Homeಮುಖಪುಟ2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

- Advertisement -
- Advertisement -

“2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ” ಎಂದು ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಅಪ್ರಾಪ್ತ ವಯಸ್ಸಿನ ಕುಸ್ತಿಪಟು ಸೇರಿದಂತೆ ಏಳು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರುಗಳಿಗೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಏಪ್ರಿಲ್‌ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭವಾಗಿದೆ. ಇದರ ನಡುವೆ ಭಾನುವಾರ ನಡೆದ ರ್‍ಯಾಲಿಯಲ್ಲಿ ಅವರು ಮಾತನಾಡಿದ್ದಾರೆ. 2024ರ ಚುನಾವಣೆಗಾಗಿ ಬಿಜೆಪಿಯ ಮಹಾಸಂಪರ್ಕ್ ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರ್‍ಯಾಲಿ ಆಯೋಜನೆಗೊಂಡಿತ್ತು.

2024ರ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಬ್ರಿಜ್ ಭೂಷಣ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಲೋಕಸಭೆಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ನಾನು ಕೈಸರ್‌ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅವರ ವಿರುದ್ಧದ ಆರೋಪಗಳ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. “ನಾನು ಈ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇನೆ” ಎಂದಿದ್ದಾರೆ.

ಬ್ರಿಜ್ ಭೂಷಣ್ ಆರು ಬಾರಿ ಸಂಸದರಾಗಿದ್ದಾರೆ, ಐದು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಮತ್ತು ಒಮ್ಮೆ (2009 ರಲ್ಲಿ) ಎಸ್‌ಪಿ ಟಿಕೆಟ್‌ನಲ್ಲಿ ಗೆದ್ದಿದ್ದಾರೆ. ಅವರು ಗೊಂಡಾ ಲೋಕಸಭಾ ಕ್ಷೇತ್ರದಿಂದ 1991 ಮತ್ತು 1999ರಲ್ಲಿ ಮೊದಲ ಎರಡು ಚುನಾವಣೆಗಳನ್ನು ಗೆದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಇವರಿಗೆ ಬಲರಾಂಪುರ ಕ್ಷೇತ್ರದಿಂದ ಟಿಕೆಟ್ ನೀಡಿತು, ಗೊಂಡಾದಿಂದ ಘನಶ್ಯಾಮ್ ಶುಕ್ಲಾ ಅವರನ್ನು ನಿಲ್ಲಿಸಿತ್ತು. ಮತದಾನದ ದಿನ ರಸ್ತೆ ಅಪಘಾತದಲ್ಲಿ ಶುಕ್ಲಾ ಸಾವನ್ನಪ್ಪಿದ್ದರು.

ಸ್ಕ್ರಾಲ್‌ನೊಂದಿಗಿನ ಸಂದರ್ಭದಲ್ಲಿ ಒಮ್ಮೆ ಮಾತನಾಡಿದ್ದ ಬ್ರಿಜ್ ಭೂಷಣ್, “ನನ್ನ ವಿರೋಧಿಗಳು- ಇದು ಅಪಘಾತವಲ್ಲ ಕೊಲೆ ಎಂದು ವದಂತಿಗಳನ್ನು ಹರಡಿದರು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಕರೆ ಮಾಡಿ, ‘ಮಾರ್ವಾ ದಿಯಾ (ನೀವು ಅವನನ್ನು ಕೊಂದಿದ್ದೀರಿ) ಎಂದಿದ್ದರು” ಎಂದು ಸ್ಮರಿಸಿದ್ದರು.

ಇದು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಎಂದು ಬ್ರಿಜ್ ಭೂಷಣ್ ಅಭಿಪ್ರಾಯಪಡುತ್ತಾನೆ. ಪರಿಣಾಮವಾಗಿ, ಆತ 2008ರಲ್ಲಿ ಮಾಡಿದ್ದೇನು ಗೊತ್ತೆ? ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ವಿರುದ್ಧ ವಿರೋಧ ಪಕ್ಷ ವಿಶ್ವಾಸ ನಿರ್ಣಯ ಮಾಡಿದಾಗ ತಮ್ಮದೇ ಪಕ್ಷದ ವಿರುದ್ಧ ಅಡ್ಡ ಮತದಾನ ಮಾಡಿ ಸುದ್ದಿಯಾಗಿದ್ದರು. ಬಿಜೆಪಿ ಅವರನ್ನು ಹೊರಹಾಕಿತ್ತು, ಆದರೆ ಸಮಾಜವಾದಿ ಪಾರ್ಟಿ ಬ್ರಿಜ್‌ ಭೂಷಣ್‌ಗೆ ಬಾಗಿಲು ತೆರೆದಿತ್ತು.

