Homeಮುಖಪುಟ'ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ' | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ...

‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ, ನಿಂಬೆ ಹಣ್ಣು ಕತ್ತರಿಸಿ ಮಾಟ, ಮಂತ್ರದ ಮೂಲಕ ಅವರ ದೆವ್ವ ಬಿಡಿಸುತ್ತೇನೆ” ಎಂದು ಛತ್ತೀಸ್‌ಗಢದ ಬಿಜೆಪಿ ಸಂಸದ ಭೋಜರಾಜ್ ನಾಗ್ ಹೇಳಿದ್ದಾರೆ.

ವರದಿಗಳ ಪ್ರಕಾರ, ತಮ್ಮ ಲೋಕಸಭಾ ಕ್ಷೇತ್ರ ಕಾಂಕೇರ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ, ಜಲ ಜೀವನ್ ಮಿಷನ್ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಸಂಸದ ನಾಗ್, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಈ ಹಿಂದೆಯೂ ಹೇಳಿದ್ದೇನೆ, ಈಗ ಮತ್ತೊಮ್ಮೆ ಹೇಳುತ್ತಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಕೆಲವರು (ಅಧಿಕಾರಿಗಳು) ನಿರ್ಲಕ್ಷ್ಯದ ಮೂಲಕ ಹಾಳು ಮಾಡುತ್ತಿದ್ದಾರೆ. ಅವರು ಸರಿಯಾಗಿ ಜವಾಬ್ದಾರಿ ನಿರ್ವಹಿಸದಿದ್ದರೆ, ಪ್ರತಿಯೊಬ್ಬರ ಹೆಸರಿನಲ್ಲೂ ನಿಂಬೆ ಹಣ್ಣು ಕತ್ತರಿಸುತ್ತೇನೆ” ಎಂದು ಸಂಸದ ನಾಗ್ ಹೇಳಿದ್ದಾರೆ.

“ನಾನು ಬೈಗಾ (ಮಾಟ, ಮಂತ್ರದ ಶಕ್ತಿಯ ಮೂಲಕ ಆಧ್ಯಾತ್ಮಿಕ ಚಿಕಿತ್ಸೆ ನೀಡುವ ಅಥವಾ ದೆವ್ವ, ಭೂತ ಬಿಡಿಸುವ ಸಂಪ್ರದಾಯ ಅನುಸರಿಸುವ ಬುಡಕಟ್ಟು ಸಮುದಾಯ) ಸಮುದಾಯದವನು” ಎಂದು ಈ ಹಿಂದೆಯೊಮ್ಮೆ ಸಂಸದ ನಾಗ್ ಅವರು ಹೇಳಿದ್ದರು ಎಂದು ವರದಿಗಳು ತಿಳಿಸಿವೆ.

ನಾಗ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹಿರಿಯ ವಕ್ತಾರ ಧನಂಜಯ್ ಸಿಂಗ್ ಠಾಕೂರ್ “ಬಿಜೆಪಿಗೆ ಸಂಸದ ಈ ಹೇಳಿಕೆಗಿಂತ ಉತ್ತಮವಾದ ಪ್ರಮಾಣಪತ್ರ ಯಾವುದಿದೆ? ಬಿಜೆಪಿ ಸಂಸದರು ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದರ, ಪರಿಣಾಮವನ್ನು ಜನರು ಅನುಭವಿಸುತ್ತಿದ್ದಾರೆ” ಎಂದಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತು ಕೃಷಿ ಖಾತೆಯ ರಾಜ್ಯ ಸಚಿವ ರಾಮ್‌ವಿಚಾರ್ ನೇತಮ್, “ರಾಜ್ಯದ ಆಡಳಿತ ಯಂತ್ರ ಅಥವಾ ಅಧಿಕಾರಿಗಳಿಂದ ಕಾಂಗ್ರೆಸ್‌ ಭೂತವನ್ನು ಓಡಿಸುವುದಾಗಿ ಸಂಸದರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಅಧಿಕಾರಿಗಳು ಬದ್ದತೆಯಿಂದ ಜನರಿಗಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

“ಜನಪ್ರತಿನಿಧಿಯೊಬ್ಬರು ಇಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಸಂಗತಿ. ಭಾರತೀಯ ಜನತಾ ಪಕ್ಷದೊಳಗೆ ಮೂಢನಂಬಿಕೆ ಆಳವಾಗಿದೆ. ಕೊರೋನಾ ಓಡಿಸಲು ಚಪ್ಪಾಳೆ ತಟ್ಟಲು ಮತ್ತು ತಟ್ಟೆ ಬಡಿಯಲು ಪ್ರಧಾನಿ ಮೋದಿ ಸೂಚಿಸಿದ್ದರು. ಆ ಮೌಢ್ಯತೆ ಈಗ ಅವರ ಅನುಯಾಯಿಗಳಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ಛತ್ತೀಸ್‌ಗಢದ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ವಾಗ್ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮಾಟಮಂತ್ರಕ್ಕೆ ಸಂಬಂಧಿಸಿದಂತೆ ಕೊಲೆಗಳು ಆಗಾಗ ವರದಿಯಾಗುತ್ತಲೇ ಇರುತ್ತದೆ. ಕಳೆದ ತಿಂಗಳು, ಬಲೋದಬಝಾರ್-ಭಟಪರಾ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ, ಅವರ ಇಬ್ಬರು ಸಹೋದರಿಯರು ಮತ್ತು 11 ತಿಂಗಳ ಸೋದರಳಿಯನ ಕೊಲೆ ನಡೆದಿತ್ತು. ಇದರ ಹಿಂದೆ ಸಂಬಂಧಿಕರೊಬ್ಬರು ಮಾಟ ಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ.

ಮಾಟ, ಮಂತ್ರ, ದೆವ್ವ ಬಿಡಿಸುವುದು ಇತ್ಯಾದಿ ಕೃತ್ಯಗಳನ್ನು ತಡೆಗಟ್ಟಲು ಛತ್ತೀಸ್‌ಗಢದಲ್ಲಿ 2005ರಲ್ಲಿ ತೋನಾಹಿ ಪ್ರತದ್ನಾ ನಿವಾರಣ್ ಕಾಯ್ದೆ ಜಾರಿಗೆ ತರಲಾಗಿದೆ. ಆದರೂ, ಅಂತಹ ಪ್ರಕರಣಗಳು ನಡೆಯುತ್ತಲೇ ಇವೆ.

ಇದನ್ನೂ ಓದಿ : ಮಹಾರಾಷ್ಟ್ರ | 200 ಕ್ಷೇತ್ರಗಳಲ್ಲಿ ಮಹಾ ವಿಕಾಸ್ ಅಘಾಡಿ ಒಮ್ಮತ – ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...