Homeಮುಖಪುಟ2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

- Advertisement -
- Advertisement -

“2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ” ಎಂದು ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಅಪ್ರಾಪ್ತ ವಯಸ್ಸಿನ ಕುಸ್ತಿಪಟು ಸೇರಿದಂತೆ ಏಳು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರುಗಳಿಗೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಏಪ್ರಿಲ್‌ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭವಾಗಿದೆ. ಇದರ ನಡುವೆ ಭಾನುವಾರ ನಡೆದ ರ್‍ಯಾಲಿಯಲ್ಲಿ ಅವರು ಮಾತನಾಡಿದ್ದಾರೆ. 2024ರ ಚುನಾವಣೆಗಾಗಿ ಬಿಜೆಪಿಯ ಮಹಾಸಂಪರ್ಕ್ ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರ್‍ಯಾಲಿ ಆಯೋಜನೆಗೊಂಡಿತ್ತು.

2024ರ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಬ್ರಿಜ್ ಭೂಷಣ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಲೋಕಸಭೆಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ನಾನು ಕೈಸರ್‌ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅವರ ವಿರುದ್ಧದ ಆರೋಪಗಳ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. “ನಾನು ಈ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇನೆ” ಎಂದಿದ್ದಾರೆ.

ಬ್ರಿಜ್ ಭೂಷಣ್ ಆರು ಬಾರಿ ಸಂಸದರಾಗಿದ್ದಾರೆ, ಐದು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಮತ್ತು ಒಮ್ಮೆ (2009 ರಲ್ಲಿ) ಎಸ್‌ಪಿ ಟಿಕೆಟ್‌ನಲ್ಲಿ ಗೆದ್ದಿದ್ದಾರೆ. ಅವರು ಗೊಂಡಾ ಲೋಕಸಭಾ ಕ್ಷೇತ್ರದಿಂದ 1991 ಮತ್ತು 1999ರಲ್ಲಿ ಮೊದಲ ಎರಡು ಚುನಾವಣೆಗಳನ್ನು ಗೆದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಇವರಿಗೆ ಬಲರಾಂಪುರ ಕ್ಷೇತ್ರದಿಂದ ಟಿಕೆಟ್ ನೀಡಿತು, ಗೊಂಡಾದಿಂದ ಘನಶ್ಯಾಮ್ ಶುಕ್ಲಾ ಅವರನ್ನು ನಿಲ್ಲಿಸಿತ್ತು. ಮತದಾನದ ದಿನ ರಸ್ತೆ ಅಪಘಾತದಲ್ಲಿ ಶುಕ್ಲಾ ಸಾವನ್ನಪ್ಪಿದ್ದರು.

ಸ್ಕ್ರಾಲ್‌ನೊಂದಿಗಿನ ಸಂದರ್ಭದಲ್ಲಿ ಒಮ್ಮೆ ಮಾತನಾಡಿದ್ದ ಬ್ರಿಜ್ ಭೂಷಣ್, “ನನ್ನ ವಿರೋಧಿಗಳು- ಇದು ಅಪಘಾತವಲ್ಲ ಕೊಲೆ ಎಂದು ವದಂತಿಗಳನ್ನು ಹರಡಿದರು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಕರೆ ಮಾಡಿ, ‘ಮಾರ್ವಾ ದಿಯಾ (ನೀವು ಅವನನ್ನು ಕೊಂದಿದ್ದೀರಿ) ಎಂದಿದ್ದರು” ಎಂದು ಸ್ಮರಿಸಿದ್ದರು.

ಇದು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಎಂದು ಬ್ರಿಜ್ ಭೂಷಣ್ ಅಭಿಪ್ರಾಯಪಡುತ್ತಾನೆ. ಪರಿಣಾಮವಾಗಿ, ಆತ 2008ರಲ್ಲಿ ಮಾಡಿದ್ದೇನು ಗೊತ್ತೆ? ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ವಿರುದ್ಧ ವಿರೋಧ ಪಕ್ಷ ವಿಶ್ವಾಸ ನಿರ್ಣಯ ಮಾಡಿದಾಗ ತಮ್ಮದೇ ಪಕ್ಷದ ವಿರುದ್ಧ ಅಡ್ಡ ಮತದಾನ ಮಾಡಿ ಸುದ್ದಿಯಾಗಿದ್ದರು. ಬಿಜೆಪಿ ಅವರನ್ನು ಹೊರಹಾಕಿತ್ತು, ಆದರೆ ಸಮಾಜವಾದಿ ಪಾರ್ಟಿ ಬ್ರಿಜ್‌ ಭೂಷಣ್‌ಗೆ ಬಾಗಿಲು ತೆರೆದಿತ್ತು.

