Homeಮುಖಪುಟಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಆಂಧ್ರ ಪ್ರದೇಶದಲ್ಲಿ ವೈ.ಎಸ್ ರಾಜಶೇಖರ ರೆಡ್ಡಿ, ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿಯವರು ಪಾದಯಾತ್ರೆ ನಡೆಸಿದ ಬಳಿಕ ಸಿಎಂ ಆಗಿದ್ದಾರೆ.

- Advertisement -
- Advertisement -

ಭಾರತದಲ್ಲಿ ಪಾದಯಾತ್ರೆಗಳಿಗೆ ಸುಧೀರ್ಘ ಇತಿಹಾಸವಿದೆ. ಪಾದಯಾತ್ರೆ ಎಂದರೆ ಜನರ ಬಳಿಗೆ ಹೋಗುವುದು ಎಂದರ್ಥ. ಇದರಿಂದ ಜನರ ಸಂಕಷ್ಟಗಳ ನೇರ ದರ್ಶನವಾದರೆ, ಜನರಿಗೂ ನಾಯಕರ ಬಗ್ಗೆ ಅಭಿಮಾನ ಮೂಡುತ್ತದೆ. ಇದಕ್ಕೆ ದೈಹಿಕ ಕ್ಷಮತೆ ಮತ್ತು ಮಾನಸಿದ್ದ ಸಿದ್ದತೆ ಅತ್ಯಗತ್ಯ. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮ ಗಾಂಧಿಯವರು ಪಾದಯಾತ್ರೆಯನ್ನು ಹೋರಾಟದ ವಿಧಾನವನ್ನಾಗಿ ಪರಿಚಯಿಸಿದ್ದರು. ಅಲ್ಲಿಂದ ಆರಂಭವಾಗಿ ಇಂದಿಯೂ ದೇಶದಲ್ಲಿ ಪಾದಯಾತ್ರೆಗಳು ಮುಂದುವರೆದಿವೆ. ಕೆಲವು ಪಾದಯಾತ್ರೆಗಳು ಜನಜೀವನದ ಮೇಲೆ, ರಾಜಕೀಯದ ಆಗು ಹೋಗುಗಳ ಮೇಲೆ ಗಂಭೀರ ಪರಿಣಾಮ ಬೀರಿದರೆ, ಹಲವು ಪಾದಯಾತ್ರೆಗಳಿಂದ ಪಕ್ಷ, ನಾಯಕರು ಅಧಿಕಾರಕ್ಕೇರಿದ ಉದಾಹರಣೆಗಳಿವೆ. ಸದ್ಯಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಶ್ರೀನಗರದವರೆಗಿನ 3,570 ಕಿ.ಮೀ ಉದ್ದದ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಜರುಗಿರುವ ಪ್ರಮುಖ ಪಾದಯಾತ್ರೆಗಳ ಕುರಿತು ಟಿಪ್ಪಣಿ ಇಲ್ಲಿದೆ.

1930ರ ದಂಡಿ ಉಪ್ಪಿನ ಸತ್ಯಾಗ್ರಹ: 

ಭಾರತವು ಬ್ರಿಟಿಷ್ ಆಳ್ವಿಕೆಯಲ್ಲಿದ್ದಾಗ ಉಪ್ಪಿನ ಮೇಲೆ ತೆರಿಗೆ ವಿಧಿಸಲಾಯ್ತು. ಇದನ್ನು ವಿರೋಧಿಸಿ ಮಹಾತ್ಮ ಗಾಂಧಿಯವರರು 1930 ಮಾರ್ಚ್ 12 ರಂದು ಗುಜರಾತ್‌ ರಾಜ್ಯದ ಅಹಮದಬಾದ್‌ನ ಸಬರಮತಿ ಆಶ್ರಮದಿಂದ ಪಾದಯಾತ್ರೆ ಆರಂಭಿಸಿದರು. ದಾರಿ ಮಧ್ಯೆ ಅವರು ಸ್ಥಾಪಿಸಿದ ಆನಂದ ಆಶ್ರಮವನ್ನು ಮೋತಿಲಾಲ್ ನೆಹರುರವರು ಉದ್ಘಾಟಿಸಿದ್ದರು. 24 ದಿನಗಳ ಕಾಲ ಗಾಂಧಿಯವರು ತಮ್ಮ ಅನುಯಾಯಿಗಳೊಡನೆ 240 ಮೈಲಿ ದೂರ ನಡೆದು ಏಪ್ರಿಲ್ 6 ರಂದು ದಂಡಿಯನ್ನು ತಲುಪಿದರು. ಅಲ್ಲಿ ಉಪ್ಪನ್ನು ತಯಾರಿಸುವ ಮೂಲಕ ಕರ ನಿರಾಕರಣ ಚಳವಳಿಗೆ ಬಲ ತುಂಬಲಾಯ್ತು. ಇದು ಇತಿಹಾಸದಲ್ಲಿ ದಂಡಿ ಉಪ್ಪಿನ ಸತ್ಯಾಗ್ರಹ ಎಂದು ಖ್ಯಾತಿ ಪಡೆದಿದೆ.

