Homeಕರ್ನಾಟಕಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ

ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ರಾಜ್ಯದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹು ಚರ್ಚೆಗೆ ಒಳಗಾಗಿತ್ತು. ಆ ಕುತೂಹಲಕ್ಕೆ ತೆರೆ ಎಳೆದಿರುವ ಅವರು ಇಂದು ಕೋಲಾರವೇ ಅಂತಿಮ ಎಂದಿದ್ದಾರೆ.

ದಲಿತ-ರೈತ ಚಳವಳಿಯ ಜಿಲ್ಲೆ

ರಾಜ್ಯದಲ್ಲಿ ಅತಿ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲಿ ಕೋಲಾರವೂ ಒಂದು. ಹಾಗಾಗಿಯೇ ಇಲ್ಲಿ ದಲಿತ ಚಳವಳಿ ಗರಿಗೆದರಿತ್ತು. ಹೋಬಳಿಗೊಂದು ವಸತಿ ಶಾಲೆ, ಹಾಸ್ಟೆಲ್ ಬೇಕು ಎಂಬ ಹಕ್ಕೊತ್ತಾಯದೊಂದಿಗೆ ಇಲ್ಲಿ ದೊಡ್ಡ ಹೋರಾಟವೇ ನಡೆದಿದೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಹಲವಾರು ಶಾಲೆಗಳು- ಹಾಸ್ಟೆಲ್‌ಗಳು ಆರಂಭವಾಗಿವೆ. ’ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ ನಾಗಸಂದ್ರ ಭೂ ಚಳವಳಿಯೆಂದೇ ಇತಿಹಾಸದಲ್ಲಿ ದಾಖಲಾಗಿದೆ.

ಅಹಿಂದ ಚಳವಳಿ

ಅಹಿಂದ ಚಳವಳಿಗೆ ಬುನಾದಿಯಾಗಿದ್ದು ಕೋಲಾರ ಜಿಲ್ಲೆ. 1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶ ಅದಕ್ಕೆ ಸಾಕ್ಷಿ. ಈಡಿಗ ಸಮುದಾಯಕ್ಕೆ ಸೇರಿದ್ದ ಜಾಲಪ್ಪನವರು ಕೋಲಾರದಲ್ಲಿ ಹಿಂದುಳಿದ ವರ್ಗಗಳ ಟ್ರಸ್ಟ್ ಮುಖಾಂತರ ದೇವರಾಜ ಅರಸು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಸ್ಥಾಪಿಸಿದ್ದರು. ಅದೇ ಕೋಲಾರದಲ್ಲಿ ಅಹಿಂದ ಸಮಾವೇಶ ಸಂಘಟಿತವಾದಾಗ ಅದರ ಪೂರ್ಣ ಹೊಣೆ ಹೊತ್ತು ಜಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯನವರು ಆ ಸಮಾವೇಶ ಉದ್ಘಾಟಿಸಿ ಚಳವಳಿಗೆ ಚಾಲನೆ ನೀಡಿದ್ದರು.

ಸದ್ಯದ ರಾಜಕೀಯ ಸ್ಥಿತಿಗತಿ

2018ರಲ್ಲಿ ಭಾರೀ ಅಂತರದಿಂದ ಗೆದ್ದು 4ನೇ ಬಾರಿ ಶಾಸಕನಾಗಿರುವ ಕೆ.ಶ್ರೀನಿವಾಸಗೌಡರು ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದರು. ಏಕೆ ಹೀಗೆ ಮಾಡಿದಿರಿ ಎಂಬ ಪತ್ರಕರ್ತರ ಪ್ರಶ್ನೆಗೆ “ಬಿಕಾಸ್ ಐ ಲವ್ ಕಾಂಗ್ರೆಸ್” ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಸದ್ಯ ಕಾಂಗ್ರೆಸ್ ಪಾಳಯದಲ್ಲಿರುವ ಅವರು ತಾನು ಕ್ಷೇತ್ರ ಬಿಟ್ಟುಕೊಡುತ್ತೇನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬರಬೇಕೆಂದು ಮನವಿ ಮಾಡಿದ್ದರು.

ಜಾತಿವಾರು ಜನಸಂಖ್ಯೆ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತಗಳು ಮೊದಲನೇ ಸ್ಥಾನದಲ್ಲಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿ 60,000ಕ್ಕೂ ಹೆಚ್ಚು ಮತಗಳಿವೆ ಎನ್ನಲಾಗುತ್ತಿದೆ. ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದು ಸುಮಾರು 40,000 ದಷ್ಟು ಮತಗಳಿವೆ. ಒಕ್ಕಲಿಗರು 30,000ದಷ್ಟು ಇದ್ದರೆ ಕುರುಬರು 20,000ಕ್ಕೂ ಹೆಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ: ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...