2009ರಲ್ಲಿ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಮತ್ತೆ ಬಿಜೆಪಿ ಮರಳಿದರು. ಕೈಸರ್‌ಗಂಜ್‌ನಿಂದಲೇ 2019ರಲ್ಲೂ ಗೆದ್ದು ಸಂಸದನಾಗಿ ಮುಂದುವರಿದರು.

ಬಿಜೆಪಿ ಅಭ್ಯರ್ಥಿಯನ್ನು ಹತ್ಯೆ ಮಾಡಿರುವ ಬಗ್ಗೆ ಅಂದಿನ ಪ್ರಧಾನಿ ಭೂಷಣ್‌ ಮೇಲೆ ಶಂಕೆ ವ್ಯಕ್ತಪಡಿಸಿದ ಬಳಿಕವೂ ಅವರು ಬಿಜೆಪಿಯಲ್ಲೇ ಉಳಿದುಕೊಂಡಿರುವುದು ಗಮನಾರ್ಹ. ಅಡ್ಡ ಮತದಾನದ ನಂತರವೇ ಅವರು ಬಿಜೆಪಿಯಿಂದ ಉಚ್ಚಾಟಿತನಾಗಿದ್ದು!

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಇದ್ಯಾವುದೂ ಬ್ರಿಜ್ ಭೂಷಣ್‌ನ ರಾಜಕೀಯದ ಮೇಲೆ ಪರಿಣಾಮ ಬೀರಲಿಲ್ಲ. ಒಂದು ಕೊಲೆ ಮಾಡಿದ್ದೇನೆ ಎಂಬ ತಪ್ಪೊಪ್ಪಿಗೆ ಮತ್ತು ಆಗಿನ ಪ್ರಧಾನಿ ಮತ್ತೊಂದು ಕೊಲೆಯ ಆರೋಪ ಹೊರಿಸಿದರೂ, ಬಿಜೆಪಿ ಮತ್ತು ಪ್ರತಿಪಕ್ಷ ಎಸ್‌ಪಿ ಎರಡೂ ಬ್ರಿಜ್‌ಭೂಷಣ್‌ನನ್ನು ಅಪ್ಪಿಕೊಂಡಿವೆ! ಇವರ ಅಪರಾಧಗಳನ್ನು ಮುಚ್ಚಿಹಾಕಿವೆ. ಏಕೆಂದರೆ ಚುನಾವಣೆಯ ನಂತರ ಚುನಾವಣೆಯಲ್ಲಿ ಗೆಲ್ಲುವುದನ್ನು ಬ್ರಿಜ್ ಮುಂದುವರಿಸಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಕ್ರೀಡಾ ಸಂಘದ ಅಧ್ಯಕ್ಷರಾಗಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಬ್ರಿಜ್‌ ಭೂಷಣ್‌ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ದೇಶದ ಪ್ರಮುಖ ಕುಸ್ತಿಪಟುಗಳು ಕಳೆದ ಏಪ್ರಿಲ್‌ನಿಂದಲೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಬುಧವಾರ ಭೇಟಿಯಾದ ನಂತರ ಕುಸ್ತಿಪಟುಗಳು ಒಂದು ವಾರ ಕಾಲ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಬ್ರಿಜ್‌ ಭೂಷಣ್‌ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ.

ಶನಿವಾರ ಪ್ರತಿಕ್ರಿಯೆ ನೀಡಿದ್ದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್‌, “ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತಿಭಟನಾನಿರತ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ. ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಬ್ರಿಜ್ ಭೂಷಣ್‌ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...