ಮಾಜಿ ಪ್ರಧಾನಿ ಚಂದ್ರಶೇಖರ್‌ರವರ 1983ರ ಭಾರತ ಯಾತ್ರೆ

ಜನವರಿ 6, 1983ರಂದು ಜನತಾ ಪಕ್ಷದ ಅಧ್ಯಕ್ಷರಾಗಿದ್ದ ಚಂದ್ರಶೇಖರ್‌ರವರು ಆರಂಭಿಸಿದ “ಭಾರತ ಯಾತ್ರೆ” ಪಾದಯಾತ್ರೆಯು ಸಾಕಷ್ಟು ಸದ್ದು ಮಾಡಿತು. ಆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಜನತಾ ಪಕ್ಷ ಜಯಭೇರಿ ಬಾರಿಸಿ ಅಧಿಕಾರಿ ಹಿಡಿದಿತ್ತು. ತಮಿಳುನಾಡಿನ ಕನ್ಯಾಕುಮಾರಿಯಿಂದ ದೆಹಲಿಯ ಮಹಾತ್ಮ ಗಾಂಧಿ ಸಮಾಧಿ ಇರುವ ರಾಜ್‌ಘಾಟ್‌ವರೆಗಿನ 4,260 ಕಿ.ಮೀ ದೂರದ ಈ ಪಾದಯಾತ್ರೆಯು 6 ತಿಂಗಳ ಕಾಲ ನಡೆಯಿತು. ಜನಜೀವನವನ್ನು ಹತ್ತಿರದಿಂದ ನೋಡುವುದಕ್ಕಾಗಿ ಈ ಯಾತ್ರೆ ನಡೆಸುತ್ತಿದ್ದೇನೆ ಎಂದು ಚಂದ್ರಶೇಖರ್‌ರವರು ಘೋಷಿಸಿದ್ದರು. ಈ ಪಾದಯಾತ್ರೆಯ ವರ್ಚಸ್ಸಿನ ನಂತರ 1990ರಲ್ಲಿ ಅವರು ಭಾರತದ ಎಂಟನೇ ಪ್ರಧಾನಮಂತ್ರಿ ಆಗಿದ್ದರು.

 

ವೈ.ಎಸ್ ರಾಜಶೇಖರ ರೆಡ್ಡಿ ಪಾದಯಾತ್ರೆ- 2003

ಏಪ್ರಿಲ್ 09, 2003ರಲ್ಲಿ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕರಾಗಿದ್ದ ವೈ.ಎಸ್ ರಾಜಶೇಖರ ರೆಡ್ಡಿಯವರು ರಾಜ್ಯದ ಬರ ಪರಿಸ್ಥಿತಿಯನ್ನು ಅರಿಯಲು ಪಾದಯಾತ್ರೆ ಕೈಗೊಂಡಿದ್ದರು. ಸುಮಾರು ಎರಡು ತಿಂಗಳುಗಳ ಕಾಲ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಿ 1,475 ಕಿ.ಮೀಗಳನ್ನು ಕ್ರಮಿಸಿದ್ದರು. ನಂತರ 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಚಂದ್ರಬಾಬು ನಾಯ್ಡು-2013

ವೈ.ಎಸ್ ರಾಜಶೇಖರ ರೆಡ್ಡಿಯವರ ಮಾದರಿಯಲ್ಲಿಯೇ ತೆಲುಗು ದೇಶಂ ಪಕ್ಷದ ಮುಖಂಡರಾದ ಚಂದ್ರಬಾಬು ನಾಯ್ಡುರವರು 2013ರಲ್ಲಿ ಆಂಧ್ರ ಪ್ರದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದರು. ಸುಮಾರು 1,700 ಕಿ.ಮೀ ದೂರ ನಡೆದಿದ್ದ ಅವರು ಮರುವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಜಯಗಳಿಸಿ ಮುಖ್ಯಮಂತ್ರಿಯಾಗಿದ್ದರು.

