Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ: ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ: ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

- Advertisement -
- Advertisement -

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅಲಹಾಬಾದ್ ಹೈಕೋರ್ಟ್‌ ಮೊರೆ ಹೋಗಲು ಮುಸ್ಲಿಂ ಪರ ಅರ್ಜಿದಾರರು ಮುಂದಾಗಿದ್ದಾರೆ.

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿತ್ತು.

ವಾರಣಾಸಿ ನ್ಯಾಯಾಲಯದ ಈ ಆದೇಶದ ಕುರಿತು ಪ್ರತಿಕ್ರಿಯಿಸಿದ ಮುಸ್ಲಿಂ ಪರ ವಕೀಲ ಅಖ್ಲಾಕ್ ಅಹ್ಮದ್, ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ಹೇಳಿದ್ದಾರೆ. ಈ ಆದೇಶವು 2022ರ ಅಡ್ವೊಕೇಟ್ ಕಮಿಷನರ್ ವರದಿ, 1937ರ ಎಎಸ್‌ಐ ವರದಿಯನ್ನು ಕಡೆಗಣಿಸಿದೆ. 1993ರ ಮೊದಲು ಪ್ರಾರ್ಥನೆಗಳನ್ನು ನಡೆಸಿರುವ ಬಗ್ಗೆ ಹಿಂದೂ ಕಡೆಯವರು ಯಾವುದೇ ಸಾಕ್ಷ್ಯವನ್ನು ನೀಡಿಲ್ಲ.  ಸ್ಥಳದಲ್ಲಿ ಅಂತಹ ಯಾವುದೇ ವಿಗ್ರಹವಿರಲಿಲ್ಲ ಎಂದು ಹೇಳಿದ್ದಾರೆ.

ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಮೆರಾಜುದ್ದೀನ್ ಸಿದ್ದಿಕಿ, ಅದೇಶದ ವಿರುದ್ಧ ಉನ್ನತ ನ್ಯಾಯಾಲಯಗಳ ಮೊರೆ ಹೋಗುತ್ತೇವೆ. ನಾನು ಅಂತಹ ಯಾವುದೇ ಆದೇಶವನ್ನು ಸ್ವೀಕರಿಸುವುದಿಲ್ಲ,  ನಾವು ಕಾನೂನು ಹೋರಾಟ ಮಾಡುತ್ತೇವೆ, ರಾಜಕೀಯ ಲಾಭ ಪಡೆಯಲು ಇದು ನಡೆಯುತ್ತಿದೆ, ಬಾಬ್ರಿಯಲ್ಲಿ ಮಾಡಿದ ಅದೇ ವಿಧಾನವನ್ನು ಇಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕಮಿಷನರ್ ವರದಿ ಮತ್ತು ಎಎಸ್‌ಐ ವರದಿಯು ಒಳಗೆ ಏನೂ ಇಲ್ಲ ಎಂದು ಹೇಳಿತ್ತು,  ನ್ಯಾಯಾಲಯದ ಆದೇಶದಿಂದ ನಮಗೆ ತುಂಬಾ ಅಸಮಾಧಾನವಾಗಿದೆ. 1993ಕ್ಕಿಂತ ಮೊದಲು ಅಲ್ಲಿ ಪ್ರಾರ್ಥನೆಗಳು ನಡೆದಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಮೆರಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ.

ನ್ಯಾಯಾಲಯ ನಿನ್ನೆ ನೀಡಿದ ಆದೇಶದ ಬಳಿಕ ಮಾತನಾಡಿದ್ದ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಜಿಲ್ಲಾಡಳಿತವು ಈ ಬಗ್ಗೆ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿ ಒಟ್ಟು 4 ನೆಲ ಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿತ್ತು.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...