Homeಮುಖಪುಟ2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

- Advertisement -
- Advertisement -

“2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ” ಎಂದು ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಅಪ್ರಾಪ್ತ ವಯಸ್ಸಿನ ಕುಸ್ತಿಪಟು ಸೇರಿದಂತೆ ಏಳು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರುಗಳಿಗೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಏಪ್ರಿಲ್‌ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭವಾಗಿದೆ. ಇದರ ನಡುವೆ ಭಾನುವಾರ ನಡೆದ ರ್‍ಯಾಲಿಯಲ್ಲಿ ಅವರು ಮಾತನಾಡಿದ್ದಾರೆ. 2024ರ ಚುನಾವಣೆಗಾಗಿ ಬಿಜೆಪಿಯ ಮಹಾಸಂಪರ್ಕ್ ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರ್‍ಯಾಲಿ ಆಯೋಜನೆಗೊಂಡಿತ್ತು.

2024ರ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಬ್ರಿಜ್ ಭೂಷಣ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಲೋಕಸಭೆಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ನಾನು ಕೈಸರ್‌ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅವರ ವಿರುದ್ಧದ ಆರೋಪಗಳ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. “ನಾನು ಈ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇನೆ” ಎಂದಿದ್ದಾರೆ.

ಬ್ರಿಜ್ ಭೂಷಣ್ ಆರು ಬಾರಿ ಸಂಸದರಾಗಿದ್ದಾರೆ, ಐದು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಮತ್ತು ಒಮ್ಮೆ (2009 ರಲ್ಲಿ) ಎಸ್‌ಪಿ ಟಿಕೆಟ್‌ನಲ್ಲಿ ಗೆದ್ದಿದ್ದಾರೆ. ಅವರು ಗೊಂಡಾ ಲೋಕಸಭಾ ಕ್ಷೇತ್ರದಿಂದ 1991 ಮತ್ತು 1999ರಲ್ಲಿ ಮೊದಲ ಎರಡು ಚುನಾವಣೆಗಳನ್ನು ಗೆದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಇವರಿಗೆ ಬಲರಾಂಪುರ ಕ್ಷೇತ್ರದಿಂದ ಟಿಕೆಟ್ ನೀಡಿತು, ಗೊಂಡಾದಿಂದ ಘನಶ್ಯಾಮ್ ಶುಕ್ಲಾ ಅವರನ್ನು ನಿಲ್ಲಿಸಿತ್ತು. ಮತದಾನದ ದಿನ ರಸ್ತೆ ಅಪಘಾತದಲ್ಲಿ ಶುಕ್ಲಾ ಸಾವನ್ನಪ್ಪಿದ್ದರು.

ಸ್ಕ್ರಾಲ್‌ನೊಂದಿಗಿನ ಸಂದರ್ಭದಲ್ಲಿ ಒಮ್ಮೆ ಮಾತನಾಡಿದ್ದ ಬ್ರಿಜ್ ಭೂಷಣ್, “ನನ್ನ ವಿರೋಧಿಗಳು- ಇದು ಅಪಘಾತವಲ್ಲ ಕೊಲೆ ಎಂದು ವದಂತಿಗಳನ್ನು ಹರಡಿದರು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಕರೆ ಮಾಡಿ, ‘ಮಾರ್ವಾ ದಿಯಾ (ನೀವು ಅವನನ್ನು ಕೊಂದಿದ್ದೀರಿ) ಎಂದಿದ್ದರು” ಎಂದು ಸ್ಮರಿಸಿದ್ದರು.

ಇದು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಎಂದು ಬ್ರಿಜ್ ಭೂಷಣ್ ಅಭಿಪ್ರಾಯಪಡುತ್ತಾನೆ. ಪರಿಣಾಮವಾಗಿ, ಆತ 2008ರಲ್ಲಿ ಮಾಡಿದ್ದೇನು ಗೊತ್ತೆ? ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ವಿರುದ್ಧ ವಿರೋಧ ಪಕ್ಷ ವಿಶ್ವಾಸ ನಿರ್ಣಯ ಮಾಡಿದಾಗ ತಮ್ಮದೇ ಪಕ್ಷದ ವಿರುದ್ಧ ಅಡ್ಡ ಮತದಾನ ಮಾಡಿ ಸುದ್ದಿಯಾಗಿದ್ದರು. ಬಿಜೆಪಿ ಅವರನ್ನು ಹೊರಹಾಕಿತ್ತು, ಆದರೆ ಸಮಾಜವಾದಿ ಪಾರ್ಟಿ ಬ್ರಿಜ್‌ ಭೂಷಣ್‌ಗೆ ಬಾಗಿಲು ತೆರೆದಿತ್ತು.