ದಿಗ್ವಿಜಯ ಸಿಂಗ್ – 2017

ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಸೆಪ್ಟೆಂಬರ್ 2017 ರಲ್ಲಿ ನರ್ಮದಾ ಯಾತ್ರೆಯನ್ನು ಪ್ರಾರಂಭಿಸಿದರು. ನರ್ಮದಾ ನದಿಯ ದಡದಲ್ಲಿ ಅವರು ಸುಮಾರು 3,300 ಕಿ.ಮೀ ದೂರ ಹೆಜ್ಜೆ ಹಾಕಿದರು. ನಂತರ ಡಿಸೆಂಬರ್ 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು 230 ಕ್ಷೇತ್ರಗಳಲ್ಲಿ 114 ಸ್ಥಾನಗಳನ್ನು ಗೆದ್ದುಕೊಂಡಿತು. ನಂತರ, ಕಾಂಗ್ರೆಸ್ ಬಿಎಸ್ಪಿ ಮತ್ತು ಎಸ್ಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚಿಸಿತು. ಆದರೆ ದಿಗ್ವಿಜಯ್ ಸಿಂಗ್ ಬದಲಿಗೆ ಕಾಂಗ್ರೆಸ್‌ ಪಕ್ಷವು ಕಮಲ್‌ ನಾಥ್‌ರವರನ್ನು ಸಿಎಂ ಆಗಿ ಮಾಡಿತು. ಆನಂತರ ಆಪರೇಷನ್ ಕಮಲ ನಡೆದು ಅಲ್ಲಿ ಬಿಜೆಪಿ ಅಧಿಕಾರ ಪಡೆದಿದೆ.

ಜಗನ್ ಮೋಹನ್‌ರೆಡ್ಡಿಯ ‘ಪ್ರಜಾಸಂಕಲ್ಪ ಯಾತ್ರೆ’ -2017

ವೈಎಸ್ ರಾಜಶೇಖರ ರೆಡ್ಡಿಯವರ ಪುತ್ರರಾದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಅಧ್ಯಕ್ಷ ವೈ.ಎಸ್ ಜಗನ್ ಮೋಹನ್ ರೆಡ್ಡಿಯವರು ಸಹ ಯಶಸ್ವಿ ಪಾದಯಾತ್ರೆ ನಡೆಸಿದ್ದಾರೆ. ಅವರು ನವೆಂಬರ್ 6, 2017 ರಂದು ಅವರ ಹುಟ್ಟೂರಾದ ಕಡಪಾ ಜಿಲ್ಲೆಯ ಆರ್‌ಕೆ ವ್ಯಾಲಿಯಲ್ಲಿ ತಮ್ಮ ತಂದೆಯ ಸಮಾಧಿಗೆ ನಮನ ಸಲ್ಲಿಸಿ ಪಾದಯಾತ್ರೆ ಆರಂಭಿಸಿದರು. 341 ದಿನಗಳ ಕಾಲ ನಡೆದ ಪಾದಯಾತ್ರೆಯು 13 ಜಿಲ್ಲೆಗಳಲ್ಲಿ ಸಂಚರಿಸಿ 3,648 ಕಿಮೀ ಅನ್ನು ಕ್ರಮಿಸಿತು ಮತ್ತು 125 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿತ್ತು. 2019ರಲ್ಲಿ ಒಡಿಶಾ ಗಡಿಯ ಸಮೀಪವಿರುವ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂನಲ್ಲಿ ಮುಕ್ತಾಯಗೊಂಡಿತು. ಬಹು ವರ್ಣರಂಜಿತವಾಗಿ ನಡೆದ ಈ ಪಾದಯಾತ್ರೆಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಬೆಂಬಲ ನೀಡಿದ್ದರು.

ಈ ಯಾತ್ರೆಗಾಗಿ ರಚಿಸಿದ್ದ ರಾವಲಿ ಜಗನ್, ಕಾವಾಲಿ ಜಗನ್ ಎಂಬ ಹಾಡು ಸಾಕಷ್ಟು ಜನಪ್ರಿಯ ಗಳಿಸಿತ್ತು. 3 ಕೋಟಿ ಜನರು ಅದನ್ನು ನೋಡಿದ್ದರು. ಈ ಪಾದಯಾತ್ರೆಯಿಂದ ಜನಬೆಂಬಲ ಗಳಿಸಿದ ಜಗನ್ ಮೋಹನ್ ರೆಡ್ಡಿ 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಮುಖ್ಯಮಂತ್ರಿಯಾದರು.

