Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ: ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ: ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

- Advertisement -
- Advertisement -

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅಲಹಾಬಾದ್ ಹೈಕೋರ್ಟ್‌ ಮೊರೆ ಹೋಗಲು ಮುಸ್ಲಿಂ ಪರ ಅರ್ಜಿದಾರರು ಮುಂದಾಗಿದ್ದಾರೆ.

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿತ್ತು.

ವಾರಣಾಸಿ ನ್ಯಾಯಾಲಯದ ಈ ಆದೇಶದ ಕುರಿತು ಪ್ರತಿಕ್ರಿಯಿಸಿದ ಮುಸ್ಲಿಂ ಪರ ವಕೀಲ ಅಖ್ಲಾಕ್ ಅಹ್ಮದ್, ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ಹೇಳಿದ್ದಾರೆ. ಈ ಆದೇಶವು 2022ರ ಅಡ್ವೊಕೇಟ್ ಕಮಿಷನರ್ ವರದಿ, 1937ರ ಎಎಸ್‌ಐ ವರದಿಯನ್ನು ಕಡೆಗಣಿಸಿದೆ. 1993ರ ಮೊದಲು ಪ್ರಾರ್ಥನೆಗಳನ್ನು ನಡೆಸಿರುವ ಬಗ್ಗೆ ಹಿಂದೂ ಕಡೆಯವರು ಯಾವುದೇ ಸಾಕ್ಷ್ಯವನ್ನು ನೀಡಿಲ್ಲ.  ಸ್ಥಳದಲ್ಲಿ ಅಂತಹ ಯಾವುದೇ ವಿಗ್ರಹವಿರಲಿಲ್ಲ ಎಂದು ಹೇಳಿದ್ದಾರೆ.

ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಮೆರಾಜುದ್ದೀನ್ ಸಿದ್ದಿಕಿ, ಅದೇಶದ ವಿರುದ್ಧ ಉನ್ನತ ನ್ಯಾಯಾಲಯಗಳ ಮೊರೆ ಹೋಗುತ್ತೇವೆ. ನಾನು ಅಂತಹ ಯಾವುದೇ ಆದೇಶವನ್ನು ಸ್ವೀಕರಿಸುವುದಿಲ್ಲ,  ನಾವು ಕಾನೂನು ಹೋರಾಟ ಮಾಡುತ್ತೇವೆ, ರಾಜಕೀಯ ಲಾಭ ಪಡೆಯಲು ಇದು ನಡೆಯುತ್ತಿದೆ, ಬಾಬ್ರಿಯಲ್ಲಿ ಮಾಡಿದ ಅದೇ ವಿಧಾನವನ್ನು ಇಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕಮಿಷನರ್ ವರದಿ ಮತ್ತು ಎಎಸ್‌ಐ ವರದಿಯು ಒಳಗೆ ಏನೂ ಇಲ್ಲ ಎಂದು ಹೇಳಿತ್ತು,  ನ್ಯಾಯಾಲಯದ ಆದೇಶದಿಂದ ನಮಗೆ ತುಂಬಾ ಅಸಮಾಧಾನವಾಗಿದೆ. 1993ಕ್ಕಿಂತ ಮೊದಲು ಅಲ್ಲಿ ಪ್ರಾರ್ಥನೆಗಳು ನಡೆದಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಮೆರಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ.

ನ್ಯಾಯಾಲಯ ನಿನ್ನೆ ನೀಡಿದ ಆದೇಶದ ಬಳಿಕ ಮಾತನಾಡಿದ್ದ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಜಿಲ್ಲಾಡಳಿತವು ಈ ಬಗ್ಗೆ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿ ಒಟ್ಟು 4 ನೆಲ ಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿತ್ತು.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...