2009ರಲ್ಲಿ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಮತ್ತೆ ಬಿಜೆಪಿ ಮರಳಿದರು. ಕೈಸರ್‌ಗಂಜ್‌ನಿಂದಲೇ 2019ರಲ್ಲೂ ಗೆದ್ದು ಸಂಸದನಾಗಿ ಮುಂದುವರಿದರು.

ಬಿಜೆಪಿ ಅಭ್ಯರ್ಥಿಯನ್ನು ಹತ್ಯೆ ಮಾಡಿರುವ ಬಗ್ಗೆ ಅಂದಿನ ಪ್ರಧಾನಿ ಭೂಷಣ್‌ ಮೇಲೆ ಶಂಕೆ ವ್ಯಕ್ತಪಡಿಸಿದ ಬಳಿಕವೂ ಅವರು ಬಿಜೆಪಿಯಲ್ಲೇ ಉಳಿದುಕೊಂಡಿರುವುದು ಗಮನಾರ್ಹ. ಅಡ್ಡ ಮತದಾನದ ನಂತರವೇ ಅವರು ಬಿಜೆಪಿಯಿಂದ ಉಚ್ಚಾಟಿತನಾಗಿದ್ದು!

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಇದ್ಯಾವುದೂ ಬ್ರಿಜ್ ಭೂಷಣ್‌ನ ರಾಜಕೀಯದ ಮೇಲೆ ಪರಿಣಾಮ ಬೀರಲಿಲ್ಲ. ಒಂದು ಕೊಲೆ ಮಾಡಿದ್ದೇನೆ ಎಂಬ ತಪ್ಪೊಪ್ಪಿಗೆ ಮತ್ತು ಆಗಿನ ಪ್ರಧಾನಿ ಮತ್ತೊಂದು ಕೊಲೆಯ ಆರೋಪ ಹೊರಿಸಿದರೂ, ಬಿಜೆಪಿ ಮತ್ತು ಪ್ರತಿಪಕ್ಷ ಎಸ್‌ಪಿ ಎರಡೂ ಬ್ರಿಜ್‌ಭೂಷಣ್‌ನನ್ನು ಅಪ್ಪಿಕೊಂಡಿವೆ! ಇವರ ಅಪರಾಧಗಳನ್ನು ಮುಚ್ಚಿಹಾಕಿವೆ. ಏಕೆಂದರೆ ಚುನಾವಣೆಯ ನಂತರ ಚುನಾವಣೆಯಲ್ಲಿ ಗೆಲ್ಲುವುದನ್ನು ಬ್ರಿಜ್ ಮುಂದುವರಿಸಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಕ್ರೀಡಾ ಸಂಘದ ಅಧ್ಯಕ್ಷರಾಗಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಬ್ರಿಜ್‌ ಭೂಷಣ್‌ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ದೇಶದ ಪ್ರಮುಖ ಕುಸ್ತಿಪಟುಗಳು ಕಳೆದ ಏಪ್ರಿಲ್‌ನಿಂದಲೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಬುಧವಾರ ಭೇಟಿಯಾದ ನಂತರ ಕುಸ್ತಿಪಟುಗಳು ಒಂದು ವಾರ ಕಾಲ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಬ್ರಿಜ್‌ ಭೂಷಣ್‌ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ.

ಶನಿವಾರ ಪ್ರತಿಕ್ರಿಯೆ ನೀಡಿದ್ದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್‌, “ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತಿಭಟನಾನಿರತ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ. ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಬ್ರಿಜ್ ಭೂಷಣ್‌ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...