ ನಾವು ಅವರ ಮೇಲೆ ನಿಗಾ (surveillance)ಇರಿಸುವ ಹಕ್ಕನ್ನೂ ಬಿಟ್ಟುಕೊಡುತ್ತಿಲ್ಲ" ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಬಹುದೇ? ಎಂದು ಸೋಮವಾರ ನ್ಯಾಯಾಲಯವು ಸರ್ಕಾರವನ್ನು ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಸ್‌ಜಿ ತುಷಾರ್ ಮೆಹ್ತಾ, ಸರ್ಕಾರದಿಂದ ಸೂಚನೆಗಳನ್ನು ಪಡೆಯುವುದಾಗಿ ಹೇಳಿದ್ದರು. ಅದರಂತೆ ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು ಇಬ್ಬರನ್ನು ವಾಪಸ್ ಕರೆತರುಲು ಒಪ್ಪಿಕೊಂಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಆಕೆಯ 8 ವರ್ಷದ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆತರುವುದಾಗಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ. ಇಬ್ಬರನ್ನೂ ದೆಹಲಿಯಲ್ಲಿ ವಶಕ್ಕೆ ಪಡೆದ ಕಾರಣ ಅವರನ್ನು ದೆಹಲಿಗೇ ವಾಪಸ್ ಕರೆತರುವುದಾಗಿ ತಿಳಿಸಿದ್ದಾರೆ. ಆದರೆ, ಅರ್ಜಿದಾರರ ಪರ ವಕೀಲರು ಮಹಿಳೆ ಮತ್ತು ಮಗನನ್ನು ಆಕೆಯ ತಂದೆ ವಾಸಿಸುವ ಪಶ್ವಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಪಟ್ಟಣಕ್ಕೆ ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆ ಪಶ್ಚಿಮ ಬಂಗಾಳ ಸರ್ಕಾರ ಆಕೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಬೇಕು. ಅಲ್ಲದೆ, ಆಕೆಯ ಮಗನನ್ನು ಸಹ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುನಾಲಿ ಖಾತೂನ್, ಆಕೆಯ ಮಗ ಸಬೀರ್ ಸೇರಿದಂತೆ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ 6 ಮಂದಿಯನ್ನು ವಾಪಸ್ ಕರೆತರುವಂತೆ ಸೆಪ್ಟೆಂಬರ್ 27ರಂದು ಕಲ್ಕತ್ತಾ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಇದರ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆ ಆರ್ಜಿಯ ವಿಚಾರಣೆ ನಡೆಯುತ್ತಿದೆ.

ಸುನಾಲಿ ಅವರ ತಂದೆ ಭೋದು ಶೇಖ್ ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿ ಗಡಿಪಾರು ಮಾಡಿದ್ದಾರೆ. ದಯಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಕೇಳಿಕೊಂಡಿದ್ದರು. ನಾನು ಪಶ್ಚಿಮ ಬಂಗಾಳದ ಖಾಯಂ ನಿವಾಸಿ. ನನ್ನ ಮಗಳು, ಅಳಿಯನೂ ಭಾರತದಲ್ಲಿ ಹುಟ್ಟಿ ಬೆಳೆದವರು. ನಮ್ಮ ಕುಟುಂಬ ತಲೆತಲಾಂತರದಿಂದ ಪಶ್ಚಿಮ ಬಂಗಾಳದಲ್ಲೇ ಇದೆ. ಕೆಲಸಕ್ಕಾಗಿ ಮಾತ್ರ ಮಗಳು, ಅಳಿಯ ದೆಹಲಿಗೆ ಹೋಗಿದ್ದರು ಎಂದು ಭೋದು ಶೇಖ್ ಹೇಳಿದ್ದರು.

ಇಂದು, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಗಡಿಪಾರು ಮಾಡಲಾದ ಇತರ ನಾಲ್ವರು ವ್ಯಕ್ತಿಗಳನ್ನು ವಾಪಸ್ ಕರೆ ತರುವ ಬಗ್ಗೆ ಕೇಂದ್ರದಿಂದ ಸೂಚನೆಗಳನ್ನು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಜಿ ತುಷಾರ್ ಮೆಹ್ತಾ, ಗಡಿಪಾರಾದವರು ಬಾಂಗ್ಲಾದೇಶಿಗರು, ಅವರನ್ನು ವಾಪಸ್ ಕರೆತರುವುದಕ್ಕೆ ಕೇಂದ್ರ ಸರ್ಕಾರದ ತೀವ್ರ ಆಕ್ಷೇಪವಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಕೆವಿಯಟ್ (ಮುಂಚಿತ ಎಚ್ಚರಿಕೆ ಅರ್ಜಿ) ಹಾಕಿ, ಆ ವ್ಯಕ್ತಿಗಳಿಗೆ ರಕ್ಷಣೆಯನ್ನು ಕೋರುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.

ಅರ್ಜಿದಾರ ಬೋಧು ಶೇಕ್ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು, ಸುನಾಲಿ ಖಾತೂನ್ ಭೋದು ಶೇಖ್ (ಭಾರತೀಯ ಪ್ರಜೆ) ಅವರೊಂದಿಗೆ ಜೈವಿಕ ಸಂಬಂಧವನ್ನು ಸಾಬೀತು ಮಾಡಬಹುದು ಎಂದಾದರೆ, ಅವರು ಭಾರತೀಯ ನಾಗರಿಕತ್ವವನ್ನೂ ಸಾಬೀತು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...