ಕರ್ನಾಟಕದ ಪಾದಯಾತ್ರೆಗಳ ಇತಿಹಾಸ

ನರಗುಂದ-ಬೆಂಗಳೂರು ರೈತರ ಪಾದಯಾತ್ರೆ

ಮುಂಬೈ ಕರ್ನಾಟಕ ಪ್ರಾಂತ್ಯದ ರೈತರು ಮಲಪ್ರಭಾ ನೀರಾವರಿ ಯೋಜನೆಗಾಗಿ ಹೋರಾಟ ಆರಂಭಿಸಿದ್ದರು. 1980ರ ಜುಲೈ 21 ರಂದು ತಹಶೀಲ್ದಾರ್ ಕಚೇರಿ ಮುತ್ತಿಗೆ ಹೋರಾಟ ನಡೆಸಿದರು. ಆಗ ಪೊಲೀಸರು ನಡೆಸಿದ ಗೋಲಿಬಾರ್‌ನಿಂದಾಗಿ ಮೂವರು ರೈತರು ಹುತಾತ್ಮರಾದರು. ಆನಂತರ ದೇವರಾಜ ಅರಸುರವರ ನೇತೃತ್ವದಲ್ಲಿ ರಚನೆಗೊಂಡ ಪ್ರಗತಿಪರ ಕ್ರಾಂತಿರಂಗವು  1980 ಡಿಸೆಂಬರ್ 12 ರಿಂದ ನರಗುಂದದಿಂದ ಬೆಂಗಳೂರಿನವರೆಗೆ ರೈತರ ಪಾದಯಾತ್ರೆ ನಡೆಸಿತು. ಸುಮಾರು 500 ಕಿ.ಮಿ ನಷ್ಟು ಹೆಜ್ಜೆ ಹಾಕಿದ್ದರು. ಆ ನಂತರ ರೈತ ಸಂಘದ ನೇತೃತ್ವದಲ್ಲಿ ರೈತರು ಎಲ್ಲಾ ಭಾಗಗಳಿಂದ ಪಾದಯಾತ್ರೆ ನಡೆಸಿ ಬೆಂಗಳೂರಿನಲ್ಲಿ ಸೇರಿದ್ದರು.

ದೇವೇಗೌಡರ ಪಾದಯಾತ್ರೆ

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹಾಸನ ಜಿಲ್ಲೆಯ ದೊಡ್ಡಳ್ಳಿಯ ಗೋಲಿಬಾರ್‌ನಲ್ಲಿ ಮೃತಪಟ್ಟ ರೈತರಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು. ಅಲ್ಲದೆ ಹಲವು ವಿಚಾರಗಳಿಗೆ ದೇವೇಗೌಡರು ಪಾದಯಾತ್ರೆಗಳನ್ನು ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿದ್ದರಾಮಯ್ಯ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ

2008ರಲ್ಲಿ ಬಳ್ಳಾರಿ ಗಣಿ ಮಾಲೀಕರ ಹಣದಿಂದ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆಪರೇಷನ್ ಕಮಲಕ್ಕೆ ಗಣಿ ಲೂಟಿಯ ದುಡ್ಡನ್ನು ಬಳಸಿಕೊಳ್ಳಲಾಗಿತ್ತು ಎಂಬ ಆರೋಪಗಳಿದ್ದವು. ಯಡಿಯೂರಪ್ಪ ಸಿಎಂ ಆಗಿದ್ದಾಗ ಜನಾರ್ಧನ ರೆಡ್ಡಿಯವರು ಅಬ್ಬರಿಸುತ್ತಿದ್ದರು. ಹೀಗೆ 2010ರ ಒಂದು ದಿನ ವಿಧಾನಸಭೆಯ ಅಧಿವೇಶನದ ವೇಳೆ ‘ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದಾರು. ಆಗ ಅಲ್ಲಿಯೇ ಭುಜತಟ್ಟಿ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯನವರು ‘ನಾವು ನಡೆದುಕೊಂಡೆ ಬಳ್ಳಾರಿಗೆ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ’ ಎಂದು ಮರುಸವಾಲು ಹಾಕಿದರು.

ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನಾರ್ಧನ ರೆಡ್ಡಿ ಸಹೋದರರ ಭ್ರಷ್ಟಾಚಾರದ ವಿರುದ್ಧ 2010ರ ಜುಲೈ 25 ರಂದು ಬೆಂಗಳೂರಿನಿಂದ ಪಾದಯಾತ್ರೆ ಆರಂಭವಾಯಿತು. 300 ಕಿ.ಮೀ ಸಾಗಿದ ಪಾದಯಾತ್ರೆಗೆ ಅಪಾರ ಜನಬೆಂಬಲ ವ್ಯಕ್ತವಾಯಿತು ಮತ್ತು ಬಳ್ಳಾರಿ ಪ್ರವೇಶಿಸಿ ಬೃಹತ್ ಸಮಾವೇಶ ನಡೆಸಲಾಯಿತು. 2 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದವು. ಆ ಪಾದಯಾತ್ರೆಯ ಕಾಂಗ್ರೆಸ್‌ ಪಕ್ಷಕ್ಕೆ ಜನಬೆಂಬಲ ತಂದುಕೊಟ್ಟಿತು. ನಂತರ 2014ರಲ್ಲಿ ನಡೆದ ಚುಣಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿತು ಮತ್ತು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು.

ಮದ್ಯ ನಿಷೇಧ ಪಾದಯಾತ್ರೆ – 2019

ರಾಜ್ಯದಲ್ಲಿನ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು ಮತ್ತು ಮಹಿಳೆಯರ ಬದುಕು ಕಾಪಾಡಬೇಕು ಎಂಬ ಹಕ್ಕೊತ್ತಾಯವನ್ನಿಟ್ಟುಕೊಂಡು ಮದ್ಯ ನಿಷೇಧ ಆಂದೋಲನ ಸಂಘಟನೆಯ ನೇತೃತ್ವದಲ್ಲಿ 3000ಕ್ಕೂ ಹೆಚ್ಚು ಮಹಿಳೆಯರು ಪಾದಯಾತ್ರೆ ನಡೆಸಿದ್ದಾರೆ. 2019ರ ಜನವರಿ 19 ರಂದು ಚಿತ್ರದುರ್ಗದಲ್ಲಿ ಆರಂಭವಾದ ಪಾದಯಾತ್ರೆಯೂ ಜನವರಿ 30ರಂದು ಬೆಂಗಳೂರು ಪ್ರವೇಶಿಸಿತು. ಹೋರಾಟಗಾರ್ತಿ ಸ್ವರ್ಣ ಭಟ್‌ರವರು ನೇತೃತ್ವ ವಹಿಸಿದ್ದರು.

ಮೇಕೆದಾಟು ಪಾದಯಾತ್ರೆ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕುಡಿಯುವ ನೀರಿಗಾಗಿ ಡ್ಯಾಂ ಕಟ್ಟುವ ಮೇಕೆದಾಟು ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. ರಾಜ್ಯ ಬಿಜೆಪಿ ಸರ್ಕಾರದ ಅನುಮತಿ ನಿರಾಕರಣೆಯ ಹೊರತಾಗಿಯೂ 2022ರ ಜನವರಿ 09ರಂದು ಮೇಕೆದಾಟುವಿನಿಂದ ಆರಂಭವಾದ ಪಾದಯಾತ್ರೆಯು 5ನೇ ದಿನ ರಾಮನಗರ ತಲುಪಿತು. ಕೊರೊನಾ ಪ್ರಕರಣಗಳು ಹೆಚ್ಚಾಗುವ ಭೀತಿಯಿಂದ ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ 5ನೇ ದಿನದಂದು ಪಾದಯಾತ್ರೆಯನ್ನು ಸ್ಥಗಿತಗೊಳಿಸಿ ಮುಂದೂಡಲಾಯ್ತು. ಆ ನಂತರ ಫೆಬ್ರವರಿ 27ಕ್ಕೆ ಮತ್ತೆ ಪಾದಯಾತ್ರೆ ಆರಂಭಿಸಿ ಬೆಂಗಳೂರು ತಲುಪಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಿತು.

ಭಾರತ್ ಜೋಡೋ ಪಾದಯಾತ್ರೆ- 2022

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ದೇಶದ ಬಹುದೊಡ್ಡ ಪಾದಾಯಾತ್ರೆಗೆ ಸಜ್ಜಾಗಿದ್ದಾರೆ. ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭಿಸಲಿದ್ದಾರೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...