2009ರಲ್ಲಿ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಮತ್ತೆ ಬಿಜೆಪಿ ಮರಳಿದರು. ಕೈಸರ್‌ಗಂಜ್‌ನಿಂದಲೇ 2019ರಲ್ಲೂ ಗೆದ್ದು ಸಂಸದನಾಗಿ ಮುಂದುವರಿದರು.

ಬಿಜೆಪಿ ಅಭ್ಯರ್ಥಿಯನ್ನು ಹತ್ಯೆ ಮಾಡಿರುವ ಬಗ್ಗೆ ಅಂದಿನ ಪ್ರಧಾನಿ ಭೂಷಣ್‌ ಮೇಲೆ ಶಂಕೆ ವ್ಯಕ್ತಪಡಿಸಿದ ಬಳಿಕವೂ ಅವರು ಬಿಜೆಪಿಯಲ್ಲೇ ಉಳಿದುಕೊಂಡಿರುವುದು ಗಮನಾರ್ಹ. ಅಡ್ಡ ಮತದಾನದ ನಂತರವೇ ಅವರು ಬಿಜೆಪಿಯಿಂದ ಉಚ್ಚಾಟಿತನಾಗಿದ್ದು!

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಇದ್ಯಾವುದೂ ಬ್ರಿಜ್ ಭೂಷಣ್‌ನ ರಾಜಕೀಯದ ಮೇಲೆ ಪರಿಣಾಮ ಬೀರಲಿಲ್ಲ. ಒಂದು ಕೊಲೆ ಮಾಡಿದ್ದೇನೆ ಎಂಬ ತಪ್ಪೊಪ್ಪಿಗೆ ಮತ್ತು ಆಗಿನ ಪ್ರಧಾನಿ ಮತ್ತೊಂದು ಕೊಲೆಯ ಆರೋಪ ಹೊರಿಸಿದರೂ, ಬಿಜೆಪಿ ಮತ್ತು ಪ್ರತಿಪಕ್ಷ ಎಸ್‌ಪಿ ಎರಡೂ ಬ್ರಿಜ್‌ಭೂಷಣ್‌ನನ್ನು ಅಪ್ಪಿಕೊಂಡಿವೆ! ಇವರ ಅಪರಾಧಗಳನ್ನು ಮುಚ್ಚಿಹಾಕಿವೆ. ಏಕೆಂದರೆ ಚುನಾವಣೆಯ ನಂತರ ಚುನಾವಣೆಯಲ್ಲಿ ಗೆಲ್ಲುವುದನ್ನು ಬ್ರಿಜ್ ಮುಂದುವರಿಸಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಕ್ರೀಡಾ ಸಂಘದ ಅಧ್ಯಕ್ಷರಾಗಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಬ್ರಿಜ್‌ ಭೂಷಣ್‌ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ದೇಶದ ಪ್ರಮುಖ ಕುಸ್ತಿಪಟುಗಳು ಕಳೆದ ಏಪ್ರಿಲ್‌ನಿಂದಲೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಬುಧವಾರ ಭೇಟಿಯಾದ ನಂತರ ಕುಸ್ತಿಪಟುಗಳು ಒಂದು ವಾರ ಕಾಲ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಬ್ರಿಜ್‌ ಭೂಷಣ್‌ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ.

ಶನಿವಾರ ಪ್ರತಿಕ್ರಿಯೆ ನೀಡಿದ್ದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್‌, “ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತಿಭಟನಾನಿರತ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ. ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಬ್ರಿಜ್ ಭೂಷಣ್‌ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...