Homeಕರ್ನಾಟಕಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ

ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ರಾಜ್ಯದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹು ಚರ್ಚೆಗೆ ಒಳಗಾಗಿತ್ತು. ಆ ಕುತೂಹಲಕ್ಕೆ ತೆರೆ ಎಳೆದಿರುವ ಅವರು ಇಂದು ಕೋಲಾರವೇ ಅಂತಿಮ ಎಂದಿದ್ದಾರೆ.

ದಲಿತ-ರೈತ ಚಳವಳಿಯ ಜಿಲ್ಲೆ

ರಾಜ್ಯದಲ್ಲಿ ಅತಿ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲಿ ಕೋಲಾರವೂ ಒಂದು. ಹಾಗಾಗಿಯೇ ಇಲ್ಲಿ ದಲಿತ ಚಳವಳಿ ಗರಿಗೆದರಿತ್ತು. ಹೋಬಳಿಗೊಂದು ವಸತಿ ಶಾಲೆ, ಹಾಸ್ಟೆಲ್ ಬೇಕು ಎಂಬ ಹಕ್ಕೊತ್ತಾಯದೊಂದಿಗೆ ಇಲ್ಲಿ ದೊಡ್ಡ ಹೋರಾಟವೇ ನಡೆದಿದೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಹಲವಾರು ಶಾಲೆಗಳು- ಹಾಸ್ಟೆಲ್‌ಗಳು ಆರಂಭವಾಗಿವೆ. ’ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ ನಾಗಸಂದ್ರ ಭೂ ಚಳವಳಿಯೆಂದೇ ಇತಿಹಾಸದಲ್ಲಿ ದಾಖಲಾಗಿದೆ.

ಅಹಿಂದ ಚಳವಳಿ

ಅಹಿಂದ ಚಳವಳಿಗೆ ಬುನಾದಿಯಾಗಿದ್ದು ಕೋಲಾರ ಜಿಲ್ಲೆ. 1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶ ಅದಕ್ಕೆ ಸಾಕ್ಷಿ. ಈಡಿಗ ಸಮುದಾಯಕ್ಕೆ ಸೇರಿದ್ದ ಜಾಲಪ್ಪನವರು ಕೋಲಾರದಲ್ಲಿ ಹಿಂದುಳಿದ ವರ್ಗಗಳ ಟ್ರಸ್ಟ್ ಮುಖಾಂತರ ದೇವರಾಜ ಅರಸು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಸ್ಥಾಪಿಸಿದ್ದರು. ಅದೇ ಕೋಲಾರದಲ್ಲಿ ಅಹಿಂದ ಸಮಾವೇಶ ಸಂಘಟಿತವಾದಾಗ ಅದರ ಪೂರ್ಣ ಹೊಣೆ ಹೊತ್ತು ಜಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯನವರು ಆ ಸಮಾವೇಶ ಉದ್ಘಾಟಿಸಿ ಚಳವಳಿಗೆ ಚಾಲನೆ ನೀಡಿದ್ದರು.

ಸದ್ಯದ ರಾಜಕೀಯ ಸ್ಥಿತಿಗತಿ

2018ರಲ್ಲಿ ಭಾರೀ ಅಂತರದಿಂದ ಗೆದ್ದು 4ನೇ ಬಾರಿ ಶಾಸಕನಾಗಿರುವ ಕೆ.ಶ್ರೀನಿವಾಸಗೌಡರು ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದರು. ಏಕೆ ಹೀಗೆ ಮಾಡಿದಿರಿ ಎಂಬ ಪತ್ರಕರ್ತರ ಪ್ರಶ್ನೆಗೆ “ಬಿಕಾಸ್ ಐ ಲವ್ ಕಾಂಗ್ರೆಸ್” ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಸದ್ಯ ಕಾಂಗ್ರೆಸ್ ಪಾಳಯದಲ್ಲಿರುವ ಅವರು ತಾನು ಕ್ಷೇತ್ರ ಬಿಟ್ಟುಕೊಡುತ್ತೇನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬರಬೇಕೆಂದು ಮನವಿ ಮಾಡಿದ್ದರು.

ಜಾತಿವಾರು ಜನಸಂಖ್ಯೆ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತಗಳು ಮೊದಲನೇ ಸ್ಥಾನದಲ್ಲಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿ 60,000ಕ್ಕೂ ಹೆಚ್ಚು ಮತಗಳಿವೆ ಎನ್ನಲಾಗುತ್ತಿದೆ. ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದು ಸುಮಾರು 40,000 ದಷ್ಟು ಮತಗಳಿವೆ. ಒಕ್ಕಲಿಗರು 30,000ದಷ್ಟು ಇದ್ದರೆ ಕುರುಬರು 20,000ಕ್ಕೂ ಹೆಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ: ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...