Homeಮುಖಪುಟ'ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ' | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ...

‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ, ನಿಂಬೆ ಹಣ್ಣು ಕತ್ತರಿಸಿ ಮಾಟ, ಮಂತ್ರದ ಮೂಲಕ ಅವರ ದೆವ್ವ ಬಿಡಿಸುತ್ತೇನೆ” ಎಂದು ಛತ್ತೀಸ್‌ಗಢದ ಬಿಜೆಪಿ ಸಂಸದ ಭೋಜರಾಜ್ ನಾಗ್ ಹೇಳಿದ್ದಾರೆ.

ವರದಿಗಳ ಪ್ರಕಾರ, ತಮ್ಮ ಲೋಕಸಭಾ ಕ್ಷೇತ್ರ ಕಾಂಕೇರ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ, ಜಲ ಜೀವನ್ ಮಿಷನ್ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಸಂಸದ ನಾಗ್, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಈ ಹಿಂದೆಯೂ ಹೇಳಿದ್ದೇನೆ, ಈಗ ಮತ್ತೊಮ್ಮೆ ಹೇಳುತ್ತಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಕೆಲವರು (ಅಧಿಕಾರಿಗಳು) ನಿರ್ಲಕ್ಷ್ಯದ ಮೂಲಕ ಹಾಳು ಮಾಡುತ್ತಿದ್ದಾರೆ. ಅವರು ಸರಿಯಾಗಿ ಜವಾಬ್ದಾರಿ ನಿರ್ವಹಿಸದಿದ್ದರೆ, ಪ್ರತಿಯೊಬ್ಬರ ಹೆಸರಿನಲ್ಲೂ ನಿಂಬೆ ಹಣ್ಣು ಕತ್ತರಿಸುತ್ತೇನೆ” ಎಂದು ಸಂಸದ ನಾಗ್ ಹೇಳಿದ್ದಾರೆ.

“ನಾನು ಬೈಗಾ (ಮಾಟ, ಮಂತ್ರದ ಶಕ್ತಿಯ ಮೂಲಕ ಆಧ್ಯಾತ್ಮಿಕ ಚಿಕಿತ್ಸೆ ನೀಡುವ ಅಥವಾ ದೆವ್ವ, ಭೂತ ಬಿಡಿಸುವ ಸಂಪ್ರದಾಯ ಅನುಸರಿಸುವ ಬುಡಕಟ್ಟು ಸಮುದಾಯ) ಸಮುದಾಯದವನು” ಎಂದು ಈ ಹಿಂದೆಯೊಮ್ಮೆ ಸಂಸದ ನಾಗ್ ಅವರು ಹೇಳಿದ್ದರು ಎಂದು ವರದಿಗಳು ತಿಳಿಸಿವೆ.

ನಾಗ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹಿರಿಯ ವಕ್ತಾರ ಧನಂಜಯ್ ಸಿಂಗ್ ಠಾಕೂರ್ “ಬಿಜೆಪಿಗೆ ಸಂಸದ ಈ ಹೇಳಿಕೆಗಿಂತ ಉತ್ತಮವಾದ ಪ್ರಮಾಣಪತ್ರ ಯಾವುದಿದೆ? ಬಿಜೆಪಿ ಸಂಸದರು ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದರ, ಪರಿಣಾಮವನ್ನು ಜನರು ಅನುಭವಿಸುತ್ತಿದ್ದಾರೆ” ಎಂದಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತು ಕೃಷಿ ಖಾತೆಯ ರಾಜ್ಯ ಸಚಿವ ರಾಮ್‌ವಿಚಾರ್ ನೇತಮ್, “ರಾಜ್ಯದ ಆಡಳಿತ ಯಂತ್ರ ಅಥವಾ ಅಧಿಕಾರಿಗಳಿಂದ ಕಾಂಗ್ರೆಸ್‌ ಭೂತವನ್ನು ಓಡಿಸುವುದಾಗಿ ಸಂಸದರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಅಧಿಕಾರಿಗಳು ಬದ್ದತೆಯಿಂದ ಜನರಿಗಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

“ಜನಪ್ರತಿನಿಧಿಯೊಬ್ಬರು ಇಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಸಂಗತಿ. ಭಾರತೀಯ ಜನತಾ ಪಕ್ಷದೊಳಗೆ ಮೂಢನಂಬಿಕೆ ಆಳವಾಗಿದೆ. ಕೊರೋನಾ ಓಡಿಸಲು ಚಪ್ಪಾಳೆ ತಟ್ಟಲು ಮತ್ತು ತಟ್ಟೆ ಬಡಿಯಲು ಪ್ರಧಾನಿ ಮೋದಿ ಸೂಚಿಸಿದ್ದರು. ಆ ಮೌಢ್ಯತೆ ಈಗ ಅವರ ಅನುಯಾಯಿಗಳಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ಛತ್ತೀಸ್‌ಗಢದ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ವಾಗ್ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮಾಟಮಂತ್ರಕ್ಕೆ ಸಂಬಂಧಿಸಿದಂತೆ ಕೊಲೆಗಳು ಆಗಾಗ ವರದಿಯಾಗುತ್ತಲೇ ಇರುತ್ತದೆ. ಕಳೆದ ತಿಂಗಳು, ಬಲೋದಬಝಾರ್-ಭಟಪರಾ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ, ಅವರ ಇಬ್ಬರು ಸಹೋದರಿಯರು ಮತ್ತು 11 ತಿಂಗಳ ಸೋದರಳಿಯನ ಕೊಲೆ ನಡೆದಿತ್ತು. ಇದರ ಹಿಂದೆ ಸಂಬಂಧಿಕರೊಬ್ಬರು ಮಾಟ ಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ.

ಮಾಟ, ಮಂತ್ರ, ದೆವ್ವ ಬಿಡಿಸುವುದು ಇತ್ಯಾದಿ ಕೃತ್ಯಗಳನ್ನು ತಡೆಗಟ್ಟಲು ಛತ್ತೀಸ್‌ಗಢದಲ್ಲಿ 2005ರಲ್ಲಿ ತೋನಾಹಿ ಪ್ರತದ್ನಾ ನಿವಾರಣ್ ಕಾಯ್ದೆ ಜಾರಿಗೆ ತರಲಾಗಿದೆ. ಆದರೂ, ಅಂತಹ ಪ್ರಕರಣಗಳು ನಡೆಯುತ್ತಲೇ ಇವೆ.

ಇದನ್ನೂ ಓದಿ : ಮಹಾರಾಷ್ಟ್ರ | 200 ಕ್ಷೇತ್ರಗಳಲ್ಲಿ ಮಹಾ ವಿಕಾಸ್ ಅಘಾಡಿ ಒಮ್ಮತ – ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...